6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು, ಸ್ಥಿತಿವಂತರು ಈ ಯೋಜನೆಗಳನ್ನು ಪಡೆದುಕೊಳ್ಳದೇ ಬಿಟ್ಟುಕೊಡುವ ಕಾರ್ಯ ಮಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ನಿಧಿ ಯೋಜನೆಯಡಿ ಸನ್ 2025-26ನೇ ಸಾಲಿನಲ್ಲಿ ರಾಜ್ಯ ಹೆದ್ದಾರಿ 161ರಲ್ಲಿ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

ಜನ ಅಭಿವೃದ್ಧಿ ಮಾಡಲು ಜನ ಆಯ್ಕೆ ಮಾಡಿ ಕಳಿಸಿದ್ದಾರೆ.ನಿರೀಕ್ಷಿತ ಅಭಿವೃದ್ಧಿ ಆಗಿಲ್ಲ ಎಂಬ ಕೊರಗು ಹಲವರಲ್ಲಿದೆ.ಆದರೆ ಹಿಂದಿನ ಸರ್ಕಾರ 1.20 ಲಕ್ಷ ಕೋಟಿ ರೂ.ಬಿಲ್ ಕೊಡುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಬಿದ್ದಿವೆ.ಹಿಂದಿನ ಸರ್ಕಾರದಲ್ಲಿ ಬಾಕಿ ಇರಿಸಿದ್ದ ಬಿಲ್‌ನ್ನು ನಾವು ಕೊಡಬೇಕಾಯಿತು.ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುವವರು ಯೋಜನೆಗಳನ್ನು ಹಿಂದಿರುಗಿಸಿ ಅಥವಾ ನಿರಾಕರಿಸಬೇಕು ಎಂದು ಹೇಳಿದರು.

33 ಸಾವಿರ ಕೋಟಿ ರೂ.ಗುತ್ತಿಗೆದಾರರ ಬಿಲ್ ಬಾಕಿ ಇದೆ. ಅಭಿವೃದ್ಧಿ ನಿಲ್ಲದ ಹಾಗೆ ಸರ್ಕಾರ ಪ್ರಯತ್ನ ಮಾಡುತ್ತಿದೆ. ಮತಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ಧರಾಮಯ್ಯ ಎರಡು ವರ್ಷದಲ್ಲಿ ಸಾಕಷ್ಟು ಅನುದಾನ ನೀಡಿದ್ದಾರೆ.ಹಿಂದೆ 15 ಲಕ್ಷ ರೂ.ಗಳಲ್ಲಿ ಒಂದು ಕಿ.ಮೀ ರಸ್ತೆ ಮಾಡುತ್ತಿದ್ದರೆ ಈಗ ಒಂದು ಕೋಟಿ ರೂ.ಗೆ ಕಿ.ಮೀ ರಸ್ತೆಗೆ ವೆಚ್ಚ ಆಗುತ್ತಿದೆ.ನಾವು ರಾಜಕೀಯ ಭಾಷಣ ಮಾಡುವವರನ್ನು ನಂಬುತ್ತೇವೆ.ನಾವು ಅಭಿವೃದ್ಧಿ ಮಾಡಿದ್ದೇವೆ.ಅವಕಾಶ ಸಿಕ್ಕಾಗ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದಿದ್ದೇವೆ ಎಂದರು.

ನಮ್ಮ ಅಭಿವೃದ್ಧಿ ಕೆಲಸಗಳಿಗೆ ಪ್ರಚಾರ ಕೊಡುವಂತಹದ್ದಲ್ಲ.ಪ್ರಚಾರ ಮಾಡುವುದೇನಿದೆ.ಜನರು ಕೊಟ್ಟ ದುಡ್ಡನ್ನು ಜನರ ಅಭಿವೃದ್ದಿಗೆ ಬಳಸುತ್ತಿದ್ದೇವೆ ಎಂದರು.

ಪಿಡಬ್ಲೂö್ಯಡಿ ಎಇಇ ಅಯ್ಯಪ್ಪಗೌಡ ರೆಡ್ಡಿ ಮಾತನಾಡಿ, ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ 500 ಮೀ ರಸ್ತೆಯನ್ನು 6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಲಾಗುತ್ತಿದ್ದು ಅಕ್ಕಪಕ್ಕದಲ್ಲಿ ಚರಂಡಿ,ಮಧ್ಯೆದಲ್ಲಿ ಡಿವೈಡರ್,ಬೀದಿ ದೀಪ ಅಳವಡಿಸಲಾಗುತ್ತದೆ ಎಂದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಕೆಪಿಸಿಸಿ ಸದಸ್ಯ ರಮೇಶ ಓಸ್ವಾಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಸತೀಶ ಓಸ್ವಾಲ್, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ,ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಎಸ್.ಪಾಟೀಲ,ವಾಸುದೇವ ಶಾಸ್ತಿçÃ,ಪ್ರಭುರಾಜ ಕಲ್ಬುರ್ಗಿ, ಕಾಮರಾಜ ಬಿರಾದಾರ,ಶರಣು ಸಜ್ಜನ, ಸಂಗನಗೌಡ ಬಿರಾದಾರ, ಸುರೇಶಗೌಡ ಪಾಟೀಲ ಇಂಗಳಗೇರಿ,ಪುರಸಭೆ ಸದಸ್ಯರು,ನಾಮನಿರ್ದೇಶಿತ ಸದಸ್ಯರು,ಕಾಂಗ್ರೆಸ್ ಮುಖಂಡರು ಇದ್ದರು.

80 ಮರಗಳ ತೆರವು :
ಈ ರಸ್ತೆ ಅಭಿವೃದ್ಧಿಗಾಗಿ ಆಲಮಟ್ಟಿ ರಸ್ತೆಯಲ್ಲಿ ಬೆಳೆದು ನಿಂತಿರುವ ಸುಮಾರು 30-40 ವರ್ಷದಷ್ಟು ಹಳೆಯದಾಗಿರುವ ಬೇವಿನ ಮರಗಳನ್ನು ತೆರವುಗೊಳಿಸಲಾಗುವುದು ಎಂದು ಪಿಡಬ್ಲೂö್ಯಡಿ ಎಇಇ ಮಾಹಿತಿ ನೀಡಿದರು.ಅಂದಾಜು 80 ಮರಗಳನ್ನು ರಸ್ತೆಯ ಅಭಿವೃದ್ಧಿಗಾಗಿ ತೆರವು ಮಾಡಲಾಗುತ್ತದೆ ಎಂದಾಗ ಶಾಸಕರು ಮಧ್ಯಪ್ರವೇಶಿಸಿ ಈಗಿರುವ ಮರಗಳಿಗಿಂತ ಒಳ್ಳೆಯ ಗಿಡಗಳನ್ನು ನೆಡುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

Latest News

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.