ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ ನಿಂತುಕೊoಡು ಈಶ್ವರ ಲಿಂಗದ ದರ್ಶನ ಪಡೆದುಕೊಂಡು ಪುನೀತರಾದರು.

ದಿನವೀಡಿ ಉಪವಾಸ ವ್ರತ ಆಚರಿಸಿದ ಶಿವನ ಆರಾಧಕರು ಸಂಜೆ ವೇಳೆ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸಿ ಶಿವಲಿಂಗಕ್ಕೆ ನೈವೇದ್ಯ ಅರ್ಪಿಸಿ ಉಪವಾಸ ವ್ರತ ಅಂತ್ಯಗೊಳಿಸಿದರು.

ಪಟ್ಟಣದ ಕಿಲ್ಲಾದ ಹಳೇ ಈಶ್ವರಲಿಂಗ ದೇವಸ್ಥಾನ, ವಿಜಯ ವಿಠ್ಠಲ ಮಂದಿರ,ಕಾಶೀ ವಿಶ್ವನಾಥ ದೇವಸ್ಥಾನ,ಮರುಳಸಿದ್ದಪ್ಪನ ಗುಡಿ, ಹಳೇ ಕೋರ್ಟ್ ಆವರಣದಲ್ಲಿರುವ ಈಶ್ವರ ದೇವಸ್ಥಾನ, ಹೆಸ್ಕಾಂ ಕಚೇರಿ ಆವರಣದಲ್ಲಿರುವ ಶಿವದೇವಾಲಯದಲ್ಲಿ ಭಕ್ತರು ಸರದಿ ಸಾಲಿನಲ್ಲಿ ನಿಂತುಕೊAಡು ದರ್ಶನ ಪಡೆದುಕೊಂಡರು.

ಆಯಾ ದೇವಸ್ಥಾನಗಳಲ್ಲಿ ಉಪವಾಸ ಅಂತ್ಯಗೊಳಿಸಿದ ಭಕ್ತರಿಗೆ ಶರಬತ್,ಪಾನಕ,ಅಲ್ಪೋಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಹಳೇ ಕೋರ್ಟ್ ಆವರಣದಲ್ಲಿ ಪವಾಡಶೆಟ್ಟಿ ಕುಟುಂಬದವರು ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕೈಗೊಂಡಿದ್ದರು.

ಓoಶಾoತಿ ಭವನದಲ್ಲಿ ಡಿಜಿಟಲ್ ಮಾದರಿ ಈಶ್ವರ ಶಿವಲಿಂಗವನ್ನು ಪ್ರತಿಷ್ಠಾನೆ ಮಾಡಲಾಗಿತ್ತು.ಪ್ರೊಜೆಕ್ಟರ್ ಮೂಲಕ ಬೆಳಕು ಹಾಯಿಸಿ ದೇಶದ ವಿವಿಧ ಶಿವಲಿಂಗಗಳಿಗೆ ನಡೆಯುವ ಅಭಿಷೇಕವನ್ನು ತೋರಿಸುವಂತೆ ವಿಶೇಷ ದೃಶ್ಯವಾಳಿ ರೂಪಿಸಲಾಗಿತ್ತು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನ ದರ್ಶನ ಪಡೆದುಕೊಂಡರು.ಇದಲ್ಲದೇ ಇನ್ನುಳಿದ ದೇವಸ್ಥಾನಗಳಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನ ಹೆಸರಿನಲ್ಲಿ ಆರ್ಚನೆ,ಪೂಜೆ ನಡೆಸಿದರು.ಬಹುತೇಕ ಎಲ್ಲ ದೇವಾಲಯಗಳಲ್ಲೂ ಶಿವನಾಮ ಜಪಿಸುತ್ತಿರುವುದು ಕಂಡು ಬಂದಿತು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.