6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು, ಸ್ಥಿತಿವಂತರು ಈ ಯೋಜನೆಗಳನ್ನು ಪಡೆದುಕೊಳ್ಳದೇ ಬಿಟ್ಟುಕೊಡುವ ಕಾರ್ಯ ಮಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ನಿಧಿ ಯೋಜನೆಯಡಿ ಸನ್ 2025-26ನೇ ಸಾಲಿನಲ್ಲಿ ರಾಜ್ಯ ಹೆದ್ದಾರಿ 161ರಲ್ಲಿ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

ಜನ ಅಭಿವೃದ್ಧಿ ಮಾಡಲು ಜನ ಆಯ್ಕೆ ಮಾಡಿ ಕಳಿಸಿದ್ದಾರೆ.ನಿರೀಕ್ಷಿತ ಅಭಿವೃದ್ಧಿ ಆಗಿಲ್ಲ ಎಂಬ ಕೊರಗು ಹಲವರಲ್ಲಿದೆ.ಆದರೆ ಹಿಂದಿನ ಸರ್ಕಾರ 1.20 ಲಕ್ಷ ಕೋಟಿ ರೂ.ಬಿಲ್ ಕೊಡುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಬಿದ್ದಿವೆ.ಹಿಂದಿನ ಸರ್ಕಾರದಲ್ಲಿ ಬಾಕಿ ಇರಿಸಿದ್ದ ಬಿಲ್‌ನ್ನು ನಾವು ಕೊಡಬೇಕಾಯಿತು.ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುವವರು ಯೋಜನೆಗಳನ್ನು ಹಿಂದಿರುಗಿಸಿ ಅಥವಾ ನಿರಾಕರಿಸಬೇಕು ಎಂದು ಹೇಳಿದರು.

33 ಸಾವಿರ ಕೋಟಿ ರೂ.ಗುತ್ತಿಗೆದಾರರ ಬಿಲ್ ಬಾಕಿ ಇದೆ. ಅಭಿವೃದ್ಧಿ ನಿಲ್ಲದ ಹಾಗೆ ಸರ್ಕಾರ ಪ್ರಯತ್ನ ಮಾಡುತ್ತಿದೆ. ಮತಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ಧರಾಮಯ್ಯ ಎರಡು ವರ್ಷದಲ್ಲಿ ಸಾಕಷ್ಟು ಅನುದಾನ ನೀಡಿದ್ದಾರೆ.ಹಿಂದೆ 15 ಲಕ್ಷ ರೂ.ಗಳಲ್ಲಿ ಒಂದು ಕಿ.ಮೀ ರಸ್ತೆ ಮಾಡುತ್ತಿದ್ದರೆ ಈಗ ಒಂದು ಕೋಟಿ ರೂ.ಗೆ ಕಿ.ಮೀ ರಸ್ತೆಗೆ ವೆಚ್ಚ ಆಗುತ್ತಿದೆ.ನಾವು ರಾಜಕೀಯ ಭಾಷಣ ಮಾಡುವವರನ್ನು ನಂಬುತ್ತೇವೆ.ನಾವು ಅಭಿವೃದ್ಧಿ ಮಾಡಿದ್ದೇವೆ.ಅವಕಾಶ ಸಿಕ್ಕಾಗ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದಿದ್ದೇವೆ ಎಂದರು.

ನಮ್ಮ ಅಭಿವೃದ್ಧಿ ಕೆಲಸಗಳಿಗೆ ಪ್ರಚಾರ ಕೊಡುವಂತಹದ್ದಲ್ಲ.ಪ್ರಚಾರ ಮಾಡುವುದೇನಿದೆ.ಜನರು ಕೊಟ್ಟ ದುಡ್ಡನ್ನು ಜನರ ಅಭಿವೃದ್ದಿಗೆ ಬಳಸುತ್ತಿದ್ದೇವೆ ಎಂದರು.

ಪಿಡಬ್ಲೂö್ಯಡಿ ಎಇಇ ಅಯ್ಯಪ್ಪಗೌಡ ರೆಡ್ಡಿ ಮಾತನಾಡಿ, ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ 500 ಮೀ ರಸ್ತೆಯನ್ನು 6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಲಾಗುತ್ತಿದ್ದು ಅಕ್ಕಪಕ್ಕದಲ್ಲಿ ಚರಂಡಿ,ಮಧ್ಯೆದಲ್ಲಿ ಡಿವೈಡರ್,ಬೀದಿ ದೀಪ ಅಳವಡಿಸಲಾಗುತ್ತದೆ ಎಂದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಕೆಪಿಸಿಸಿ ಸದಸ್ಯ ರಮೇಶ ಓಸ್ವಾಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಸತೀಶ ಓಸ್ವಾಲ್, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ,ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಎಸ್.ಪಾಟೀಲ,ವಾಸುದೇವ ಶಾಸ್ತಿçÃ,ಪ್ರಭುರಾಜ ಕಲ್ಬುರ್ಗಿ, ಕಾಮರಾಜ ಬಿರಾದಾರ,ಶರಣು ಸಜ್ಜನ, ಸಂಗನಗೌಡ ಬಿರಾದಾರ, ಸುರೇಶಗೌಡ ಪಾಟೀಲ ಇಂಗಳಗೇರಿ,ಪುರಸಭೆ ಸದಸ್ಯರು,ನಾಮನಿರ್ದೇಶಿತ ಸದಸ್ಯರು,ಕಾಂಗ್ರೆಸ್ ಮುಖಂಡರು ಇದ್ದರು.

80 ಮರಗಳ ತೆರವು :
ಈ ರಸ್ತೆ ಅಭಿವೃದ್ಧಿಗಾಗಿ ಆಲಮಟ್ಟಿ ರಸ್ತೆಯಲ್ಲಿ ಬೆಳೆದು ನಿಂತಿರುವ ಸುಮಾರು 30-40 ವರ್ಷದಷ್ಟು ಹಳೆಯದಾಗಿರುವ ಬೇವಿನ ಮರಗಳನ್ನು ತೆರವುಗೊಳಿಸಲಾಗುವುದು ಎಂದು ಪಿಡಬ್ಲೂö್ಯಡಿ ಎಇಇ ಮಾಹಿತಿ ನೀಡಿದರು.ಅಂದಾಜು 80 ಮರಗಳನ್ನು ರಸ್ತೆಯ ಅಭಿವೃದ್ಧಿಗಾಗಿ ತೆರವು ಮಾಡಲಾಗುತ್ತದೆ ಎಂದಾಗ ಶಾಸಕರು ಮಧ್ಯಪ್ರವೇಶಿಸಿ ಈಗಿರುವ ಮರಗಳಿಗಿಂತ ಒಳ್ಳೆಯ ಗಿಡಗಳನ್ನು ನೆಡುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ