ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ ಬಗ್ಗೆ ಮಾತನಾಡಲು ನಾವೆಲ್ಲ ಬಹಳ ಸಣ್ಣವರು.ಈ ವಿಷಯದ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರೇ ಹೇಳಿಕೆ ಕೊಟ್ಟಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು. ಸುಗಮವಾಗಿ ,ಸರಳವಾಗಿ ಸರಕಾರ ನಡೆದಿದೆ.ಮಂತ್ರಿ ಮಂಡಲದ ಬದಲಾವಣೆ ಆಗುವುದು ಸಹಜ.ಕೆಲವರು ಬದಲಾಗುತ್ತಾರೆ.ಹೋದ ಸಲ ನನ್ನ ಹೆಸರು ಲೀಸ್ಟ್ನಲ್ಲಿ ಹೆಸರಿತ್ತು.ಕೊನೆಯ ಕ್ಷಣದಲ್ಲಿ ಕೈ ಬಿಟ್ಟರು.ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದು ಅವರಲ್ಲಿ ಯಾರಾದರೂ ಸಚಿವ ಸ್ಥಾನ ತ್ಯಾಗ ಮಾಡಿದರೆ ಆ ಸ್ಥಾನಕ್ಕೆ ಹಿರಿಯನಾದ ನನ್ನನ್ನು ಪರಿಗಣಿಸಬೇಕು ಎಂದು ಹೈಕಮಾಂಡ್‌ಗೆ ವಿನಂತಿಸಿದ್ದೇನೆ.ಹೈಕಮಾಂಡ್ ಯಾರಿಗೆ ಸೂಚನೆ ಕೊಡುತ್ತದೆಯೋ ಅದರಂತೆ ನಡೆಯುತ್ತೇವೆ.ನಾನು ಯಾರಿಗೂ ಸ್ಥಾನ ತ್ಯಾಗ ಮಾಡಲು ಹೇಳುವುದಿಲ್ಲ.ಅಲ್ಲದೇ ಅಷ್ಟು ದೊಡ್ಡವನು ನಾನಲ್ಲ ಎಂದು ತಿಳಿಸಿದ ನಾಡಗೌಡ, ಈ ಬಾರಿ ನನ್ನನ್ನು ಮಂತ್ರಿ ಮಾಡುವ ಆಶ್ವಾಸನೆಯನ್ನು ಹೈಕಮಾಂಡ್‌ನಿoದ ಸಿಕ್ಕಿದೆ.ಸಂಪುಟದಲ್ಲಿ ಇರುವ ವಿಶ್ವಾಸ ಇದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಉದ್ಯಮಿ ಶರಣು ಸಜ್ಜನ,ಸಿಕಂದರ ಜಾನ್ವೆಕರ,ರಾಜು ರಾಯಗೊಂಡ,ಶಿವು ಶಿವಪೂರ, ರಾಜು ಗೌಡರ,ರಾಯನಗೌಡ ತಾತರೆಡ್ಡಿ ಇದ್ದರು.

ನನಗೆ ನೋವಾಗಿದೆ’:

ಈ ಸಲದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಮುದ್ದೇಬಿಹಾಳದಿಂದ ಹಿರಿಯ ಸಾಹಿತಿ ಬಿ.ಎಂ.ಹಿರೇಮಠ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದೇವು.ಆದರೆ ಅದಕ್ಕೆ ಸಂಬoಧಿಸಿದ ಇಲಾಖೆಯಿಂದ ಸ್ಪಂದನೆ ದೊರೆಯಲಿಲ್ಲ.ಅಲ್ಲದೇ ಕೆಲವು ನಿಗಮ ಮಂಡಳಿಗಳಿಗೆ ಕಾರ್ಯಕರ್ತರಿಗೆ ಸ್ಥಾನಮಾನ ನೀಡುವಂತೆ ಪತ್ರ ಬರೆದಿದ್ದರೂ ಅದಕ್ಕೂ ಈವರೆಗೆ ಯಾವುದೇ ಉತ್ತರ ಬಂದಿಲ್ಲ.ಇದರಿoದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಶಾಸಕ ನಾಡಗೌಡ ತಿಳಿಸಿದರು.ಹೈಕಮಾಂಡ್ ಹೇಳಿದರೆ ಇವತ್ತೇ ನನ್ನ ನಿಗಮದ ಅಧ್ಯಕ್ಷಗಿರಿಗೆ ರಾಜೀನಾಮೆ ನೀಡುವೆ ಎಂದೂ ತಿಳಿಸಿದರು.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ