Three out of the four seats held in the election went to the BJP

ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ಹುನಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (PLD) ನಿರ್ದೇಶಕ ಮಂಡಳಿಯ 14 ಸ್ಥಾನಗಳ ಪೈಕಿ ಹತ್ತು ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, ಉಳಿದ ನಾಲ್ಕು ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತರು ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

Join Our Telegram: https://t.me/dcgkannada

ಶನಿವಾರ ಪಟ್ಟಣದ ಶ್ರೀ ವಿಜಯಮಹಾಂತೇಶ ಪ್ರೌಢ ಶಾಲೆಯಲ್ಲಿ PLD ಬ್ಯಾಂಕ್‌ನ ನಾಲ್ಕು ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ವೀರೇಶ ಸಂಗನಗೌಡ ಗೌಡರ (ಜಂಬಲದಿನ್ನಿ ಸಾಮಾನ್ಯ), ರುದ್ರಪ್ಪ ವೀರಪ್ಪ ಶೀಲವಂತರ (ಹಿರೇಶಿಂಗನಗುತ್ತಿ ಸಾಮಾನ್ಯ), ಲೀಲಾವತಿ ಸಿದ್ದನಗೌಡ ಪಾಟೀಲ(ಸೂಳೇಭಾವಿ ಸಾಮಾನ್ಯ ಮಹಿಳೆ) ಬಿಜೆಪಿ ಬೆಂಬಲಿತರು, ಇನ್ನು ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ (ನಂದವಾಡಗಿ ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.
 
ಅವಿರೋಧವಾಗಿ ಆಯ್ಕೆಯಾದವರ ವಿವರ:

ಮಹಾಲಿಂಗಪ್ಪ ರಾಚಪ್ಪ ಕಾಶಪ್ಪನವರ (ಸಾಮಾನ್ಯ, ಧನ್ನೂರ), ಶಿವಕುಮಾರಯ್ಯ ಬಸಯ್ಯ ಬಿನ್ನೇದ(ಸಾಮಾನ್ಯ, ನಾಗೂರ), ಮಲ್ಲಪ್ಪ ಮಹಾಂತಪ್ಪ ಬಿಸರಡ್ಡಿ (ಸಾಮಾನ್ಯ, ಚಿತ್ತರಗಿ), ಪ್ರಭಾಕರ ಸಿದ್ರಾಮಪ್ಪ ನಾಗರಾಳ (ಸಾಮಾನ್ಯ, ಅಮೀನಗಡ), ಸುವರ್ಣಾ ಗಂಗಪ್ಪ ಇಲಕಲ್ಲ (ಮಹಿಳಾ, ಹುನಗುಂದ), ನೂರಪ್ಪ ಮೊತಪ್ಪ ಲಮಾಣಿ(ಪರಿಶಿಷ್ಟ ಜಾತಿ, ಇಳಕಲ್), ಸೋಮೇಶ್ವರ ಹುಲ್ಲಪ್ಪ ಬಲಕುಂದಿ (ಪರಿಶಿಷ್ಟ ಪಂಗಡ, ಗುಡೂರು ಎಸ್.ಸಿ), ಖಾಜಾಸಾಬ್ ಮಹಮದ್‌ಸಾಬ್ ಮುದುಗಲ್ (ಹಿಂದುಳಿದ ವರ್ಗ ಅ,ಕರಡಿ), ಬಾಲನಗೌಡ ಹನಮಂತಗೌಡ ಪಾಟೀಲ (ಹಿಂದುಳಿದ ವರ್ಗ ಅ,ಕೂಡಲಸಂಗಮ), ಶೇಖರಪ್ಪ ಗುರಪ್ಪ ಬಾದ ವಾಡಗಿ ( ಬಿನ್‌ಸಾಲಗಾರ) ಆಯ್ಕೆಯಾಗಿದ್ದಾರೆ.

ಒಟ್ಟಾರೆಯಾಗಿ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದರೂ ಕೂಡಾ ನಂದವಾಡಗಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೊತೆಗೆ ಹತ್ತು ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತರಾಗಿರುವುದರಿಂದ ಪಿಎಲ್‌ಡಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ಬೆಂಬಲಿಗರ ಪಾಲಾಗುವುದು ನಿಶ್ಚಿತವಾಗಿದೆ.

ಬಿಜೆಪಿ ಸಂಭ್ರಮಾಚರಣೆ:

ನಾಲ್ಕು ಸ್ಥಾನದಲ್ಲಿ ಮೂವರು ಬಿಜೆಪಿ ಬೆಂಬಲಿತರು, ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸುತ್ತಿದಂತೆ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿ ಗುಲಾಲ ಎರಚಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಎಲ್ಲ ಚುನಾವಣೆಗೆ ದಿಕ್ಸೂಚಿ?

PLD ಬ್ಯಾಂಕ್ 4 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಲ್ವರಲ್ಲಿ ಮೂವರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿರುವುದು. ಬಿಜೆಪಿಯ ಪಾಲಿಗೆ ಈ ಗೆಲುವು ಮುಂದೆ ನಡೆಯುವ ಎಲ್ಲ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಒಂದು ವೇಳೆ ಪಿಎಲ್‌ಡಿ ಬ್ಯಾಂಕಿನ 14 ಸ್ಥಾನಕ್ಕೂ ಚುನಾವಣೆ ನಡೆದಿದ್ದರೇ ಖಂಡಿತವಾಗಲೂ 10 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆಲುವು ಸಾಧಿಸುತ್ತಿದ್ದರು ಎಂದು ಬಿಜೆಪಿ ಮುಖಂಡ ರಾಜಕುಮಾರ ಬಾದವಾಡಗಿ ಹೇಳಿದರು.

‘ನಾಚಿಗೇಡಿನ ನಾಯಕತ್ವದ ಲಕ್ಷಣ’

ಪಿಎಲ್‌ಡಿ ಬ್ಯಾಂಕ್ ಚುನಾವಣೆಯ ಮತದಾರ ಯಾದಿಯನ್ನು ತನ್ನ ಮೂಗಿನ ನೇರಕ್ಕೆ ತಯಾರಿಸಿ ಮತ್ತೇ ಕೋರ್ಟ್ನಲ್ಲಿ ಹೆಚ್ಚುವರಿ ಮತದಾರರನ್ನು ಒಪ್ಪಿಗೆ ತರೋವುದು ನಾಚಿಗೇಡಿನ ನಾಯಕತ್ವದ ಲಕ್ಷಣವಾಗಿದೆ. ಆದರೂ ಸಹಿತ ಸದ್ಯ ನಾಲ್ಕು ಸ್ಥಾನಗಳಲ್ಲಿ ಮೂವರು ಬಿಜೆಪಿ ಬೆಂಬಲಿತರು ಗೆದ್ದಿರೋದು ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಜನರ ಒಲವು ನಮ್ಮ ಪರವಾಗಿದೆ ಎನ್ನುವುದನ್ನು ಈ ಚುನಾವಣೆ ಸಾಬೀತು ಮಾಡಿದೆ. ಈಗ ಮೂವರು ಗೆದ್ದಿದ್ದಾರೆ. ಹಾಗೇನಾದರೂ ಮರಳಿ ಎಲ್ಲರನ್ನು ರಾಜೀನಾಮೆ ಕೊಡಿಸಿ ಚುನಾವಣೆ ಎದರಿಸಲಿ ನಾವು 10 ಕ್ಕೂ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ಪರತಗೌಡ ಪಾಟೀಲ ಹೇಳಿದರು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ