ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಬೆಂಗಳೂರು: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Join Our Telegram: https://t.me/dcgkannada

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ,ಆಚೆ ನಾಡಿದ್ದು ಕರ್ನಾಟಕ. ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ (Pramod mutalik) ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಶ್ರೀಮತಿ ಇಂದಿರಾ ಗಾಂಧಿಯವರು ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಏನೂ ಮಾಡ್ತಾ ಇಲ್ಲ.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ.

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ