They laid siege to the taluk agriculture office demanding to solve the problems of the farmers

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಇಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲ್ಲೂಕು ಕೃಷಿ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟನಾಕಾರರು, ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಧನವನ್ನು ರೈತರ ಖಾತೆಗೆ ತಕ್ಷಣವೇ ಜಮಾ ಮಾಡಬೇಕೆಂದು ಆಗ್ರಹಿಸಿದರು.

ಹಾಲು ಉತ್ಪಾದಕರಿಗೆ ಪ್ರತಿ ಲಿಟರ್‌ಗೆ 5 ರೂ. ಪ್ರೋತ್ಸಾಹ ಧನದ ಬಾಕಿ ಇರುವ 62೦ ಕೋಟಿ ರೂ. ಅನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಈ ಪ್ರೋತ್ಸಾಹ ಧನವನ್ನು 7 ರೂ.ಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 3,3೦೦ ದರವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಮಾನವಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಜೊತೆಗೆ, ಹಿಂದಿನಂತೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಭಾಗವಾಗಿ ರಾಜ್ಯ ಸರ್ಕಾರದಿಂದ ಪ್ರತಿ ರೈತನಿಗೆ ವರ್ಷಕ್ಕೆ ರೂ. 4,೦೦೦ ನೆರವು ಪುನಃ ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸಲಾಯಿತು. ಬಿ. ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಜಾರಿಯಲ್ಲಿದ್ದ ರೂ. 25,೦೦೦ ಶುಲ್ಕದಲ್ಲಿ ಟ್ರಾನ್ಸ್ಫಾರ್ಮರ್ ಹಾಗೂ ಶಾಶ್ವತ ವಿದ್ಯುತ್ ಸಂಪರ್ಕ ಒದಗಿಸುವ ಯೋಜನೆಯನ್ನು ತಕ್ಷಣ ಪುನಃ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಗರಿಷ್ಠ ರೂ. ೧೦ ಲಕ್ಷವರೆಗೆ ಸಾಲ ಸೌಲಭ್ಯ ನೀಡಬೇಕು. ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಸಬ್ಸಿಡಿ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು. ಈ ಕುರಿತು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸೋಮನಾಥ್ ಪಾಟೀಲ್, ಶಾಸಕರಾದ ಡಾ|| ಶೈಲೇಂದ್ರ ಬೆಲ್ದಾಳೆ, ಮಾಜಿ ಕೇಂದ್ರ ಸಚಿವರಾದ ಶ್ರೀ ಭಗವಂತ್ ಖೂಬಾ, ಈಶ್ವರ್ ಸಿಂಗ್ ಠಾಕೂರ್, ದಕ್ಸಿಣ ಮಂಡಲ್ ಅಧ್ಯಕ್ಷರಾದ ಗುರುನಾಥ್ ರಾಜಗಿರ, ಗ್ರಾಮಾಂತರ ಅಧ್ಯಕ್ಷರಾದ ದೀಪಕ ಗಾದಗೆ, ನಗರ ಅಧ್ಯಕ್ಷರಾದ ಶಶಿಧರ ಹೊಸಳ್ಳಿ, ಮುಖಂಡರಾದ ವೀರಶಟ್ಟಿ ನಿಡವಂಚಾ, ಗುರುನಾಥ್ ಜಾಂತಿಕರ್, ರಾಜಶೇಖರ್ ನಾಗಮೂರ್ತಿ, ಅಶೋಕ ಹೊಕ್ರಣೆ, ಬಾಬುರಾವ್ ಕಾರ್ ಬಾರಿ, ಬಸವರಾಜ್ ಪವಾರ್, ಮಹಿಳಾ ರಾಜ್ಯ ಕಾರ್ಯದರ್ಶಿಗಳಾದ ಹೇಮಾ ತುಕಾ ರೆಡ್ಡಿ, ವೀರು ದಿಗ್ವಾಲ್, ಸುನಿಲ್ ಗೌಳಿ, ಗಣೇಶ ಬೋಸ್ಲೆ, ಚಂದ್ರಯ್ಯ ಸ್ವಾಮಿ, ನರೇಶ್ ಗೌಳಿ, ರೋಷನ್ ವರ್ಮಾ, ವೀರೇಶ್ ಸ್ವಾಮಿ, ಸುಭಾಷ್ ಮಡಿವಾಳ ಮಹಾನದಾ ಪಾಟೀಲ್, ಗುಂಡಮ್ಮ, ಮಾಯಾವತಿ ಕೋಟೆ, ಜಗನ್ನಾಥ್ ಪಾಟೀಲ್ ಸಿರಿಕಟ್ನಳ್ಳಿ, ರೈತ ಮೋರ್ಚಾ ಅಧ್ಯಕ್ಷರು ಹಾಗೂ ರೈತರು ಉಪಸ್ಥಿತರಿದ್ದರು.

ವರದಿ: ಶಿವು ರಾಥೋಡ

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ