They laid siege to the taluk agriculture office demanding to solve the problems of the farmers

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಇಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲ್ಲೂಕು ಕೃಷಿ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟನಾಕಾರರು, ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಧನವನ್ನು ರೈತರ ಖಾತೆಗೆ ತಕ್ಷಣವೇ ಜಮಾ ಮಾಡಬೇಕೆಂದು ಆಗ್ರಹಿಸಿದರು.

ಹಾಲು ಉತ್ಪಾದಕರಿಗೆ ಪ್ರತಿ ಲಿಟರ್‌ಗೆ 5 ರೂ. ಪ್ರೋತ್ಸಾಹ ಧನದ ಬಾಕಿ ಇರುವ 62೦ ಕೋಟಿ ರೂ. ಅನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಈ ಪ್ರೋತ್ಸಾಹ ಧನವನ್ನು 7 ರೂ.ಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 3,3೦೦ ದರವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಮಾನವಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಜೊತೆಗೆ, ಹಿಂದಿನಂತೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಭಾಗವಾಗಿ ರಾಜ್ಯ ಸರ್ಕಾರದಿಂದ ಪ್ರತಿ ರೈತನಿಗೆ ವರ್ಷಕ್ಕೆ ರೂ. 4,೦೦೦ ನೆರವು ಪುನಃ ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸಲಾಯಿತು. ಬಿ. ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಜಾರಿಯಲ್ಲಿದ್ದ ರೂ. 25,೦೦೦ ಶುಲ್ಕದಲ್ಲಿ ಟ್ರಾನ್ಸ್ಫಾರ್ಮರ್ ಹಾಗೂ ಶಾಶ್ವತ ವಿದ್ಯುತ್ ಸಂಪರ್ಕ ಒದಗಿಸುವ ಯೋಜನೆಯನ್ನು ತಕ್ಷಣ ಪುನಃ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಗರಿಷ್ಠ ರೂ. ೧೦ ಲಕ್ಷವರೆಗೆ ಸಾಲ ಸೌಲಭ್ಯ ನೀಡಬೇಕು. ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಸಬ್ಸಿಡಿ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು. ಈ ಕುರಿತು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸೋಮನಾಥ್ ಪಾಟೀಲ್, ಶಾಸಕರಾದ ಡಾ|| ಶೈಲೇಂದ್ರ ಬೆಲ್ದಾಳೆ, ಮಾಜಿ ಕೇಂದ್ರ ಸಚಿವರಾದ ಶ್ರೀ ಭಗವಂತ್ ಖೂಬಾ, ಈಶ್ವರ್ ಸಿಂಗ್ ಠಾಕೂರ್, ದಕ್ಸಿಣ ಮಂಡಲ್ ಅಧ್ಯಕ್ಷರಾದ ಗುರುನಾಥ್ ರಾಜಗಿರ, ಗ್ರಾಮಾಂತರ ಅಧ್ಯಕ್ಷರಾದ ದೀಪಕ ಗಾದಗೆ, ನಗರ ಅಧ್ಯಕ್ಷರಾದ ಶಶಿಧರ ಹೊಸಳ್ಳಿ, ಮುಖಂಡರಾದ ವೀರಶಟ್ಟಿ ನಿಡವಂಚಾ, ಗುರುನಾಥ್ ಜಾಂತಿಕರ್, ರಾಜಶೇಖರ್ ನಾಗಮೂರ್ತಿ, ಅಶೋಕ ಹೊಕ್ರಣೆ, ಬಾಬುರಾವ್ ಕಾರ್ ಬಾರಿ, ಬಸವರಾಜ್ ಪವಾರ್, ಮಹಿಳಾ ರಾಜ್ಯ ಕಾರ್ಯದರ್ಶಿಗಳಾದ ಹೇಮಾ ತುಕಾ ರೆಡ್ಡಿ, ವೀರು ದಿಗ್ವಾಲ್, ಸುನಿಲ್ ಗೌಳಿ, ಗಣೇಶ ಬೋಸ್ಲೆ, ಚಂದ್ರಯ್ಯ ಸ್ವಾಮಿ, ನರೇಶ್ ಗೌಳಿ, ರೋಷನ್ ವರ್ಮಾ, ವೀರೇಶ್ ಸ್ವಾಮಿ, ಸುಭಾಷ್ ಮಡಿವಾಳ ಮಹಾನದಾ ಪಾಟೀಲ್, ಗುಂಡಮ್ಮ, ಮಾಯಾವತಿ ಕೋಟೆ, ಜಗನ್ನಾಥ್ ಪಾಟೀಲ್ ಸಿರಿಕಟ್ನಳ್ಳಿ, ರೈತ ಮೋರ್ಚಾ ಅಧ್ಯಕ್ಷರು ಹಾಗೂ ರೈತರು ಉಪಸ್ಥಿತರಿದ್ದರು.

ವರದಿ: ಶಿವು ರಾಥೋಡ

Latest News

Put 1 get a double stacks free 80 spins hundred free revolves to your Fortunium Gold Super Moolah

BlogsDouble stacks free 80 spins | Canadian step one money depositsPrecious

Boat Online such broker bear blast slot free spins as Yahtzee

BlogsBroker bear blast slot free spins: The brand new Dice:Yahtzee ThumbAdded

Păcănele Online Sweet nv casino Bonanza Gratis În Dans Pacanele

ContentNv casino | Caracteristica Bonus Roata Grămadă Să BaniSă Sunt Pacanele

Hra Chicken Road od InOut Games se blíží k velikosti velkého města.

Theme a Design Hra Chicken Road je netradiční online herní automat

42 ಸಾಧಕರು,3 ಸಂಘಗಳಿಗೆ ಪ್ರಶಸ್ತಿ :                                      ಜ.31 ರಂದು ಸ್ವಾಮಿ ವಿವೇಕಾನಂದರ ಸದ್ಭಾವನಾ ಪ್ರಶಸ್ತಿ ಪ್ರದಾನ

42 ಸಾಧಕರು,3 ಸಂಘಗಳಿಗೆ ಪ್ರಶಸ್ತಿ : ಜ.31 ರಂದು ಸ್ವಾಮಿ ವಿವೇಕಾನಂದರ ಸದ್ಭಾವನಾ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು ಅಶ್ಲೀಲತೆಯ ಸೋಂಕಿಲ್ಲದoತೆ ಪ್ರದರ್ಶನ ನೀಡಲು ತಾಕೀತು ಮಾಡಿದ್ದೇವೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಬಾಲಾಜಿ ಹಾಗೂ ಜಿಲ್ಲಾ ಅಧ್ಯಕ್ಷ ಪುಂಡಲೀಕ ಮುರಾಳ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಇತರೆ ಸಂಘಟನೆಗಳ ಸಹಯೋಗದಲ್ಲಿ ಸ್ವಾಮಿ

ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ಮುದ್ದೇಬಿಹಾಳ : ಪ್ರಸ್ತುತ ವಿಜಯಪುರ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾರಹಿತ ಪದವಿ ಕಾಲೇಜುಗಳು ಬೆಳಗಾವಿಯ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈಗ ವಿಜಯಪುರ ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳನ್ನು ಬಾಗಲಕೋಟಿ ಜಿಲ್ಲೆಯ ಜಮಖಂಡಿಯಲ್ಲಿರುವ ವಿಶ್ವವದ್ಯಾಲಯಕ್ಕೆ ಸೇರಿಸುವ ಬಹಳಷ್ಟು ಹುನ್ನಾರ ನಡೆದಿದೆ ಎಂದು ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಎಲ್ಲ ಕಾಲೇಜುಗಳನ್ನು ವಿಜಯಪುರದಲ್ಲಿ ಈಗಾಗಲೇ