6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು, ಸ್ಥಿತಿವಂತರು ಈ ಯೋಜನೆಗಳನ್ನು ಪಡೆದುಕೊಳ್ಳದೇ ಬಿಟ್ಟುಕೊಡುವ ಕಾರ್ಯ ಮಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ನಿಧಿ ಯೋಜನೆಯಡಿ ಸನ್ 2025-26ನೇ ಸಾಲಿನಲ್ಲಿ ರಾಜ್ಯ ಹೆದ್ದಾರಿ 161ರಲ್ಲಿ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

ಜನ ಅಭಿವೃದ್ಧಿ ಮಾಡಲು ಜನ ಆಯ್ಕೆ ಮಾಡಿ ಕಳಿಸಿದ್ದಾರೆ.ನಿರೀಕ್ಷಿತ ಅಭಿವೃದ್ಧಿ ಆಗಿಲ್ಲ ಎಂಬ ಕೊರಗು ಹಲವರಲ್ಲಿದೆ.ಆದರೆ ಹಿಂದಿನ ಸರ್ಕಾರ 1.20 ಲಕ್ಷ ಕೋಟಿ ರೂ.ಬಿಲ್ ಕೊಡುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಬಿದ್ದಿವೆ.ಹಿಂದಿನ ಸರ್ಕಾರದಲ್ಲಿ ಬಾಕಿ ಇರಿಸಿದ್ದ ಬಿಲ್‌ನ್ನು ನಾವು ಕೊಡಬೇಕಾಯಿತು.ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುವವರು ಯೋಜನೆಗಳನ್ನು ಹಿಂದಿರುಗಿಸಿ ಅಥವಾ ನಿರಾಕರಿಸಬೇಕು ಎಂದು ಹೇಳಿದರು.

33 ಸಾವಿರ ಕೋಟಿ ರೂ.ಗುತ್ತಿಗೆದಾರರ ಬಿಲ್ ಬಾಕಿ ಇದೆ. ಅಭಿವೃದ್ಧಿ ನಿಲ್ಲದ ಹಾಗೆ ಸರ್ಕಾರ ಪ್ರಯತ್ನ ಮಾಡುತ್ತಿದೆ. ಮತಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ಧರಾಮಯ್ಯ ಎರಡು ವರ್ಷದಲ್ಲಿ ಸಾಕಷ್ಟು ಅನುದಾನ ನೀಡಿದ್ದಾರೆ.ಹಿಂದೆ 15 ಲಕ್ಷ ರೂ.ಗಳಲ್ಲಿ ಒಂದು ಕಿ.ಮೀ ರಸ್ತೆ ಮಾಡುತ್ತಿದ್ದರೆ ಈಗ ಒಂದು ಕೋಟಿ ರೂ.ಗೆ ಕಿ.ಮೀ ರಸ್ತೆಗೆ ವೆಚ್ಚ ಆಗುತ್ತಿದೆ.ನಾವು ರಾಜಕೀಯ ಭಾಷಣ ಮಾಡುವವರನ್ನು ನಂಬುತ್ತೇವೆ.ನಾವು ಅಭಿವೃದ್ಧಿ ಮಾಡಿದ್ದೇವೆ.ಅವಕಾಶ ಸಿಕ್ಕಾಗ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದಿದ್ದೇವೆ ಎಂದರು.

ನಮ್ಮ ಅಭಿವೃದ್ಧಿ ಕೆಲಸಗಳಿಗೆ ಪ್ರಚಾರ ಕೊಡುವಂತಹದ್ದಲ್ಲ.ಪ್ರಚಾರ ಮಾಡುವುದೇನಿದೆ.ಜನರು ಕೊಟ್ಟ ದುಡ್ಡನ್ನು ಜನರ ಅಭಿವೃದ್ದಿಗೆ ಬಳಸುತ್ತಿದ್ದೇವೆ ಎಂದರು.

ಪಿಡಬ್ಲೂö್ಯಡಿ ಎಇಇ ಅಯ್ಯಪ್ಪಗೌಡ ರೆಡ್ಡಿ ಮಾತನಾಡಿ, ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ 500 ಮೀ ರಸ್ತೆಯನ್ನು 6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಲಾಗುತ್ತಿದ್ದು ಅಕ್ಕಪಕ್ಕದಲ್ಲಿ ಚರಂಡಿ,ಮಧ್ಯೆದಲ್ಲಿ ಡಿವೈಡರ್,ಬೀದಿ ದೀಪ ಅಳವಡಿಸಲಾಗುತ್ತದೆ ಎಂದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಕೆಪಿಸಿಸಿ ಸದಸ್ಯ ರಮೇಶ ಓಸ್ವಾಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಸತೀಶ ಓಸ್ವಾಲ್, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ,ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಎಸ್.ಪಾಟೀಲ,ವಾಸುದೇವ ಶಾಸ್ತಿçÃ,ಪ್ರಭುರಾಜ ಕಲ್ಬುರ್ಗಿ, ಕಾಮರಾಜ ಬಿರಾದಾರ,ಶರಣು ಸಜ್ಜನ, ಸಂಗನಗೌಡ ಬಿರಾದಾರ, ಸುರೇಶಗೌಡ ಪಾಟೀಲ ಇಂಗಳಗೇರಿ,ಪುರಸಭೆ ಸದಸ್ಯರು,ನಾಮನಿರ್ದೇಶಿತ ಸದಸ್ಯರು,ಕಾಂಗ್ರೆಸ್ ಮುಖಂಡರು ಇದ್ದರು.

80 ಮರಗಳ ತೆರವು :
ಈ ರಸ್ತೆ ಅಭಿವೃದ್ಧಿಗಾಗಿ ಆಲಮಟ್ಟಿ ರಸ್ತೆಯಲ್ಲಿ ಬೆಳೆದು ನಿಂತಿರುವ ಸುಮಾರು 30-40 ವರ್ಷದಷ್ಟು ಹಳೆಯದಾಗಿರುವ ಬೇವಿನ ಮರಗಳನ್ನು ತೆರವುಗೊಳಿಸಲಾಗುವುದು ಎಂದು ಪಿಡಬ್ಲೂö್ಯಡಿ ಎಇಇ ಮಾಹಿತಿ ನೀಡಿದರು.ಅಂದಾಜು 80 ಮರಗಳನ್ನು ರಸ್ತೆಯ ಅಭಿವೃದ್ಧಿಗಾಗಿ ತೆರವು ಮಾಡಲಾಗುತ್ತದೆ ಎಂದಾಗ ಶಾಸಕರು ಮಧ್ಯಪ್ರವೇಶಿಸಿ ಈಗಿರುವ ಮರಗಳಿಗಿಂತ ಒಳ್ಳೆಯ ಗಿಡಗಳನ್ನು ನೆಡುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ