ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಬೆಂಗಳೂರು: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Join Our Telegram: https://t.me/dcgkannada

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ,ಆಚೆ ನಾಡಿದ್ದು ಕರ್ನಾಟಕ. ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ (Pramod mutalik) ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಶ್ರೀಮತಿ ಇಂದಿರಾ ಗಾಂಧಿಯವರು ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಏನೂ ಮಾಡ್ತಾ ಇಲ್ಲ.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ.

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ