ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ ಕಾಲು ಹಿಡಿದು ಜಗ್ಗುವವರು ಬಹಳ ಜನ ಇದ್ದಾರೆ.ಆದರೆ ಶಿಕ್ಷಣಕ್ಕಾಗಿ ಪ್ರಭುಗೌಡ ದೇಸಾಯಿ ಅವರಂತಹವರು ಜಮೀನು ಕೊಟ್ಟು ಮತ್ತೊಬ್ಬರನ್ನು ಬೆಳೆಸುವಂತವರು ವಿರಳ ಜನ ಇದ್ದಾರೆ.ಅವರು ನಿಜವಾದ ದೈವಿಯ ಗುಣ ಹೊಂದಿದವರು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ನೂತನ ಕಟ್ಟಡವನ್ನು ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಭಾಗದಲ್ಲಿ ಶೇ.88ರಷ್ಟು ಪ್ರೌಢಶಿಕ್ಷಣದ ಫಲಿತಾಂಶ ಹೆಚ್ಚಿದೆ.ಆದರೆ ಪಿಯುಸಿ ನಂತರದ ಶಿಕ್ಷಣಕ್ಕೆ ನಮ್ಮ ಭಾಗದಲ್ಲಿ ಆದ್ಯತೆ ನೀಡಲಾಗುತ್ತಿದೆ.ಉನ್ನತ ಶಿಕ್ಷಣಕ್ಕೆ ಹೋಗುವವರ ಸಂಖ್ಯೆ ಹೆಚ್ಚಬೇಕು.ಬಿಎಎಸ್ ಸಂಸ್ಥೆಯ ಸ್ಥಾಪನೆಯಲ್ಲಿ ಹಗಲಿರುಳು ಶ್ರಮಿಸಿರುವ ಮಹಾಂತಗೌಡ ಬಿರಾದಾರ,ಶಿವನಗೌಡ ಬಿರಾದಾರ ಸಹೋದರರು,ಅವರ ಕುಟುಂಬದವರಿಗೆ ಇವರಿಗೆ ಜಮೀನು ಕೊಟ್ಟು ಸಹಕಾರ ನೀಡಿರುವ ಪ್ರಭುಗೌಡ ದೇಸಾಯಿ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ವಿದ್ಯೆ ಎಂದರೆ ಕೇವಲ ಅಕ್ಷರ ಕಲಿಸುವುದಲ್ಲ.ಅಲ್ಲಿ ಜೀವನದ ಮೌಲ್ಯಗಳನ್ನು ಕಲಿಸುವಂತದ್ದು ಮುಖ್ಯವಾಗಿದೆ.ಮೌಲ್ಯದ ಜೊತೆಗೆ ಸದೃಢವಾದ ದೇಹವನ್ನು ಕೊಡುವಂತಹದ್ದು, ನೀತಿವಂತನಾಗಿ ತಂದೆ ತಾಯಿ ದೇವರೆಂದು ಕಾಣುವಂತಹದ್ದು,ಭೂಮಿಗೆ ಬಂದಿದ್ದೇನೆ ಏನಾದರೂ ಕೊಡಬೇಕು ಎಂಬ ಭಾವನೆಯನ್ನು ಹೊಂದುವAತೆ ಮಗುವನ್ನು ಬೆಳೆಸುವ ಸಂಸ್ಥೆ ಅತ್ಯುತ್ತಮ ಸಂಸ್ಥೆ ಆಗುತ್ತದೆ.ಅದು ಬಿಎಎಸ್ ಸಂಸ್ಥೆ ಮುಂಬರುವ ದಿನಗಳಲ್ಲಿ ಆಗಲಿದೆ ಎಂಬ ಆಶಾಭಾವನೆಯನ್ನು ಹೊಂದಿರುವುದಾಗಿ ಹೇಳಿದರು.

ಆದಾಯ ತೆರಿಗೆ ಇಲಾಖೆಯ ಆಯುಕ್ತ ಶಿವಾನಂದ ಕಲಕೇರಿ ಮಾತನಾಡಿ, ಉತ್ತರ ಕರ್ನಾಟಕದ ಜನ ಈಗಲೂ ಉದ್ಯೋಗಕ್ಕಾಗಿ ಬೇರೆ ಜಿಲ್ಲೆ, ರಾಜ್ಯಗಳಿಗೆ ಗುಳೇ ಹೋಗುತ್ತಾರೆ.ಅದೇ ರೀತಿ ಶಿಕ್ಷಣಕ್ಕೂ ಬೇರೆ ಬೇರೆ ಉಡುಪಿ,ಮಂಗಳೂರು ಭಾಗಕ್ಕೆ ಗುಳೇ ಹೋಗುವ ಸ್ಥಿತಿ ಇದೆ.ಇಂತಹ ಸಮಯದಲ್ಲಿ ಈ ಭಾಗದಲ್ಲಿ ಅಂತರಾಷ್ಟಿçÃಯ ಮಟ್ಟದ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿರುವ ಮಹಾಂತಗೌಡರು ಹಾಗೂ ಶಿವನಗೌಡರು ನಿಜವಾದ ಶಿಕ್ಷಣದ ಪ್ರೇಮಿಗಳು ಎಂದು ಹೇಳಿದರು.

ಮಕ್ಕಳು ಕಂಪ್ಯೂಟರ್,ಲ್ಯಾಪಟಾಪ್‌ನoತಹ ಸಾಫ್ಟ್ ಡಿಜಿಟಲ್ ಡಿವೈಸಿಸ್,ಗೇಮುಗಳ ದಾಸರಾಗಿದ್ದಾರೆ.ಆದರೆ ಮೈದಾನದಲ್ಲಿ ದೈಹಿಕ ಚಟುವಟಿಕೆಗೆ ಆದ್ಯತೆ ನೀಡಿದರೆ ಅಭ್ಯಾಸ ಮಾಡಿ ಒಳ್ಳೆಯದಾಗಿ ನಿದ್ದೆ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ.ಅದನ್ನು ಈ ಸಂಸ್ಥೆ ಮಾಡಬೇಕು. ಇಂದಿನ ಕೆಲವು ನಗರಗಳಲ್ಲಿ ಶಾಲಾ ಮೈದಾನವೇ ಇರುವುದಿಲ್ಲ.ಅಲ್ಲಿ ಬರೀ ಓದುವುದನ್ನು ಬಿಟ್ಟು ಬೇರೆ ಏನನ್ನೂ ಹೇಳಿಕೊಡುವುದಿಲ್ಲ.ಆದರೆ ಬಿಎಎಸ್ ಸಂಸ್ಥೆ ಹೆಮ್ಮರವಾಗಿ ಬೆಳೆಯಲಿ ಎಂದು ಹೇಳಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಕುಂಟೋಜಿ ಭಾವೈಕ್ಯತೆ ಹಿರೇಮಠದ ಚನ್ನವೀರ ಶಿವಾಚಾರ್ಯರು ಮಾತನಾಡಿ, ಇಂದಿನ ಸಮಾಜ ಪಾಶ್ಚಾತ್ಯ ಶಿಕ್ಷಣದ ಸಂಸ್ಕೃತಿಗೆ ವಾಲುತ್ತಿರುವುದರಿಂದ ದೇಶದ ಸಂಸ್ಕೃತಿಗೆ ಬಹುದೊಡ್ಡ ಹೊಡೆತ ಬೀಳುತ್ತಿದೆ.ನಮ್ಮ ಈಗಿನ ಮಕ್ಕಳ ಐಕ್ಯೂ ಲೆವಲ್ ಚೆನ್ನಾಗಿದೆ.ಅವರಿಗೆ ಇಕ್ಯೂ ಲೆವಲ್ ಡೌನ್ ಮಾಡಿಕೊಂಡು ಕೂತಿದ್ದಾರೆ.ಎಮೋಷನ್ ಕೋಷಂಟ್ ಖಿನ್ನತೆಯನ್ನು,ಮಾನಸಿಕ ತೊಳಲಾಟದಿಂದ ಹೇಗೆ ಹೊರಬರಬೇಕು ಎಂಬುದು ಅರಿತುಕೊಳ್ಳುತ್ತಿಲ್ಲ.ಇದನ್ನು ಶಾಲೆಗಳಲ್ಲಿ ಕಲಿಸಬೇಕು.ಅಪ್ಪ ಅಮ್ಮ ಶಾಲೆಗೆ ಹಚ್ಚಿದರೆ ಅದರಂತೆ ಓದುವುದೇ ಆಗದೇ ಮಕ್ಕಳಲ್ಲಿ ಅಡಗಿರುವ ನಿಜವಾದ ಕಲೆಯೂ ಹೊರಗೆ ಬರಬೇಕು ಎಂದರು.

ಬಿದರಕುoದಿ-ಕಪ್ಪತಗುಡ್ಡ ಶಿವಯೋಗಾಶ್ರಮದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಒಂದು ಶಾಲೆ ಆರಂಭಗೊoಡರೆ ಹತ್ತು ಜೈಲುಗಳು ಕಡಿಮೆ ಆಗುತ್ತವೆ.ವಿದ್ಯೆ ಎಂದರೆ ಬೆಳಕು.ಆಧ್ಯಾತ್ಮದ ಬೆಳಕನ್ನು ನೀಡುವಂತಹದ್ದು ವಿದ್ಯೆ.ಅಕ್ಷರಗಳನ್ನು ಕಲಿಯುವುದಕ್ಕೆ ಶಾಲೆಗೆ ಬರಬೇಕು.ಉತ್ತಮವಾದ ಶಿಕ್ಷಕರ ಮೇಲೆ ಶಾಲೆ ನಿಂತಿದೆ.ಸಿoಪಿ ಲಿಂಗಣ್ಣ,ಶoಗು ಬಿರಾದರ,ಈಶ್ವರಚಂದ್ರ ಚಿಂತಾಮಣೆ, ಕಂಚ್ಯಾಣಿ ಶರಣಪ್ಪ, ಎ.ಎಸ್.ಹಿಪ್ಪರಗಿ,ಎಚ್.ಆರ್.ಕಲಕೇರಿ ಶಿಕ್ಷಕರ ಪರಂಪರೆ ಇದೆ.ಊರಿನ ಸಾಂಸ್ಕೃತಿಕ ಪರಂಪರೆಯನ್ನು ತೆಗೆದುಕೊಂಡು ಹೋಗಿದ್ದಾರೆ.ಗಂಗಮ್ಮ ಚಿನಿವಾರ,ಬಂಥನಾಳ ಶಿವಯೋಗಿಗಳು, ಮಲ್ಲಿಕಾರ್ಜುನ ಸ್ವಾಮೀಜಿಯವರು ಶಿಕ್ಷಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟವರು.ಪರಿಸರದ ವಾತಾವರಣದಲ್ಲಿ ಶಿಕ್ಷಣ ನೀಡಿ ಎಂದರು.

ದಿವ್ಯ ಸಾನಿಧ್ಯವನ್ನು ಆಳಂದ,ಜಾಲವಾದ,ನoದವಾಡಗಿ ಹಿರೇಮಠದ ಮಹಾಂತಲಿAಗ ಶಿವಾಚಾರ್ಯರು, ನಂದವಾಡಗಿ ಹಿರೇಮಠದ ಚನ್ನಬಸಯ ಶಿವಾಚಾರ್ಯರು ವಹಿಸುವರು, ಬಳವಾಟ ಪರ್ವತಾಶ್ರಮದ ಸೋಮಶೇಖರ ದೇವರು,ಕೊಡಗಾನೂರ ಕೆಳಗಿನಮಠದ ಕುಮಾರದೇವರು,ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮಾಂತಗೌಡ ಬಿರಾದಾರ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಬಾಲಾಜಿ ಶುಗರ್ಸ್ನ ಅಧ್ಯಕ್ಷ ಹಣಮಂತಗೌಡ ಪಾಟೀಲ, ಗಣ್ಯ ವ್ಯಾಪಾರಸ್ಥರಾದ ಬಿ.ಸಿ.ಮೋಟಗಿ, ಬ.ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ,ನಿವೃತ್ತ ಕರ್ನಲ್ ಶಿವಾನಂದ ಬಿರಾದಾರ,ಬಿಇಒ ಬಿ.ಎಸ್.ಸಾವಳಗಿ,ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ,ಗಣ್ಯ ವ್ಯಾಪಾರಸ್ಥರಾದ ಬಾಬುಲಾಲ ಓಸ್ವಾಲ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಅರವಿಂದ ಹೂಗಾರ, ವಸಂತ ಇಲ್ಲೂರ, ಗ್ಯಾರಂಟಿ ಸಮಿತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ,ಲೋಕಾಯುಕ್ತ ಪೊಲೀಸ್ ಅಧಿಕಾರಿ ಗೋವಿಂದಗೌಡ ಪಾಟೀಲ,ಉದ್ಯಮಿ ಶರಣು ಸಜ್ಜನ, ಪ್ರಥಮ ದರ್ಜೆ ಗುತ್ತಿಗೆದಾರ ರಾಯನಗೌಡ ತಾತರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಅಸ್ಕಿ ಫೌಂಡೇಶನ ಅಧ್ಯಕ್ಷ ಸಿ.ಬಿ.ಅಸ್ಕಿ, ಉದ್ಯಮಿ ಶಾಂತಗೌಡ ಪಾಟೀಲ ನಡಹಳ್ಳಿ, ಪಿಎಸೈ ಸಂಜಯ ತಿಪರೆಡ್ಡಿ, ಸಂಸ್ಥೆಯ ಮಾರ್ಗದರ್ಶಕ ಶಿವನಗೌಡ ಬಿರಾದಾರ , ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಹಿರಿಯ ನ್ಯಾಯವಾದಿ ವಿ.ಎಂ.ನಾಗಠಾಣ,ಬಿ.ಎಸ್.ಪಾಟೀಲ ಯಾಳಗಿ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಇದ್ದರು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಬೆಂಗಳೂರಿನಿoದ ಆಗಮಿಸಿದ್ದ ನೃತ್ಯದ ಮಾರ್ಗದರ್ಶಕರು ಮಕ್ಕಳಿಗೆ ತರಬೇತಿ ನೀಡಿ ಪಾಲಕರ ಮನ ರಂಜಿಸಿದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ