ಮನೆ ಬಿದ್ದು ಮೂವರು ಗಾಯಗೊಂಡಿದ್ದ ಪ್ರಕರಣ: ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರ ಪಡೆದ ಸಂತ್ರಸ್ಥ..!

ಮನೆ ಬಿದ್ದು ಮೂವರು ಗಾಯಗೊಂಡಿದ್ದ ಪ್ರಕರಣ: ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರ ಪಡೆದ ಸಂತ್ರಸ್ಥ..!

ಮುದ್ದೇಬಿಹಾಳ : ತಾಲ್ಲೂಕಿನ ಆರೇಮುರಾಳ ಗ್ರಾಮದಲ್ಲಿ ಅತಿವೃಷ್ಟಿಯಿಂದಾಗಿ ಮನೆ ಬಿದ್ದು ಮೂವರು ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಶನಿವಾರ ತಹಶೀಲ್ದಾರ್ ಕಚೇರಿಗೆ ಸಂತ್ರಸ್ಥನನ್ನು ಕರೆಯಿಸಿ ಸರ್ಕಾರದಿಂದ ಬಿಡುಗಡೆಯಾದ ಪರಿಹಾರದ ಆದೇಶ ಪತ್ರವನ್ನು ವಿತರಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಆರೇಮುರಾಳ ಗ್ರಾಮದಲ್ಲಿ ಮನೆ ಬಿದ್ದು ಅದರಡಿ ಸಿಲುಕಿದ್ದ ಮಲ್ಲವ್ವ ಬಂಡಿವಡ್ಡರ ಸೊಂಟಕ್ಕೆ ಬಲವಾದ ಪೆಟ್ಟು ಬಿದ್ದಿದ್ದು ರುದ್ರಪ್ಪ ಬಂಡಿವಡ್ಡರ ಹಾಗೂ ಅವರ ಮಗಳು ಶಾರದಾ ಬಂಡಿವಡ್ಡರಗೂ ತಲೆಗೆ ಪೆಟ್ಟು ಬಿದ್ದು ಗಾಯಗೊಂಡಿದ್ದರು. ಅವರಿಗೆ ಎನ್.ಡಿ.ಆರ್.ಎಫ್,ಎಸ್.ಡಿ.ಆರ್.ಎಫ ನಿಯಮಾವಳಿ ಅಂತೆ 5400 ರೂ.ಗಳಂತೆ ಮೂವರಿಗೆ 16,200 ಪರಿಹಾರ ನೀಡಲಾಗಿದೆ ಎಂದು ಆದೇಶಪತ್ರದಲ್ಲಿ ತಿಳಿಸಲಾಗಿದೆ.

ಈ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಭೋವಿ ಸಮಾಜದ ಮುಖಂಡ ಪರಶುರಾಮ ನಾಲತವಾಡ , ಮನೆ ಬಿದ್ದು ತೊಂದರೆಯಲ್ಲಿದ್ದ ಸಂತ್ರಸ್ಥರನ್ನೇ ತಹಶೀಲ್ದಾರ್ ಕಚೇರಿಗೆ ಕರೆಯಿಸಿ ಆದೇಶಪತ್ರ ಕೊಡುವ ಬದಲು ಅವರಿದ್ದಲ್ಲಿಯೇ ಹೋಗಿ ಅಧಿಕಾರಿಗಳು ಸಾಂತ್ವನ ಹೇಳಿ ಪರಿಹಾರದ ಆದೇಶ ಪತ್ರ ನೀಡಿದ್ದರೆ ತಾಲ್ಲೂಕು ಆಡಳಿತಕ್ಕೆ ಗೌರವ ಬರುತ್ತಿತ್ತು ಎಂದು ತಿಳಿಸಿದ್ದಾರೆ.ರುದ್ರಪ್ಪ ಬಂಡಿವಡ್ಡರ ತಲೆಗೆ ಪೆಟ್ಟಾಗಿದ್ದರಿಂದ ಕತ್ತಿಗೆ ಪಟ್ಟಿ ಸುತ್ತಿಕೊಂಡು ಬಂದೇ ಪರಿಹಾರದ ಆದೇಶಪ್ರತಿ ಪಡೆದುಕೊಂಡರು.

Latest News

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.