ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಹಿಂದೂಗಳ ಮಾರಣಹೋಮ ಆಗ್ತಿದ್ರೂ ಬಾಯ್ಬಿಟ್ತಿಲ್ಲ ಮೋದಿ: BJP ಕಚೇರಿ ಎದುರೇ ಮುತಾಲಿಕ್ ವಾಗ್ದಾಳಿ (ವಿಡಿಯೋ ನೋಡಿ)

ಬೆಂಗಳೂರು: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ ಮಂದಿರಗಳ ಮೇಲಿನ ದಾಳಿ ಕುರಿತು ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Join Our Telegram: https://t.me/dcgkannada

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ,ಆಚೆ ನಾಡಿದ್ದು ಕರ್ನಾಟಕ. ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ (Pramod mutalik) ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಶ್ರೀಮತಿ ಇಂದಿರಾ ಗಾಂಧಿಯವರು ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಏನೂ ಮಾಡ್ತಾ ಇಲ್ಲ.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ.

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ