Three bills signed, two more pending

ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ

ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ

ಬೆಂಗಳೂರು: ಸರಕಾರದ ರಾಜಭವನ ಹಾಗೂ ನಡುವಿನ ತಿಕ್ಕಾಟದ ಮುಂದುವರಿದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಐದು ವಿಧೇಯಕವನ್ನು ವಾಪಸು ಕಳುಹಿಸಿದ್ದ ರಾಜ್ಯಪಾಲರು, ಇದೀಗ ಮೂರು ವಿಧೇಯಕಗಳಿಗೆ ಸಹಿಹಾಕಿದ್ದು, ಎರಡು ವಿಧೇಯಕವನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

ರಾಜ್ಯ ಸರಕಾರ ಒಟ್ಟು 11 ಮಸೂದೆಗಳಿಗೆ ಅಂಕಿತ ಕೋರಿ ರಾಜ್ಯಪಾಲರಿಗೆ ಕಳುಹಿಸಿತ್ತು. ಆದರೆ, ಎಲ್ಲವನ್ನೂ ರಾಜ್ಯಪಾಲರು ಹೆಚ್ಚಿನ ವಿವರಣೆ ಕೋರಿ ಸರಕಾರಕ್ಕೆ ವಾಪಸ್ ಕಳುಹಿಸಿದ್ದರು. ಈ ಪೈಕಿ ಐದು ಮಸೂದೆಗಳನ್ನು ಮರುಪರಿಶೀಲಿಸಿ, ಹೆಚ್ಚಿನ ವಿವರಣೆಗಳನ್ನು ಲಗತ್ತಿಸಿ ಮತ್ತೆ ರಾಜಭವನಕ್ಕೆ ರವಾನಿಸಲಾಗಿತ್ತು.

ಇದೀಗ ಈ ಪೈಕಿ ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ-2023, ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ-2024, ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಮಸೂದೆಗಳಿಗೆ ರಾಜ್ಯಪಾಲರು ಅಸ್ತು ಎಂದಿದ್ದಾರೆ.

ಇದನ್ನೂ ಓದಿ: Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ‌ನೋಡಿ)

ಇನ್ನುಳಿದಂತೆ, ಕರ್ನಾಟಕ ವಿಧಾನ ಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ -2024 ಅನ್ನು ಮುಂಬರುವ ಅಧಿವೇಶನದ ವಿಧಾನ ಮಂಡಲದ ಸಂದರ್ಭದಲ್ಲಿ ಹಿಂಪಡೆಯಲು ಮತ್ತು ವಿಧಾನಸಭೆಯ ವಿಧೇಯಕ 27ಕ್ಕೆ ಒಪ್ಪಿಗೆ ನೀಡುವಂತೆ ರಾಜ್ಯಪಾಲರನ್ನು ಕೋರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Latest News

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ಬಾಲಕನೊಬ್ಬ ಕಾಲು ಜಾರಿ ಹೊಂಡದಲ್ಲಿ ಬಿದ್ದು

ಶಿವಯೋಗಿಮಠ ಕುಟುಂಬದಿoದ ಆಯೋಜನೆ:                  ಮಾ.2 ರಂದು ಆರೋಗ್ಯ ಉಚಿತ  ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿಂಚನಾ ಶಿವಪುತ್ರಪ್ಪ ಸಜ್ಜನ ಸನ್ 2026-27ನೇ ಸಾಲಿನ ಬೆಳಗಾವಿ ಜಿಲ್ಲೆ ಕಿತ್ತೂರ ರಾಣಿ ಚೆನ್ನಮ್ಮ ಸೈನಿಕ ವಸತಿ ಶಾಲೆಗೆ ಆಯ್ಕೆಯಾಗಿದ್ದಾಳೆ. ಸಿಂಚನಾ , ಬಿದರಕುಂದಿ ಗ್ರಾಮದ ಶಿಕ್ಷಕ ದಂಪತಿಯಾದ ಶಿವಪುತ್ರಪ್ಪ ಸಜ್ಜನ ಹಾಗೂ ಸುಮಲತಾ ಗಡಿಯಪ್ಪನವರ ಅವರ  ಪುತ್ರಿ.ವಿದ್ಯಾರ್ಥಿನಿ ಸಿಂಚನಾ ಸಾಧನೆಗೆ ಬಿದರಕುಂದಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ವಿಬಿಸಿ ಹೈಸ್ಕೂಲ್‌ನ ಮುಖ್ಯಗುರು ವಿ.ಜಿ.ರಾಮಚಂದ್ರಯ್ಯ ಹೇಳಿದರು. ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ದೈನಂದಿನ ಬದುಕಿನಲ್ಲಿ ಸೇವಿಸುವ ಆಹಾರದಲ್ಲೂ ವಿಜ್ಞಾನ ಅಡಗಿದೆ.ಪ್ರತಿ ವಸ್ತುಗಳಲ್ಲೂ ವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು ಯಾವ ಪದಾರ್ಥ ನಮ್ಮ ದೇಹಕ್ಕೆ ಅತ್ಯಂತ ಸೂಕ್ತ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.