ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಬೆಂಗಳೂರು: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Join Our Telegram: https://t.me/dcgkannada

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ,ಆಚೆ ನಾಡಿದ್ದು ಕರ್ನಾಟಕ. ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ (Pramod mutalik) ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಶ್ರೀಮತಿ ಇಂದಿರಾ ಗಾಂಧಿಯವರು ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಏನೂ ಮಾಡ್ತಾ ಇಲ್ಲ.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ.

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

Latest News

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್ ಕುಂಬಾರವಾಡಿ ಹಾಗೂ ಬಷಿರಅಹ್ಮದ್ ಕಡದರಾಳ ಅವರ ಕುಟುಂಬಕ್ಕೆ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಆರ್ಥಿಕ ನೆರವು ನೀಡಿದರು. ಇಬ್ಬರು ಸಂತ್ರಸ್ಥರ ಕುಟುಂಬಕ್ಕೆ ಭೇಟಿ ಮಾಡಿದ ಅಧ್ಯಕ್ಷ ಅಸ್ಕಿ ಅವರು ಸಾಂತ್ವನ ಹೇಳಿ ಒಂದು ಲಕ್ಷ ರೂ. ಧನ ಸಹಾಯ ಮಾಡಿದರು. ಈ ಸಮಯದಲ್ಲಿ ತಾಳಿಕೋಟಿ ಧಾರ್ಮಿಕ ಮುಖಂಡ ಸೈಯದ ಶಕೀಲಅಹ್ಮದ್ ಖಾಜಿ, ಗ್ಯಾರಂಟಿ ಸಮಿತಿ

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ವೇಳೆ ಅನುದಾನ ದುರುಪಯೋಗದ ಆರೋಪದ ಮೇಲೆ ಅಧಿಕಾರಿ ವಿಜಯಾ ಮುದಗಲ್ ಅವರನ್ನು ಅಮಾನತುಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ ಆದೇಶಿಸಿದ್ದಾರೆ. ಪ್ರಕರಣವೇನು : ಸನ್ 2019-20 ರಿಂದ 2021-22ನೇ ಅವಧಿಯ ಯರಝರಿ ಗ್ರಾಮ ಪಂಚಾಯಿತಿ ವಿಜಯಪುರ ಜಿಲ್ಲೆಯಲ್ಲಿ ಎಸ್.ಸಿ/ಎಸ್ಟಿ ಜನಾಂಗದ ಅಭಿವೃದ್ಧಿಗಾಗಿ ಮೀಸಲಿರಿಸಿದ