The recent murder case in Narayanpur police station is a new twist

ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣ ಹೊಸ ಟ್ವಿಸ್ಟ್

ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣ ಹೊಸ ಟ್ವಿಸ್ಟ್

ನಾರಾಯಣಪುರ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಂಡಬಾವಿ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸೂಕ್ಷ್ಮವಾಗಿ ಕೊಲೆ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸ್ ಇಲಾಖೆ ಅಧಿಕಾರಿಗಳು ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಯಾದಗಿರಿ ಎಸ್‌ಪಿಯವರ ಆದೇಶದಂತೆ, ಸಿಪಿಐ ರವಿಕುಮಾರ್ ಹುಣಸಗಿ ವೃತ್ತ ಇವರ ತನಿಖೆ ಕೈಗೊಂಡು ಸತ್ಯಾಸತ್ಯತೆಯನ್ನು ಬಯಲಿಗೆಳೆದಿದ್ದಾರೆ.

ಮೃತ ವ್ಯಕ್ತಿಯ ಹೆಂಡತಿಯಾದ ರೇಣುಕಮ್ಮ ಗಂಡ ಗೌಡಪ್ಪ ಚವನಬಾವಿ ಸಾ. ಜೋಗಂಡಬಾವಿ ಅವರು ನೀಡಿದ ದೂರಿನ ಮೇರೆಗೆ ದಿನಾಂಕ 22 -4 – 2025 ರಂದು ಆರೋಪಿತರಾದ ನೀಲಪ್ಪ ತಂದೆ ಯಮನಪ್ಪ ಹಾಗೂ ಇನ್ನಿತರರು ಸಾ. ಜೋಗಂಡಬಾವಿ ಹಳೆಯ ವೈರತ್ವದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದರು.

ಈ ಕುರಿತು ತನಿಖೆ ಮುಂದುವರೆಸಿದ ಅಧಿಕಾರಿಗಳು ನಿಜ ಘಟನೆಯನ್ನು ಅರಿತು ದಿಗ್ಭ್ರಮೆಗೊಳಗಾಗಿದ್ದಾರೆ. ಗೌಡಪ್ಪನ ಅಕ್ಕನ ಮಗನಾದ ಸರಿಸುಮಾರು 14 ವರ್ಷದ ಬಾಲಕ (ಹೆಸರು ನಮೂದಿಸುವುದಿಲ್ಲ) ಬಡಿಗೆಯಿಂದ ತಲೆ ಹಿಂಬದಿಯಲ್ಲಿ ಹೊಡೆದಿರುತ್ತಾನೆ. ಈ ಪ್ರಕರಣವು ಕೆಂಭಾವಿ ಠಾಣೆ ವ್ಯಾಪ್ತಿಯ ಅಗತೀರ್ಥ ಸೀಮಾಂತರದಲ್ಲಿ ಕುರಿ ದೊಡ್ಡಿಯನ್ನು ಹಾಕಿರುತ್ತಾರೆ ಅಳಿಯ ಮತ್ತು ಮಾವನ ಮದ್ಯ ಯಾವುದೋ ವಿಷಯಕ್ಕೆ ಜಗಳವಾಡುತ್ತಾರೆ. ಆ ಜಗಳದಲ್ಲಿ ಅಳಿಯ ಮಾವನಿಗೆ ತಲೆ ಹಿಂಬದಿಯಲ್ಲಿ ಕಟ್ಟಿಗೆಯಿಂದ ಹೊಡೆದಿರುತ್ತಾನೆ. ಅದರೆ, ಈ ವಿಚಾರವನ್ನು ಸುಳ್ಳು ಕಟ್ಟುಕಥೆ ಕಟ್ಟಿ ಮತ್ತೊಬ್ಬರ ಮೇಲೆ ಪ್ರಕರಣ ದಾಖಲೆಯನ್ನು ಮಾಡಿಸಿರುತ್ತಾರೆ. ಈ ಘಟನೆಯಲ್ಲಿ ಕುಟುಂಬಸ್ಥರೇ ಆರೋಪಿಗಳಾಗಿದ್ದಾರೆ.

ಈ ಘಟನೆಯು ದಿನಾಂಕ 19- 4- 2025 ರಂದು ಸುಮಾರು 9:00 ಗಂಟೆ ರಾತ್ರಿ ವೇಳೆಯಲ್ಲಿ ನಡೆದಿದೆ. ಕುಟುಂಬಸ್ಥರೇ ಕೊಲೆ ಮಾಡಿ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಸಾಯಂಕಾಲ 4 ಗಂಟೆವರೆಗೆ ಶವವನ್ನಿಟ್ಟು ಪ್ರತಿಭಟನೆ ಮಾಡುತ್ತಾರೆ. ಬಾಗಲಕೋಟ ಆಸ್ಪತ್ರೆಯಿಂದ ತಂದು ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪೊಲೀಸರ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಪ್ರತಿಭಟನೆ ಮಾಡುದರ ಜೊತೆಗೆ ರಾತ್ರಿ 11 ಗಂಟೆ ನಂತರ ಶವವನ್ನು ತಗೆದುಕೊಂಡು ಹೋಗುತ್ತಾರೆ. ಪೊಲೀಸರೇ ಆರೋಪಿಗಳ ಎಂಬುವಂತೆ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಾರೆ.

ದಕ್ಷ ಅಧಿಕಾರಿ ರಾಜಶೇಖರ್ ರಾಠೋಡ ಪಿ.ಎಸ್.ಐ ನಾರಾಯಣಪುರ ಅವರ ವಿರುದ್ಧ ಶವವಿಟ್ಟು ಪ್ರತಿಭಟನೆ ಮಾಡಿ ಸುಳ್ಳು ಆರೋಪ ಮಾಡುತ್ತಾರೆ.

ವರದಿ : ಶಿವು ರಾಠೋಡ

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ