ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ ಬಗ್ಗೆ ಮಾತನಾಡಲು ನಾವೆಲ್ಲ ಬಹಳ ಸಣ್ಣವರು.ಈ ವಿಷಯದ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರೇ ಹೇಳಿಕೆ ಕೊಟ್ಟಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು. ಸುಗಮವಾಗಿ ,ಸರಳವಾಗಿ ಸರಕಾರ ನಡೆದಿದೆ.ಮಂತ್ರಿ ಮಂಡಲದ ಬದಲಾವಣೆ ಆಗುವುದು ಸಹಜ.ಕೆಲವರು ಬದಲಾಗುತ್ತಾರೆ.ಹೋದ ಸಲ ನನ್ನ ಹೆಸರು ಲೀಸ್ಟ್ನಲ್ಲಿ ಹೆಸರಿತ್ತು.ಕೊನೆಯ ಕ್ಷಣದಲ್ಲಿ ಕೈ ಬಿಟ್ಟರು.ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದು ಅವರಲ್ಲಿ ಯಾರಾದರೂ ಸಚಿವ ಸ್ಥಾನ ತ್ಯಾಗ ಮಾಡಿದರೆ ಆ ಸ್ಥಾನಕ್ಕೆ ಹಿರಿಯನಾದ ನನ್ನನ್ನು ಪರಿಗಣಿಸಬೇಕು ಎಂದು ಹೈಕಮಾಂಡ್‌ಗೆ ವಿನಂತಿಸಿದ್ದೇನೆ.ಹೈಕಮಾಂಡ್ ಯಾರಿಗೆ ಸೂಚನೆ ಕೊಡುತ್ತದೆಯೋ ಅದರಂತೆ ನಡೆಯುತ್ತೇವೆ.ನಾನು ಯಾರಿಗೂ ಸ್ಥಾನ ತ್ಯಾಗ ಮಾಡಲು ಹೇಳುವುದಿಲ್ಲ.ಅಲ್ಲದೇ ಅಷ್ಟು ದೊಡ್ಡವನು ನಾನಲ್ಲ ಎಂದು ತಿಳಿಸಿದ ನಾಡಗೌಡ, ಈ ಬಾರಿ ನನ್ನನ್ನು ಮಂತ್ರಿ ಮಾಡುವ ಆಶ್ವಾಸನೆಯನ್ನು ಹೈಕಮಾಂಡ್‌ನಿoದ ಸಿಕ್ಕಿದೆ.ಸಂಪುಟದಲ್ಲಿ ಇರುವ ವಿಶ್ವಾಸ ಇದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಉದ್ಯಮಿ ಶರಣು ಸಜ್ಜನ,ಸಿಕಂದರ ಜಾನ್ವೆಕರ,ರಾಜು ರಾಯಗೊಂಡ,ಶಿವು ಶಿವಪೂರ, ರಾಜು ಗೌಡರ,ರಾಯನಗೌಡ ತಾತರೆಡ್ಡಿ ಇದ್ದರು.

ನನಗೆ ನೋವಾಗಿದೆ’:

ಈ ಸಲದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಮುದ್ದೇಬಿಹಾಳದಿಂದ ಹಿರಿಯ ಸಾಹಿತಿ ಬಿ.ಎಂ.ಹಿರೇಮಠ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದೇವು.ಆದರೆ ಅದಕ್ಕೆ ಸಂಬoಧಿಸಿದ ಇಲಾಖೆಯಿಂದ ಸ್ಪಂದನೆ ದೊರೆಯಲಿಲ್ಲ.ಅಲ್ಲದೇ ಕೆಲವು ನಿಗಮ ಮಂಡಳಿಗಳಿಗೆ ಕಾರ್ಯಕರ್ತರಿಗೆ ಸ್ಥಾನಮಾನ ನೀಡುವಂತೆ ಪತ್ರ ಬರೆದಿದ್ದರೂ ಅದಕ್ಕೂ ಈವರೆಗೆ ಯಾವುದೇ ಉತ್ತರ ಬಂದಿಲ್ಲ.ಇದರಿoದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಶಾಸಕ ನಾಡಗೌಡ ತಿಳಿಸಿದರು.ಹೈಕಮಾಂಡ್ ಹೇಳಿದರೆ ಇವತ್ತೇ ನನ್ನ ನಿಗಮದ ಅಧ್ಯಕ್ಷಗಿರಿಗೆ ರಾಜೀನಾಮೆ ನೀಡುವೆ ಎಂದೂ ತಿಳಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ