ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ನಿನ್ನೆಯಷ್ಟೇ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಈ ಆದೇಶ ವಿರೋಧಿಸಿದ್ದ ಯತ್ನಾಳ ಅವರ ಬೆಂಬಲಿಗ ಕಾರು ಅಫಘಾತದಲ್ಲಿ ಇಂದು ಸಾವನ್ನಪ್ಪಿದ್ದಾನೆ!

ಯತ್ನಾಳ ಅವರನ್ನು ಉಚ್ಚಾಟನೆ ಮಾಡಿದ್ದನ್ನು ವಿರೋಧಿಸಿ ನಿನ್ನೆಯೇ ಅವರ ಬೆಂಬಲಿಗ ಹಾಗೂ ಎಸ್‌ಟಿ ಮೋರ್ಚಾದ ಪದಾಧಿಕಾರಿ ಸಂತೋಷ ಎಂಬುವವರು ರಾಜೀನಾಮೆ ನೀಡಿದ್ದರು. ಇಂದು ಕಾರು ನಿಯಂತ್ರಣ ಕಳೆದುಕೊಂಡು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇನ್ನು ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು, ಜನರಿಂದ ಉಚ್ಚಾಟನೆ ಮಾಡಲು ಸಾಧ್ಯವಿಲ್ಲ. ಕಾದು ನೋಡಿ.. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬಿಜೆಪಿ ನಡೆಗೆ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಸಹ ಸಂತೋಷ್‌ ಮಾಡಿದ್ದರು. ಇದೀಗ ದುರಂತವೆಂಬಂತೆ ಅಪಘಾತದಲ್ಲಿ ಅವರೇ ಕೊನೆಯುಸಿರೆಳೆದಿದ್ದಾರೆ.

ಯತ್ನಾಳ ಅವರ ಉಚ್ಚಾಟನೆ ಹಿನ್ನೆಲೆಯಲ್ಲಿ ಈಗಾಗಲೇ ಅವರ ಬೆಂಬಲಿಗರು, ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದಲ್ಲದೇ ಹೋರಾಟಕ್ಕೂ ಸಜ್ಜಾಗುತ್ತಿದ್ದಾರೆ.

ಯತ್ನಾಳ ಪಕ್ಷದಲ್ಲಿ ಇದ್ದಾಗಲೇ ಅವರನ್ನು ನಿಯಂತ್ರಿಸಲು ವಿಫಲವಾದ ಹೈಕಮಾಂಡ್ ಈಗ ಅವರಿಂದ ಪಕ್ಷಕ್ಕೆ ಆಗುವ ನಷ್ಟವನ್ನು ಹೇಗೆ ಸರಿದೂಗಿಸುತ್ತದೆ. ಇಲ್ಲಿಯ ವರೆಗೂ ಅವರೊಂದಿಗೆ ಗುರುತಿಸಿಕೊಂಡ ಮಿತ್ರರ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.

ಉಚ್ಚಾಟನೆಯ ನಮತರ ಈವರೆಗೂ ಮಾಧ್ಯಮಗಳು ಸೇರಿದಂತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ಸದ್ಯ ಯತ್ನಾಳ ಅವರು ಚಿಂಚೊಳ್ಳಿಯಲ್ಲಿ ಇದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ: ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ ಯತ್ನಾಳ

Latest News

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ ತಗೆದುಕೊಂಡು ಬಂದು ಅವ್ಯವಸ್ಥೆಯ ಕುರಿತು ಶಾಸಕ ಸಿ.ಎಸ್.ನಾಡಗೌಡರಿಗೆ ದರ್ಶನ ಮಾಡಿಸಿದ ಘಟನೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ನಡೆಯಿತು. ಮೂತ್ರಾಲಯದ ಅವ್ಯವಸ್ಥೆ ಸಾಕಷ್ಟಿದ್ದು ಪುರುಷರು ಮೂತ್ರ ವಿಸರ್ಜನೆಗೆ ನಿಂತರೆ ನಿಲ್ದಾಣದೊಳಕ್ಕೆ ಬರುವ ಮಹಿಳೆಯರು ಮೂಗು,ಕಣ್ಣು ಮುಚ್ಚಿಕೊಂಡು ಬರುವ ದುಸ್ಥಿತಿ ಇದೆ ಎಂದು ಹೇಳಲು ಯುವ ಪ್ರಯಾಣಿಕ ಮುಂದಾದರು. ಯುವ ಪ್ರಯಾಣಿಕನ ಮೊಬೈಲ್‌ದಲ್ಲಿರುವ ಫೋಟೋ ನೋಡುತ್ತಲೇ