ನವಜೀವನೋತ್ಸವ ಕಾರ್ಯಕ್ರಮ: ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ನವಜೀವನೋತ್ಸವ ಕಾರ್ಯಕ್ರಮ: ಕುಡಿತ ಬಿಟ್ಟವರು ಮತ್ತೆ ಅದರತ್ತ ಹೊರಳಬೇಡಿ – ಮೋಹನ್‌ನಾಯ್ಕ

ಮುದ್ದೇಬಿಹಾಳ : ಯಾವುದೋ ಕಾರಣದಿಂದಾಗ ಕುಡಿತದ ದಾಸರಾಗಿದ್ದುಕೊಂಡು ಮನ,ಮನೆಯ ಸ್ಥಿತಿಯನ್ನು ಹಾಳುಮಾಡಿಕೊಂಡಿದ್ದವರು ಮದ್ಯವರ್ಜನ ಶಿಬಿರದ ಮೂಲಕ ಸುಧಾರಣೆ ಕಂಡಿದ್ದೀರಿ.ಇದೀಗ ನವಜೀವನ ಸಮೀತಿಯ ಸದಸ್ಯರಾಗಿದ್ದೀರಿ.ಪಾನಮುಕ್ತರು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮುಖ್ಯಸ್ಥರಾದ ಡಾ.ವೀರೇಂದ್ರ ಹೆಗ್ಗಡೆ ಅವರು ಪ್ರಮಾಣ ಪತ್ರಗಳನ್ನು ನಿಮಗೆ ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮೋಹನ್ ನಾಯ್ಕ ಹೇಳಿದರು.

ಪಟ್ಟಣದ ವಿದ್ಯಾನಗರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನವಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮತ್ತೆ ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು. ಸಮಾಜಮುಖಿ ಕೆಲಸ ಮಾಡಲು ಪೂಜ್ಯರಿಗೆ ಮತ್ತಷ್ಟು ಶಕ್ತಿ ಬರುತ್ತದೆ ಎಂದು ಹೇಳಿದರು.

ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಶ್ರೀಶೈಲ್ ದೊಡಮನಿ ಮಾತನಾಡಿ, ನವಜೀವನ ಸಮಿತಿ ಸದಸ್ಯರು ಹೊಸ ಜೀವನ ಆರಂಭಿಸಿದ್ದು ಅವರ ಭವಿಷ್ಯದ ಜೀವನ ಉಜ್ವಲವಾಗಲಿ ಎಂದರು.

ಜನಜಾಗೃತಿ ವೇದಿಕೆ ಸದಸ್ಯ ಡಾ.ವೀರೇಶ ಪಾಟೀಲ ಮಾತನಾಡಿ, ಮುಂದಿನ ಜೀವನದಲ್ಲಿ ಕುಡಿತಕ್ಕೆ ಒಳಗಾಗದೆ ಒಳ್ಳೆಯ ದಾರಿಯಲ್ಲಿ ಸಮಾಜಕ್ಕೆ ಒಬ್ಬ ಒಳ್ಳೆಯ ವ್ಯಕ್ತಿಯಾಗಿ ಜೀವನ ಮಾಡಬೇಕೆಂದು ಹೇಳಿದರು.

ಕಲಬುರ್ಗಿ ಜನಜಾಗೃತಿ ವಿಭಾಗದ ಯೋಜನಾಧಿಕಾರಿ ರಾಜೇಶ ಕೆ ಮಾತನಾಡಿ, ಕುಡಿತ ಬಿಟ್ಟ ನಂತರ ಕ್ಷೇತ್ರ ಧರ್ಮಸ್ಥಳದಿಂದ ಬರುವಂತಹ ಹಲವು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರಲ್ಲದೇ ಪಾನಮುಕ್ತರಾಗಿರುವ ಜೀವನದ ಕಥೆ ಇನ್ನೊಬ್ಬರಿಗೆ ಮಾರ್ಗದರ್ಶನ ಮಾಡುವಂತೆ ಸಾಧನೆ ಮಾಡಲು ಹೇಳಿದರು.

ತಾಲ್ಲೂಕು ಯೋಜನಾಧಿಕಾರಿ ಶಿವಾನಂದ ಪಿ.,ನಾಗೇಶ ಎಸ್.ಕೆ.,ನಿಂಗನಗೌಡ ಪಾಟೀಲ್ ಸೇವಾಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು ಇದ್ದರು.ಮಲ್ಲೇಶ ಕೆ.,ಸ್ವಾಗತಿಸಿದರು.ನಿಂಗನಗೌಡ ಪಾಟೀಲ್ ನಿರೂಪಿಸಿದರು.ನಾಗೇಶ್ ಎಸ್.ಕೆ ವಂದಿಸಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ