ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಮುದ್ದೇಬಿಹಾಳ : ಕೋವಿಡ್ ಸಮಯದಲ್ಲಿ ಜೀವ ಒತ್ತೆ ಇಟ್ಟು ಸೇವೆ ಸಲ್ಲಿಸಿದ ವೈದ್ಯರು,ಶುಶ್ರೂಷಕರ ಸೇವೆ ಅನುಪಮವಾದದ್ದು ಎಂದು ಕಾಳಗಿ ಸಮುದಾಯ ಕೇಂದ್ರದ ವೈದ್ಯ ಡಾ.ಅನೀಲಕುಮಾರ ಶೇಗುಣಸಿ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಕರ್ನಾಟಕ ರಾಜ್ಯ ಸರ್ಕಾರಿ ಶುಶ್ರೂಷಾಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದಿಂದ ನೂತನ ವರ್ಷದ ದಿನದರ್ಶಿಕೆ ಉದ್ಘಾಟನೆ,ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪರಶುರಾಮ ವಡ್ಡರ ಮಾತನಾಡಿ, ವೈದ್ಯಕೀಯ ಸೇವೆಯನ್ನು ಜನರು ಮೆಚ್ಚುವಂತೆ ನೀಡುತ್ತಿರುವ ಎಲ್ಲ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ. ಎಲ್ಲರೂ ತುಂಬಾ ಚೆನ್ನಾಗಿ ಕೆಲಸ ಮಾಡುತ್ತಾರೆ ಎಂದರು.

ಡಾ.ಅನುಪಮಾ ಶೆಟ್ಟಿ, ಹಿರಿಯ ಶುಶ್ರೂಷಅಧಿಕಾರಿಗಳಾದ ಸಂಜಯ ಭೋಸಲೆ,ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಅಯ್ಯಮ್ಮ ಕೊಣ್ಣೂರ, ಶಾಂತಾ ಮೇಟಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ವಿಠ್ಠಲ ಕಿಲಾರಟ್ಟಿ ಮಾತನಾಡಿದರು.

ಸಂಘದ ಉಪಾಧ್ಯಕ್ಷ ಅವಪ್ಪ ಅವನ್ನವರ, ಖಜಾಂಚಿ ಶೇಖಪ್ಪ ಬಿರಾದಾರ, ಸಂಘಟನಾ ಕಾರ್ಯದರ್ಶಿ ಮುನಾವರಪಾಷಾ ಹೊನ್ನುಟಗಿ, ಜಂಟಿ ಕಾರ್ಯದರ್ಶಿ ಜ್ಯೋತಿ ಕೋಳೂರಗಿ, ಸಚೀನ ರಾಥೋಡ, ಸಂತೋಷ ಅಂಗಡಿಗೇರಿ, ಜಿಲ್ಲಾ ಕಾರ್ಯದರ್ಶಿ ಯಲಗೂರೇಶ ತೊನಶ್ಯಾಳ,ಆಸ್ಪತ್ರೆಯ ಸಿಬ್ಬಂದಿ ಬಸವರಾಜ ಹಾವೇರಿ, ವಿಜಯ ಮಾಂತೇಶ ಪವಾಡಶೆಟ್ಟಿ, ದಾವೂದ ಮಕಾನದಾರ, ಬಸವರಾಜ ಬಡಿಗೇರ, ಎಂ.ಎಸ್. ಗೌಡರ, ಮಲ್ಲು ತಂಗಡಗಿ, ಶ್ರೀಕಾಂತ ಸಜ್ಜನ, ಕಲ್ಯಾಣಿ ಕೊಣ್ಣೂರ, ಓಲೆಕಾರ್, ರಾಜಶ್ರೀ ಹೊಕ್ರಾಣಿ, ರೇಖಾ ಜಾಯಗೊಂಡ, ನಸ್ರೀನ ಕೆ, ಶಿಲ್ಪ, ಭಾರತಿ, ರೇಷ್ಮಾ, ಸಲೀಂ ನದಾಫ,ಎಲ್ಲ ವಿಭಾಗದ ಇದ್ದರು.
ಪ್ರಧಾನ ಕಾರ್ಯದರ್ಶಿ ಮಹಮ್ಮದರಫೀಕ ಬಾಗವಾನ ಸ್ವಾಗತಿಸಿದರು.ಸಂಘದ ಅಧ್ಯಕ್ಷ ಶಿವಣ್ಣ ಎಸ್.ಮಾಗಿ ನಿರೂಪಿಸಿದರು. ಹಿರಿಯ ಸಲಹೆಗಾರರಾದ ಕಾಶಿನಾಥ ವಗದುರ್ಗಿ ವಂದಿಸಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,