ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಬೆಂಗಳೂರು: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Join Our Telegram: https://t.me/dcgkannada

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ,ಆಚೆ ನಾಡಿದ್ದು ಕರ್ನಾಟಕ. ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ (Pramod mutalik) ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಶ್ರೀಮತಿ ಇಂದಿರಾ ಗಾಂಧಿಯವರು ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಏನೂ ಮಾಡ್ತಾ ಇಲ್ಲ.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ.

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600