ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ನಿನ್ನೆಯಷ್ಟೇ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಈ ಆದೇಶ ವಿರೋಧಿಸಿದ್ದ ಯತ್ನಾಳ ಅವರ ಬೆಂಬಲಿಗ ಕಾರು ಅಫಘಾತದಲ್ಲಿ ಇಂದು ಸಾವನ್ನಪ್ಪಿದ್ದಾನೆ!

ಯತ್ನಾಳ ಅವರನ್ನು ಉಚ್ಚಾಟನೆ ಮಾಡಿದ್ದನ್ನು ವಿರೋಧಿಸಿ ನಿನ್ನೆಯೇ ಅವರ ಬೆಂಬಲಿಗ ಹಾಗೂ ಎಸ್‌ಟಿ ಮೋರ್ಚಾದ ಪದಾಧಿಕಾರಿ ಸಂತೋಷ ಎಂಬುವವರು ರಾಜೀನಾಮೆ ನೀಡಿದ್ದರು. ಇಂದು ಕಾರು ನಿಯಂತ್ರಣ ಕಳೆದುಕೊಂಡು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇನ್ನು ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು, ಜನರಿಂದ ಉಚ್ಚಾಟನೆ ಮಾಡಲು ಸಾಧ್ಯವಿಲ್ಲ. ಕಾದು ನೋಡಿ.. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬಿಜೆಪಿ ನಡೆಗೆ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಸಹ ಸಂತೋಷ್‌ ಮಾಡಿದ್ದರು. ಇದೀಗ ದುರಂತವೆಂಬಂತೆ ಅಪಘಾತದಲ್ಲಿ ಅವರೇ ಕೊನೆಯುಸಿರೆಳೆದಿದ್ದಾರೆ.

ಯತ್ನಾಳ ಅವರ ಉಚ್ಚಾಟನೆ ಹಿನ್ನೆಲೆಯಲ್ಲಿ ಈಗಾಗಲೇ ಅವರ ಬೆಂಬಲಿಗರು, ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದಲ್ಲದೇ ಹೋರಾಟಕ್ಕೂ ಸಜ್ಜಾಗುತ್ತಿದ್ದಾರೆ.

ಯತ್ನಾಳ ಪಕ್ಷದಲ್ಲಿ ಇದ್ದಾಗಲೇ ಅವರನ್ನು ನಿಯಂತ್ರಿಸಲು ವಿಫಲವಾದ ಹೈಕಮಾಂಡ್ ಈಗ ಅವರಿಂದ ಪಕ್ಷಕ್ಕೆ ಆಗುವ ನಷ್ಟವನ್ನು ಹೇಗೆ ಸರಿದೂಗಿಸುತ್ತದೆ. ಇಲ್ಲಿಯ ವರೆಗೂ ಅವರೊಂದಿಗೆ ಗುರುತಿಸಿಕೊಂಡ ಮಿತ್ರರ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.

ಉಚ್ಚಾಟನೆಯ ನಮತರ ಈವರೆಗೂ ಮಾಧ್ಯಮಗಳು ಸೇರಿದಂತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ಸದ್ಯ ಯತ್ನಾಳ ಅವರು ಚಿಂಚೊಳ್ಳಿಯಲ್ಲಿ ಇದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ: ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ ಯತ್ನಾಳ

Latest News

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು