ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಬೆಂಗಳೂರು: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Join Our Telegram: https://t.me/dcgkannada

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ,ಆಚೆ ನಾಡಿದ್ದು ಕರ್ನಾಟಕ. ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ (Pramod mutalik) ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಶ್ರೀಮತಿ ಇಂದಿರಾ ಗಾಂಧಿಯವರು ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಏನೂ ಮಾಡ್ತಾ ಇಲ್ಲ.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ.

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ