6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು, ಸ್ಥಿತಿವಂತರು ಈ ಯೋಜನೆಗಳನ್ನು ಪಡೆದುಕೊಳ್ಳದೇ ಬಿಟ್ಟುಕೊಡುವ ಕಾರ್ಯ ಮಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ನಿಧಿ ಯೋಜನೆಯಡಿ ಸನ್ 2025-26ನೇ ಸಾಲಿನಲ್ಲಿ ರಾಜ್ಯ ಹೆದ್ದಾರಿ 161ರಲ್ಲಿ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

ಜನ ಅಭಿವೃದ್ಧಿ ಮಾಡಲು ಜನ ಆಯ್ಕೆ ಮಾಡಿ ಕಳಿಸಿದ್ದಾರೆ.ನಿರೀಕ್ಷಿತ ಅಭಿವೃದ್ಧಿ ಆಗಿಲ್ಲ ಎಂಬ ಕೊರಗು ಹಲವರಲ್ಲಿದೆ.ಆದರೆ ಹಿಂದಿನ ಸರ್ಕಾರ 1.20 ಲಕ್ಷ ಕೋಟಿ ರೂ.ಬಿಲ್ ಕೊಡುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಬಿದ್ದಿವೆ.ಹಿಂದಿನ ಸರ್ಕಾರದಲ್ಲಿ ಬಾಕಿ ಇರಿಸಿದ್ದ ಬಿಲ್‌ನ್ನು ನಾವು ಕೊಡಬೇಕಾಯಿತು.ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುವವರು ಯೋಜನೆಗಳನ್ನು ಹಿಂದಿರುಗಿಸಿ ಅಥವಾ ನಿರಾಕರಿಸಬೇಕು ಎಂದು ಹೇಳಿದರು.

33 ಸಾವಿರ ಕೋಟಿ ರೂ.ಗುತ್ತಿಗೆದಾರರ ಬಿಲ್ ಬಾಕಿ ಇದೆ. ಅಭಿವೃದ್ಧಿ ನಿಲ್ಲದ ಹಾಗೆ ಸರ್ಕಾರ ಪ್ರಯತ್ನ ಮಾಡುತ್ತಿದೆ. ಮತಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ಧರಾಮಯ್ಯ ಎರಡು ವರ್ಷದಲ್ಲಿ ಸಾಕಷ್ಟು ಅನುದಾನ ನೀಡಿದ್ದಾರೆ.ಹಿಂದೆ 15 ಲಕ್ಷ ರೂ.ಗಳಲ್ಲಿ ಒಂದು ಕಿ.ಮೀ ರಸ್ತೆ ಮಾಡುತ್ತಿದ್ದರೆ ಈಗ ಒಂದು ಕೋಟಿ ರೂ.ಗೆ ಕಿ.ಮೀ ರಸ್ತೆಗೆ ವೆಚ್ಚ ಆಗುತ್ತಿದೆ.ನಾವು ರಾಜಕೀಯ ಭಾಷಣ ಮಾಡುವವರನ್ನು ನಂಬುತ್ತೇವೆ.ನಾವು ಅಭಿವೃದ್ಧಿ ಮಾಡಿದ್ದೇವೆ.ಅವಕಾಶ ಸಿಕ್ಕಾಗ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದಿದ್ದೇವೆ ಎಂದರು.

ನಮ್ಮ ಅಭಿವೃದ್ಧಿ ಕೆಲಸಗಳಿಗೆ ಪ್ರಚಾರ ಕೊಡುವಂತಹದ್ದಲ್ಲ.ಪ್ರಚಾರ ಮಾಡುವುದೇನಿದೆ.ಜನರು ಕೊಟ್ಟ ದುಡ್ಡನ್ನು ಜನರ ಅಭಿವೃದ್ದಿಗೆ ಬಳಸುತ್ತಿದ್ದೇವೆ ಎಂದರು.

ಪಿಡಬ್ಲೂö್ಯಡಿ ಎಇಇ ಅಯ್ಯಪ್ಪಗೌಡ ರೆಡ್ಡಿ ಮಾತನಾಡಿ, ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ 500 ಮೀ ರಸ್ತೆಯನ್ನು 6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಲಾಗುತ್ತಿದ್ದು ಅಕ್ಕಪಕ್ಕದಲ್ಲಿ ಚರಂಡಿ,ಮಧ್ಯೆದಲ್ಲಿ ಡಿವೈಡರ್,ಬೀದಿ ದೀಪ ಅಳವಡಿಸಲಾಗುತ್ತದೆ ಎಂದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಕೆಪಿಸಿಸಿ ಸದಸ್ಯ ರಮೇಶ ಓಸ್ವಾಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಸತೀಶ ಓಸ್ವಾಲ್, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ,ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಎಸ್.ಪಾಟೀಲ,ವಾಸುದೇವ ಶಾಸ್ತಿçÃ,ಪ್ರಭುರಾಜ ಕಲ್ಬುರ್ಗಿ, ಕಾಮರಾಜ ಬಿರಾದಾರ,ಶರಣು ಸಜ್ಜನ, ಸಂಗನಗೌಡ ಬಿರಾದಾರ, ಸುರೇಶಗೌಡ ಪಾಟೀಲ ಇಂಗಳಗೇರಿ,ಪುರಸಭೆ ಸದಸ್ಯರು,ನಾಮನಿರ್ದೇಶಿತ ಸದಸ್ಯರು,ಕಾಂಗ್ರೆಸ್ ಮುಖಂಡರು ಇದ್ದರು.

80 ಮರಗಳ ತೆರವು :
ಈ ರಸ್ತೆ ಅಭಿವೃದ್ಧಿಗಾಗಿ ಆಲಮಟ್ಟಿ ರಸ್ತೆಯಲ್ಲಿ ಬೆಳೆದು ನಿಂತಿರುವ ಸುಮಾರು 30-40 ವರ್ಷದಷ್ಟು ಹಳೆಯದಾಗಿರುವ ಬೇವಿನ ಮರಗಳನ್ನು ತೆರವುಗೊಳಿಸಲಾಗುವುದು ಎಂದು ಪಿಡಬ್ಲೂö್ಯಡಿ ಎಇಇ ಮಾಹಿತಿ ನೀಡಿದರು.ಅಂದಾಜು 80 ಮರಗಳನ್ನು ರಸ್ತೆಯ ಅಭಿವೃದ್ಧಿಗಾಗಿ ತೆರವು ಮಾಡಲಾಗುತ್ತದೆ ಎಂದಾಗ ಶಾಸಕರು ಮಧ್ಯಪ್ರವೇಶಿಸಿ ಈಗಿರುವ ಮರಗಳಿಗಿಂತ ಒಳ್ಳೆಯ ಗಿಡಗಳನ್ನು ನೆಡುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ