ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ಲಿಂಗಸೂಗೂರು: ತಾಲೂಕಿನ ಬೆಂಡೋಣಿ ಗ್ರಾಮದ ಮಾಜಿ ಸೈನಿಕರಾದ ಯಲ್ಲಪ್ಪ ಹಲ್ಕಾವಟಗಿಯವರ ಪುತ್ರ ತೇಜಸ್ವಿ (24) ಆಗಸ್ಟ್ 6 ರಂದು ನಾರಾಯಣಪುರ ಚೆಕ್ ಪೋಸ್ಟ್ ಬಳಿಯ ಎಡದಂಡೆ ಕಾಲುವೆಗೆ (narayanpur canal) ಮುಖ ತೊಳೆಯಲು ಹೋಗಿ ಕಾಲು ಜಾರಿ ಬಿದ್ದ ಘಟನೆ ನಡೆದಿದ್ದು, ಮೂರು ದಿನಗಳ ಬಳಿಕ ಇಂದು ಕೊಡೆಕಲ್ ದ ಬೂದಿಹಾಳ ಸೇತುವೆ ಹತ್ತಿರ ಯುವಕ ಶವವಾಗಿ ಪತ್ತೆಯಾದ ಪ್ರಕರಣ ನಡೆದಿದೆ.

Join Our Telegram: https://t.me/dcgkannada

ಲಿಂಗಸಗೂರು ಪಟ್ಟಣದ ಸಂಗಮೇಶ್ವರ ಕಾಲೇಜಿನಲ್ಲಿ ಬಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಮೃತ ಯುವಕ ತೇಜಸ್ವಿ ತನ್ನ ಸ್ನೇಹಿತನ ಜೊತೆ ಆಲಮಟ್ಟಿ ಹೋಗಿ ಮರಳಿ ಬರುವ ಸಮಯದಲ್ಲಿ ಮುಖ ತೊಳೆಯಲು ಎಂದು ನಾರಾಯಣಪುರ ಕ್ರಾಸ್ ಬಳಿಯ ಎಡದಂಡೆ ಕಾಲುವೆ (narayanpur canal) ಗೆ ಇಳಿದಾಗ ಕಾಲು ಜಾರಿ ಕಾಲುವೆಗೆ ಬಿದ್ದಿದ್ದು,ನೀರಿನ ಸುಳಿಗೆ ಸಿಲುಕಿ ಕೊಚ್ಚಿ ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪೊಲೀಸರ ಅಸಹಕಾರ: ಕಾಲುವೆಗೆ ಬಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳೀಯ ನಾರಾಯಣಪುರ ಪೋಲೀಸ್ ಠಾಣೆ ಗೆ ಮಾಹಿತಿ ನೀಡಲು ಹೋದಾಗ ಈ ಘಟನೆ ನಮ್ಮ ವ್ಯಾಪ್ತಿಗೆ ಬರಲ್ಲ, ನಾಲತವಾಡ ಪೋಲಿಸ್ ಠಾಣೆ ವ್ಯಾಪ್ತಿಗೆ ಬರುತ್ತೆ ಎಂದು ಹೇಳಿದ್ದಾರೆ.

ನಂತರ ನಾಲತವಾಡ ಪೋಲಿಸ್ ಠಾಣೆಗೆ ತೆರಳಿ ಮಾಹಿತಿ ನೀಡಿದರೆ ಅವರು ಎಡದಂಡೆ ಕಾಲುವೆ (narayanpur canal) 100 ಮೀ ವ್ಯಾಪ್ತಿ ಬರುತ್ತೆ, ನೀವೂ ಮುದ್ದೇಬಿಹಾಳ ಠಾಣೆ ಬರುತ್ತೆ ಎಂದು ಹೇಳುವ ಮೂಲಕ ಪೋಲಿಸರು ಅಸಹಕಾರ ತೋರಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

ಶವ ಪತ್ತೆಯಾದ ತಕ್ಷಣ ಸ್ಥಳಕ್ಕೆ ಕೊಡೆಕಲ್ ಠಾಣೆಯ ಪೋಲಿಸರು ಭೇಟಿ ನೀಡಿದ್ದು, ಮರಣೋತ್ತರ ಪರಿಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದು ಅಂತ್ಯಕ್ರೀಯೆ ಇಂದು ಸಾಯಂಕಾಲ ಬೆಂಡೋಣಿ ಗ್ರಾಮದಲ್ಲಿ ನಡೆಯಲಿದೆ ಎಂದು ಮೃತನ ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ