They laid siege to the taluk agriculture office demanding to solve the problems of the farmers

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಇಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲ್ಲೂಕು ಕೃಷಿ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟನಾಕಾರರು, ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಧನವನ್ನು ರೈತರ ಖಾತೆಗೆ ತಕ್ಷಣವೇ ಜಮಾ ಮಾಡಬೇಕೆಂದು ಆಗ್ರಹಿಸಿದರು.

ಹಾಲು ಉತ್ಪಾದಕರಿಗೆ ಪ್ರತಿ ಲಿಟರ್‌ಗೆ 5 ರೂ. ಪ್ರೋತ್ಸಾಹ ಧನದ ಬಾಕಿ ಇರುವ 62೦ ಕೋಟಿ ರೂ. ಅನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಈ ಪ್ರೋತ್ಸಾಹ ಧನವನ್ನು 7 ರೂ.ಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 3,3೦೦ ದರವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಮಾನವಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಜೊತೆಗೆ, ಹಿಂದಿನಂತೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಭಾಗವಾಗಿ ರಾಜ್ಯ ಸರ್ಕಾರದಿಂದ ಪ್ರತಿ ರೈತನಿಗೆ ವರ್ಷಕ್ಕೆ ರೂ. 4,೦೦೦ ನೆರವು ಪುನಃ ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸಲಾಯಿತು. ಬಿ. ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಜಾರಿಯಲ್ಲಿದ್ದ ರೂ. 25,೦೦೦ ಶುಲ್ಕದಲ್ಲಿ ಟ್ರಾನ್ಸ್ಫಾರ್ಮರ್ ಹಾಗೂ ಶಾಶ್ವತ ವಿದ್ಯುತ್ ಸಂಪರ್ಕ ಒದಗಿಸುವ ಯೋಜನೆಯನ್ನು ತಕ್ಷಣ ಪುನಃ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಗರಿಷ್ಠ ರೂ. ೧೦ ಲಕ್ಷವರೆಗೆ ಸಾಲ ಸೌಲಭ್ಯ ನೀಡಬೇಕು. ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಸಬ್ಸಿಡಿ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು. ಈ ಕುರಿತು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸೋಮನಾಥ್ ಪಾಟೀಲ್, ಶಾಸಕರಾದ ಡಾ|| ಶೈಲೇಂದ್ರ ಬೆಲ್ದಾಳೆ, ಮಾಜಿ ಕೇಂದ್ರ ಸಚಿವರಾದ ಶ್ರೀ ಭಗವಂತ್ ಖೂಬಾ, ಈಶ್ವರ್ ಸಿಂಗ್ ಠಾಕೂರ್, ದಕ್ಸಿಣ ಮಂಡಲ್ ಅಧ್ಯಕ್ಷರಾದ ಗುರುನಾಥ್ ರಾಜಗಿರ, ಗ್ರಾಮಾಂತರ ಅಧ್ಯಕ್ಷರಾದ ದೀಪಕ ಗಾದಗೆ, ನಗರ ಅಧ್ಯಕ್ಷರಾದ ಶಶಿಧರ ಹೊಸಳ್ಳಿ, ಮುಖಂಡರಾದ ವೀರಶಟ್ಟಿ ನಿಡವಂಚಾ, ಗುರುನಾಥ್ ಜಾಂತಿಕರ್, ರಾಜಶೇಖರ್ ನಾಗಮೂರ್ತಿ, ಅಶೋಕ ಹೊಕ್ರಣೆ, ಬಾಬುರಾವ್ ಕಾರ್ ಬಾರಿ, ಬಸವರಾಜ್ ಪವಾರ್, ಮಹಿಳಾ ರಾಜ್ಯ ಕಾರ್ಯದರ್ಶಿಗಳಾದ ಹೇಮಾ ತುಕಾ ರೆಡ್ಡಿ, ವೀರು ದಿಗ್ವಾಲ್, ಸುನಿಲ್ ಗೌಳಿ, ಗಣೇಶ ಬೋಸ್ಲೆ, ಚಂದ್ರಯ್ಯ ಸ್ವಾಮಿ, ನರೇಶ್ ಗೌಳಿ, ರೋಷನ್ ವರ್ಮಾ, ವೀರೇಶ್ ಸ್ವಾಮಿ, ಸುಭಾಷ್ ಮಡಿವಾಳ ಮಹಾನದಾ ಪಾಟೀಲ್, ಗುಂಡಮ್ಮ, ಮಾಯಾವತಿ ಕೋಟೆ, ಜಗನ್ನಾಥ್ ಪಾಟೀಲ್ ಸಿರಿಕಟ್ನಳ್ಳಿ, ರೈತ ಮೋರ್ಚಾ ಅಧ್ಯಕ್ಷರು ಹಾಗೂ ರೈತರು ಉಪಸ್ಥಿತರಿದ್ದರು.

ವರದಿ: ಶಿವು ರಾಥೋಡ

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ