ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ನಿನ್ನೆಯಷ್ಟೇ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಈ ಆದೇಶ ವಿರೋಧಿಸಿದ್ದ ಯತ್ನಾಳ ಅವರ ಬೆಂಬಲಿಗ ಕಾರು ಅಫಘಾತದಲ್ಲಿ ಇಂದು ಸಾವನ್ನಪ್ಪಿದ್ದಾನೆ!

ಯತ್ನಾಳ ಅವರನ್ನು ಉಚ್ಚಾಟನೆ ಮಾಡಿದ್ದನ್ನು ವಿರೋಧಿಸಿ ನಿನ್ನೆಯೇ ಅವರ ಬೆಂಬಲಿಗ ಹಾಗೂ ಎಸ್‌ಟಿ ಮೋರ್ಚಾದ ಪದಾಧಿಕಾರಿ ಸಂತೋಷ ಎಂಬುವವರು ರಾಜೀನಾಮೆ ನೀಡಿದ್ದರು. ಇಂದು ಕಾರು ನಿಯಂತ್ರಣ ಕಳೆದುಕೊಂಡು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇನ್ನು ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು, ಜನರಿಂದ ಉಚ್ಚಾಟನೆ ಮಾಡಲು ಸಾಧ್ಯವಿಲ್ಲ. ಕಾದು ನೋಡಿ.. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬಿಜೆಪಿ ನಡೆಗೆ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಸಹ ಸಂತೋಷ್‌ ಮಾಡಿದ್ದರು. ಇದೀಗ ದುರಂತವೆಂಬಂತೆ ಅಪಘಾತದಲ್ಲಿ ಅವರೇ ಕೊನೆಯುಸಿರೆಳೆದಿದ್ದಾರೆ.

ಯತ್ನಾಳ ಅವರ ಉಚ್ಚಾಟನೆ ಹಿನ್ನೆಲೆಯಲ್ಲಿ ಈಗಾಗಲೇ ಅವರ ಬೆಂಬಲಿಗರು, ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದಲ್ಲದೇ ಹೋರಾಟಕ್ಕೂ ಸಜ್ಜಾಗುತ್ತಿದ್ದಾರೆ.

ಯತ್ನಾಳ ಪಕ್ಷದಲ್ಲಿ ಇದ್ದಾಗಲೇ ಅವರನ್ನು ನಿಯಂತ್ರಿಸಲು ವಿಫಲವಾದ ಹೈಕಮಾಂಡ್ ಈಗ ಅವರಿಂದ ಪಕ್ಷಕ್ಕೆ ಆಗುವ ನಷ್ಟವನ್ನು ಹೇಗೆ ಸರಿದೂಗಿಸುತ್ತದೆ. ಇಲ್ಲಿಯ ವರೆಗೂ ಅವರೊಂದಿಗೆ ಗುರುತಿಸಿಕೊಂಡ ಮಿತ್ರರ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.

ಉಚ್ಚಾಟನೆಯ ನಮತರ ಈವರೆಗೂ ಮಾಧ್ಯಮಗಳು ಸೇರಿದಂತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ಸದ್ಯ ಯತ್ನಾಳ ಅವರು ಚಿಂಚೊಳ್ಳಿಯಲ್ಲಿ ಇದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ: ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ ಯತ್ನಾಳ

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ