ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾರ್ಟರ್ಸ್ನ ಸ್ಥಳವನ್ನು ಶನಿವಾರ ಪೊಲೀಸ್ ಅಧಿಕಾರಿಗಳು,ನಗರದ ಗಣ್ಯರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸರಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಗ್ರಾಮೀಣ ಪೊಲೀಸ್ ಠಾಣೆ ಆರಂಭಿಸಲಾಗುವುದು ಎಂದು ತಿಳಿಸಿದೆ.ನಾನು ಯಾವ ಠಾಣೆ ಎಲ್ಲಿರಬೇಕು ಎಂಬುದನ್ನು ಹೇಳುವುದಿಲ್ಲ.ಕೆಲವು ಇಲಾಖೆಗಳ ಆಡಳಿತದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ.ಇಲ್ಲಿನ ಜಾಗೆಯನ್ನು ಪೊಲೀಸ್ ಇಲಾಖೆಯವರಿಗೆ ನೀಡಲಾಗುತ್ತಿದ್ದು ಅದನ್ನು ಸಮರ್ಪಕ ರೀತಿಯಲ್ಲಿ ತಾಲ್ಲೂಕು,ನಗರದ ಜನರಿಗೆ ಅನುಕೂಲ ಆಗುವಂತೆ ಬಳಕೆ ಮಾಡಿಕೊಳ್ಳಲು ತಿಳಿಸಿದ್ದೇನೆ ಎಂದು ಹೇಳಿದರು.

ಅಬಕಾರಿ ಹಾಗೂ ಪೊಲೀಸ್ ಇಲಾಖೆ ಮಧ್ಯೆ ಜಾಗೆಯ ಕುರಿತು ಇದ್ದ ವಿವಾದದ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ಈ ಹಿಂದೆ ಅಬಕಾರಿ ಪೊಲೀಸ್ ಎರಡೂ ಇಲಾಖೆಗಳು ಒಂದೆ ಆಗಿದ್ದವು.ನಾನು ಶಾಸಕನಾಗಿದ್ದ ಅವಧಿಯಲ್ಲಿ ಹಳೇ ತಹಶೀಲ್ದಾರ ಕಚೇರಿಯಲ್ಲಿ ಪೊಲೀಸ್ ಠಾಣೆ ಆರಂಭಿಸಲಾಗಿತ್ತು.ಸದ್ಯದ ಈ ಜಾಗೆಯಲ್ಲಿ ಅಬಕಾರಿ ಇಲಾಖೆಯವರು ಕೆಲಸ ಮಾಡುವಂತೆ ತಿಳಿಸಿದ್ದೆ.ಬದಲಾದ ಸನ್ನಿವೇಶದಲ್ಲಿ ಎರಡು ಇಲಾಖೆಗಳು ಪ್ರತ್ಯೇಕಗೊಂಡಿದ್ದು ಊರಿನ ಹೃದಯ ಭಾಗವಾಗಿರುವ ಈ ಸ್ಥಳದಲ್ಲಿ ಜನರ ಭದ್ರತೆ,ಸುರಕ್ಷತೆ ದೃಷ್ಟಿಯಿಂದ ಪೊಲೀಸ್ ಠಾಣೆಯನ್ನು ಇಲ್ಲಿ ಆರಂಭಿಸುವುದು ಸೂಕ್ತ ಎಂದು ನಿರ್ಧರಿಸಿ ಈ ತೀರ್ಮಾನ ಮಾಡಲಾಗಿದೆ.ಅಧಿಕಾರಿಗಳು,ಗುತ್ತಿಗೆದಾರರ ಮನವೊಲಿಸಿ ಸಾಧ್ಯವಾದಷ್ಟು ಬೇಗನೇ ಇಲ್ಲಿ ಠಾಣೆ ಆರಂಭಕ್ಕೆ ಕ್ರಮ ಕೈಗೊಳ್ಳಲು ಇಲಾಖೆಯವರಿಗೆ ತಿಳಿಸಿರುವುದಾಗಿ ಹೇಳಿದರು.

ಪಿಎಸ್‌ಐ ಸಂಜಯ ತಿಪರೆಡ್ಡಿ ಮಾತನಾಡಿ, ಇಳಕಲ್,ಇಂಡಿ ಭಾಗದಲ್ಲಿ ಪೊಲೀಸ್ ಠಾಣೆಗಳು ಬಸ್ ನಿಲ್ದಾಣದ ಸಮೀಪದಲ್ಲಿಯೇ ಇವೆ.ಈಗಿರುವ ಮುದ್ದೇಬಿಹಾಳ ಪೊಲೀಸ್ ಠಾಣೆಯನ್ನು ಗ್ರಾಮೀಣ ಠಾಣೆಗೆ ಬಿಟ್ಟುಕೊಟ್ಟು ಬಸ್ ನಿಲ್ದಾಣದ ಪಕ್ಕದಲ್ಲಿರುವ ಈ ಜಾಗೆಯಲ್ಲಿ ಮುದ್ದೇಬಿಹಾಳದ ನಗರ ಪೊಲೀಸ್ ಠಾಣೆಯನ್ನು ಆರಂಭಿಸಿದರೆ ಜನರಿಗೆ ಅನುಕೂಲವಾಗಲಿದ್ದು ಈ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಗಣ್ಯರಾದ ಎಂ.ಬಿ.ನಾವದಗಿ,ಕೆಪಿಸಿಸಿ ಸದಸ್ಯ ರಮೇಶ ಓಸ್ವಾಲ್,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸದು ಮಠ, ಡಾ.ವಿಜಯಕುಮಾರ ಗೂಳಿ,ಲಕ್ಷö್ಮಣ ಲಮಾಣಿ ಮೊದಲಾದವರು ಇದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,