The recent murder case in Narayanpur police station is a new twist

ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣ ಹೊಸ ಟ್ವಿಸ್ಟ್

ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣ ಹೊಸ ಟ್ವಿಸ್ಟ್

ನಾರಾಯಣಪುರ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಂಡಬಾವಿ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸೂಕ್ಷ್ಮವಾಗಿ ಕೊಲೆ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸ್ ಇಲಾಖೆ ಅಧಿಕಾರಿಗಳು ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಯಾದಗಿರಿ ಎಸ್‌ಪಿಯವರ ಆದೇಶದಂತೆ, ಸಿಪಿಐ ರವಿಕುಮಾರ್ ಹುಣಸಗಿ ವೃತ್ತ ಇವರ ತನಿಖೆ ಕೈಗೊಂಡು ಸತ್ಯಾಸತ್ಯತೆಯನ್ನು ಬಯಲಿಗೆಳೆದಿದ್ದಾರೆ.

ಮೃತ ವ್ಯಕ್ತಿಯ ಹೆಂಡತಿಯಾದ ರೇಣುಕಮ್ಮ ಗಂಡ ಗೌಡಪ್ಪ ಚವನಬಾವಿ ಸಾ. ಜೋಗಂಡಬಾವಿ ಅವರು ನೀಡಿದ ದೂರಿನ ಮೇರೆಗೆ ದಿನಾಂಕ 22 -4 – 2025 ರಂದು ಆರೋಪಿತರಾದ ನೀಲಪ್ಪ ತಂದೆ ಯಮನಪ್ಪ ಹಾಗೂ ಇನ್ನಿತರರು ಸಾ. ಜೋಗಂಡಬಾವಿ ಹಳೆಯ ವೈರತ್ವದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದರು.

ಈ ಕುರಿತು ತನಿಖೆ ಮುಂದುವರೆಸಿದ ಅಧಿಕಾರಿಗಳು ನಿಜ ಘಟನೆಯನ್ನು ಅರಿತು ದಿಗ್ಭ್ರಮೆಗೊಳಗಾಗಿದ್ದಾರೆ. ಗೌಡಪ್ಪನ ಅಕ್ಕನ ಮಗನಾದ ಸರಿಸುಮಾರು 14 ವರ್ಷದ ಬಾಲಕ (ಹೆಸರು ನಮೂದಿಸುವುದಿಲ್ಲ) ಬಡಿಗೆಯಿಂದ ತಲೆ ಹಿಂಬದಿಯಲ್ಲಿ ಹೊಡೆದಿರುತ್ತಾನೆ. ಈ ಪ್ರಕರಣವು ಕೆಂಭಾವಿ ಠಾಣೆ ವ್ಯಾಪ್ತಿಯ ಅಗತೀರ್ಥ ಸೀಮಾಂತರದಲ್ಲಿ ಕುರಿ ದೊಡ್ಡಿಯನ್ನು ಹಾಕಿರುತ್ತಾರೆ ಅಳಿಯ ಮತ್ತು ಮಾವನ ಮದ್ಯ ಯಾವುದೋ ವಿಷಯಕ್ಕೆ ಜಗಳವಾಡುತ್ತಾರೆ. ಆ ಜಗಳದಲ್ಲಿ ಅಳಿಯ ಮಾವನಿಗೆ ತಲೆ ಹಿಂಬದಿಯಲ್ಲಿ ಕಟ್ಟಿಗೆಯಿಂದ ಹೊಡೆದಿರುತ್ತಾನೆ. ಅದರೆ, ಈ ವಿಚಾರವನ್ನು ಸುಳ್ಳು ಕಟ್ಟುಕಥೆ ಕಟ್ಟಿ ಮತ್ತೊಬ್ಬರ ಮೇಲೆ ಪ್ರಕರಣ ದಾಖಲೆಯನ್ನು ಮಾಡಿಸಿರುತ್ತಾರೆ. ಈ ಘಟನೆಯಲ್ಲಿ ಕುಟುಂಬಸ್ಥರೇ ಆರೋಪಿಗಳಾಗಿದ್ದಾರೆ.

ಈ ಘಟನೆಯು ದಿನಾಂಕ 19- 4- 2025 ರಂದು ಸುಮಾರು 9:00 ಗಂಟೆ ರಾತ್ರಿ ವೇಳೆಯಲ್ಲಿ ನಡೆದಿದೆ. ಕುಟುಂಬಸ್ಥರೇ ಕೊಲೆ ಮಾಡಿ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಸಾಯಂಕಾಲ 4 ಗಂಟೆವರೆಗೆ ಶವವನ್ನಿಟ್ಟು ಪ್ರತಿಭಟನೆ ಮಾಡುತ್ತಾರೆ. ಬಾಗಲಕೋಟ ಆಸ್ಪತ್ರೆಯಿಂದ ತಂದು ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪೊಲೀಸರ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಪ್ರತಿಭಟನೆ ಮಾಡುದರ ಜೊತೆಗೆ ರಾತ್ರಿ 11 ಗಂಟೆ ನಂತರ ಶವವನ್ನು ತಗೆದುಕೊಂಡು ಹೋಗುತ್ತಾರೆ. ಪೊಲೀಸರೇ ಆರೋಪಿಗಳ ಎಂಬುವಂತೆ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಾರೆ.

ದಕ್ಷ ಅಧಿಕಾರಿ ರಾಜಶೇಖರ್ ರಾಠೋಡ ಪಿ.ಎಸ್.ಐ ನಾರಾಯಣಪುರ ಅವರ ವಿರುದ್ಧ ಶವವಿಟ್ಟು ಪ್ರತಿಭಟನೆ ಮಾಡಿ ಸುಳ್ಳು ಆರೋಪ ಮಾಡುತ್ತಾರೆ.

ವರದಿ : ಶಿವು ರಾಠೋಡ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ