ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ಶoಕರ ಈ.ಹೆಬ್ಬಾಳ
ಮುದ್ದೇಬಿಹಾಳ : ಹೌದು.ಅಕ್ಷರಶಃ ಈ ಸಾಮಾಜಿಕ ವ್ಯವಸ್ಥೆಯಲ್ಲಿ ಪ್ರಮುಖ ಸ್ತರದಲ್ಲಿರುವ ಹುದ್ದೆಗಳಲ್ಲಿರುವವರು ಪ್ರಾಮಾಣಿಕರೇ,ದಕ್ಷರೋ ಎಂದು ಒರೆಗಲ್ಲಿಗೆ ಹಚ್ಚಿ ನವೀರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಕ್ಕು ನಗಿಸಿದ ಕಳ್ಳರ ಸಂತೆ ನಾಟಕ ವೈಚಾರಿಕ ಚಿಂತನೆಗೆ ಹಚ್ಚಿತು.

ರಾಜ್ಯದಲ್ಲಿ ತೀವ್ರ ಬರಗಾಲ ಬಿದ್ದ ಸಮಯದಲ್ಲಿ ಅರಮನೆಯಲ್ಲಿನ ಖಜಾನೆ ಲೂಟಿಗೆ ಬರುವ ಕಳ್ಳರಿಬ್ಬರಲ್ಲಿ ಓರ್ವ ಕಳ್ಳ ತಾನು ನಂಬಿದ ವಿದ್ಯೆಯನ್ನು ತನ್ನ ಜೀವ ಉಳಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ವ್ಯವಸ್ಥೆ ಎಷ್ಟೊಂದು ಹದಗೆಟ್ಟಿದೆ ಎಂಬುದನ್ನು ನಾಟಕ ನಿರೂಪಿಸಿತು.

ಕೃಷ್ಣಮೂರ್ತಿ ಎಸ್.ತಾಳಿಕಟ್ಟಿ ರಚಿಸಿ ನಿದೇರ್ಶನ ಮಾಡಿದ ನಾಟಕವನ್ನು ಶಿವಸಂಚಾರ ಕಲಾ ತಂಡದ ಸದಸ್ಯರು ನಟಿಸಿದರು.
ಮಳೆ ಬೀಜ ಬಿತ್ತಲು ಜೀವನದಲ್ಲಿ ಯಾವುದೆ ತಪ್ಪು ಮಾಡದ,ಸುಳ್ಳು ಹೇಳದ,ನಂಬಿಕೆ ದ್ರೋಹ ಎಸಗದ ವ್ಯಕ್ತಿ ಸಿಗದೇ ಇರುವುದನ್ನು ನಾಟಕದಲ್ಲಿ ಪಾತ್ರಧಾರಿಗಳು ಮನೋಜ್ಞವಾಗಿ ಅಭಿನಯಿಸಿ ತೋರಿಸಿದರು.ರಾಜ್ಯ ಆಳುವ ಅರಸ,ಮಂತ್ರಿ,ನ್ಯಾಯ ಹೇಳುವ ನ್ಯಾಯಾಧೀಶ,ಧರ್ಮಶಾಸ್ತç ಹೇಳುವ ಸ್ವಾಮೀಜಿ,ರಾಜ್ಯ ಆಳುವ ರಾಜಕಾರಣಿ, ಕಳ್ಳರನ್ನು ಹಿಡಿಯುವ ಪೊಲೀಸ್ ಅಧಿಕಾರಿಗಳಿಂದಲೂ ಮಳೆ ಬೀಜ ಬಿತ್ತಲು ಆಗದೇ ಇರುವುದನ್ನು ನಾಟಕ ವ್ಯವಸ್ಥೆಯಲ್ಲಿ ಯಾರೊಬ್ಬರೂ ಪ್ರಾಮಾಣಿಕರಲ್ಲ ಎಂಬುದನ್ನು ಬಿಂಬಿಸಿತು.

ಕೊನೆಗೆ ರೈತರೇ ಮಳೆ ಬೀಜವನ್ನು ಬಿತ್ತಿ ನಾಡಿಗೆ ಅನ್ನ ನೀಡುತ್ತಾರೆ ಎಂಬ ಸಂದೇಶವನ್ನು ನಾಟಕ ನೀಡಿತು.ವಿಶ್ವ ದಾಸೋಹ ದಿನದ ಅಂಗವಾಗಿ ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ನೇತೃತ್ವದಲ್ಲಿ ಮೂರು ದಿನದ ನಾಟಕೋತ್ವವದಲ್ಲಿ ಎರಡನೇ ದಿನದ ನಾಟಕ ಜನರನ್ನು ನಗಿಸುವುದರೊಂದಿಗೆ ವೈಚಾರಿಕ ಚಿಂತನೆಗೀಡು ಮಾಡಿತು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ