6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು, ಸ್ಥಿತಿವಂತರು ಈ ಯೋಜನೆಗಳನ್ನು ಪಡೆದುಕೊಳ್ಳದೇ ಬಿಟ್ಟುಕೊಡುವ ಕಾರ್ಯ ಮಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ನಿಧಿ ಯೋಜನೆಯಡಿ ಸನ್ 2025-26ನೇ ಸಾಲಿನಲ್ಲಿ ರಾಜ್ಯ ಹೆದ್ದಾರಿ 161ರಲ್ಲಿ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

ಜನ ಅಭಿವೃದ್ಧಿ ಮಾಡಲು ಜನ ಆಯ್ಕೆ ಮಾಡಿ ಕಳಿಸಿದ್ದಾರೆ.ನಿರೀಕ್ಷಿತ ಅಭಿವೃದ್ಧಿ ಆಗಿಲ್ಲ ಎಂಬ ಕೊರಗು ಹಲವರಲ್ಲಿದೆ.ಆದರೆ ಹಿಂದಿನ ಸರ್ಕಾರ 1.20 ಲಕ್ಷ ಕೋಟಿ ರೂ.ಬಿಲ್ ಕೊಡುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಬಿದ್ದಿವೆ.ಹಿಂದಿನ ಸರ್ಕಾರದಲ್ಲಿ ಬಾಕಿ ಇರಿಸಿದ್ದ ಬಿಲ್‌ನ್ನು ನಾವು ಕೊಡಬೇಕಾಯಿತು.ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುವವರು ಯೋಜನೆಗಳನ್ನು ಹಿಂದಿರುಗಿಸಿ ಅಥವಾ ನಿರಾಕರಿಸಬೇಕು ಎಂದು ಹೇಳಿದರು.

33 ಸಾವಿರ ಕೋಟಿ ರೂ.ಗುತ್ತಿಗೆದಾರರ ಬಿಲ್ ಬಾಕಿ ಇದೆ. ಅಭಿವೃದ್ಧಿ ನಿಲ್ಲದ ಹಾಗೆ ಸರ್ಕಾರ ಪ್ರಯತ್ನ ಮಾಡುತ್ತಿದೆ. ಮತಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ಧರಾಮಯ್ಯ ಎರಡು ವರ್ಷದಲ್ಲಿ ಸಾಕಷ್ಟು ಅನುದಾನ ನೀಡಿದ್ದಾರೆ.ಹಿಂದೆ 15 ಲಕ್ಷ ರೂ.ಗಳಲ್ಲಿ ಒಂದು ಕಿ.ಮೀ ರಸ್ತೆ ಮಾಡುತ್ತಿದ್ದರೆ ಈಗ ಒಂದು ಕೋಟಿ ರೂ.ಗೆ ಕಿ.ಮೀ ರಸ್ತೆಗೆ ವೆಚ್ಚ ಆಗುತ್ತಿದೆ.ನಾವು ರಾಜಕೀಯ ಭಾಷಣ ಮಾಡುವವರನ್ನು ನಂಬುತ್ತೇವೆ.ನಾವು ಅಭಿವೃದ್ಧಿ ಮಾಡಿದ್ದೇವೆ.ಅವಕಾಶ ಸಿಕ್ಕಾಗ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದಿದ್ದೇವೆ ಎಂದರು.

ನಮ್ಮ ಅಭಿವೃದ್ಧಿ ಕೆಲಸಗಳಿಗೆ ಪ್ರಚಾರ ಕೊಡುವಂತಹದ್ದಲ್ಲ.ಪ್ರಚಾರ ಮಾಡುವುದೇನಿದೆ.ಜನರು ಕೊಟ್ಟ ದುಡ್ಡನ್ನು ಜನರ ಅಭಿವೃದ್ದಿಗೆ ಬಳಸುತ್ತಿದ್ದೇವೆ ಎಂದರು.

ಪಿಡಬ್ಲೂö್ಯಡಿ ಎಇಇ ಅಯ್ಯಪ್ಪಗೌಡ ರೆಡ್ಡಿ ಮಾತನಾಡಿ, ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ 500 ಮೀ ರಸ್ತೆಯನ್ನು 6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಲಾಗುತ್ತಿದ್ದು ಅಕ್ಕಪಕ್ಕದಲ್ಲಿ ಚರಂಡಿ,ಮಧ್ಯೆದಲ್ಲಿ ಡಿವೈಡರ್,ಬೀದಿ ದೀಪ ಅಳವಡಿಸಲಾಗುತ್ತದೆ ಎಂದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಕೆಪಿಸಿಸಿ ಸದಸ್ಯ ರಮೇಶ ಓಸ್ವಾಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಸತೀಶ ಓಸ್ವಾಲ್, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ,ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಎಸ್.ಪಾಟೀಲ,ವಾಸುದೇವ ಶಾಸ್ತಿçÃ,ಪ್ರಭುರಾಜ ಕಲ್ಬುರ್ಗಿ, ಕಾಮರಾಜ ಬಿರಾದಾರ,ಶರಣು ಸಜ್ಜನ, ಸಂಗನಗೌಡ ಬಿರಾದಾರ, ಸುರೇಶಗೌಡ ಪಾಟೀಲ ಇಂಗಳಗೇರಿ,ಪುರಸಭೆ ಸದಸ್ಯರು,ನಾಮನಿರ್ದೇಶಿತ ಸದಸ್ಯರು,ಕಾಂಗ್ರೆಸ್ ಮುಖಂಡರು ಇದ್ದರು.

80 ಮರಗಳ ತೆರವು :
ಈ ರಸ್ತೆ ಅಭಿವೃದ್ಧಿಗಾಗಿ ಆಲಮಟ್ಟಿ ರಸ್ತೆಯಲ್ಲಿ ಬೆಳೆದು ನಿಂತಿರುವ ಸುಮಾರು 30-40 ವರ್ಷದಷ್ಟು ಹಳೆಯದಾಗಿರುವ ಬೇವಿನ ಮರಗಳನ್ನು ತೆರವುಗೊಳಿಸಲಾಗುವುದು ಎಂದು ಪಿಡಬ್ಲೂö್ಯಡಿ ಎಇಇ ಮಾಹಿತಿ ನೀಡಿದರು.ಅಂದಾಜು 80 ಮರಗಳನ್ನು ರಸ್ತೆಯ ಅಭಿವೃದ್ಧಿಗಾಗಿ ತೆರವು ಮಾಡಲಾಗುತ್ತದೆ ಎಂದಾಗ ಶಾಸಕರು ಮಧ್ಯಪ್ರವೇಶಿಸಿ ಈಗಿರುವ ಮರಗಳಿಗಿಂತ ಒಳ್ಳೆಯ ಗಿಡಗಳನ್ನು ನೆಡುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು