Three out of the four seats held in the election went to the BJP

ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ಹುನಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (PLD) ನಿರ್ದೇಶಕ ಮಂಡಳಿಯ 14 ಸ್ಥಾನಗಳ ಪೈಕಿ ಹತ್ತು ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, ಉಳಿದ ನಾಲ್ಕು ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತರು ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

Join Our Telegram: https://t.me/dcgkannada

ಶನಿವಾರ ಪಟ್ಟಣದ ಶ್ರೀ ವಿಜಯಮಹಾಂತೇಶ ಪ್ರೌಢ ಶಾಲೆಯಲ್ಲಿ PLD ಬ್ಯಾಂಕ್‌ನ ನಾಲ್ಕು ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ವೀರೇಶ ಸಂಗನಗೌಡ ಗೌಡರ (ಜಂಬಲದಿನ್ನಿ ಸಾಮಾನ್ಯ), ರುದ್ರಪ್ಪ ವೀರಪ್ಪ ಶೀಲವಂತರ (ಹಿರೇಶಿಂಗನಗುತ್ತಿ ಸಾಮಾನ್ಯ), ಲೀಲಾವತಿ ಸಿದ್ದನಗೌಡ ಪಾಟೀಲ(ಸೂಳೇಭಾವಿ ಸಾಮಾನ್ಯ ಮಹಿಳೆ) ಬಿಜೆಪಿ ಬೆಂಬಲಿತರು, ಇನ್ನು ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ (ನಂದವಾಡಗಿ ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.
 
ಅವಿರೋಧವಾಗಿ ಆಯ್ಕೆಯಾದವರ ವಿವರ:

ಮಹಾಲಿಂಗಪ್ಪ ರಾಚಪ್ಪ ಕಾಶಪ್ಪನವರ (ಸಾಮಾನ್ಯ, ಧನ್ನೂರ), ಶಿವಕುಮಾರಯ್ಯ ಬಸಯ್ಯ ಬಿನ್ನೇದ(ಸಾಮಾನ್ಯ, ನಾಗೂರ), ಮಲ್ಲಪ್ಪ ಮಹಾಂತಪ್ಪ ಬಿಸರಡ್ಡಿ (ಸಾಮಾನ್ಯ, ಚಿತ್ತರಗಿ), ಪ್ರಭಾಕರ ಸಿದ್ರಾಮಪ್ಪ ನಾಗರಾಳ (ಸಾಮಾನ್ಯ, ಅಮೀನಗಡ), ಸುವರ್ಣಾ ಗಂಗಪ್ಪ ಇಲಕಲ್ಲ (ಮಹಿಳಾ, ಹುನಗುಂದ), ನೂರಪ್ಪ ಮೊತಪ್ಪ ಲಮಾಣಿ(ಪರಿಶಿಷ್ಟ ಜಾತಿ, ಇಳಕಲ್), ಸೋಮೇಶ್ವರ ಹುಲ್ಲಪ್ಪ ಬಲಕುಂದಿ (ಪರಿಶಿಷ್ಟ ಪಂಗಡ, ಗುಡೂರು ಎಸ್.ಸಿ), ಖಾಜಾಸಾಬ್ ಮಹಮದ್‌ಸಾಬ್ ಮುದುಗಲ್ (ಹಿಂದುಳಿದ ವರ್ಗ ಅ,ಕರಡಿ), ಬಾಲನಗೌಡ ಹನಮಂತಗೌಡ ಪಾಟೀಲ (ಹಿಂದುಳಿದ ವರ್ಗ ಅ,ಕೂಡಲಸಂಗಮ), ಶೇಖರಪ್ಪ ಗುರಪ್ಪ ಬಾದ ವಾಡಗಿ ( ಬಿನ್‌ಸಾಲಗಾರ) ಆಯ್ಕೆಯಾಗಿದ್ದಾರೆ.

ಒಟ್ಟಾರೆಯಾಗಿ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದರೂ ಕೂಡಾ ನಂದವಾಡಗಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೊತೆಗೆ ಹತ್ತು ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತರಾಗಿರುವುದರಿಂದ ಪಿಎಲ್‌ಡಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ಬೆಂಬಲಿಗರ ಪಾಲಾಗುವುದು ನಿಶ್ಚಿತವಾಗಿದೆ.

ಬಿಜೆಪಿ ಸಂಭ್ರಮಾಚರಣೆ:

ನಾಲ್ಕು ಸ್ಥಾನದಲ್ಲಿ ಮೂವರು ಬಿಜೆಪಿ ಬೆಂಬಲಿತರು, ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸುತ್ತಿದಂತೆ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿ ಗುಲಾಲ ಎರಚಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಎಲ್ಲ ಚುನಾವಣೆಗೆ ದಿಕ್ಸೂಚಿ?

PLD ಬ್ಯಾಂಕ್ 4 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಲ್ವರಲ್ಲಿ ಮೂವರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿರುವುದು. ಬಿಜೆಪಿಯ ಪಾಲಿಗೆ ಈ ಗೆಲುವು ಮುಂದೆ ನಡೆಯುವ ಎಲ್ಲ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಒಂದು ವೇಳೆ ಪಿಎಲ್‌ಡಿ ಬ್ಯಾಂಕಿನ 14 ಸ್ಥಾನಕ್ಕೂ ಚುನಾವಣೆ ನಡೆದಿದ್ದರೇ ಖಂಡಿತವಾಗಲೂ 10 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆಲುವು ಸಾಧಿಸುತ್ತಿದ್ದರು ಎಂದು ಬಿಜೆಪಿ ಮುಖಂಡ ರಾಜಕುಮಾರ ಬಾದವಾಡಗಿ ಹೇಳಿದರು.

‘ನಾಚಿಗೇಡಿನ ನಾಯಕತ್ವದ ಲಕ್ಷಣ’

ಪಿಎಲ್‌ಡಿ ಬ್ಯಾಂಕ್ ಚುನಾವಣೆಯ ಮತದಾರ ಯಾದಿಯನ್ನು ತನ್ನ ಮೂಗಿನ ನೇರಕ್ಕೆ ತಯಾರಿಸಿ ಮತ್ತೇ ಕೋರ್ಟ್ನಲ್ಲಿ ಹೆಚ್ಚುವರಿ ಮತದಾರರನ್ನು ಒಪ್ಪಿಗೆ ತರೋವುದು ನಾಚಿಗೇಡಿನ ನಾಯಕತ್ವದ ಲಕ್ಷಣವಾಗಿದೆ. ಆದರೂ ಸಹಿತ ಸದ್ಯ ನಾಲ್ಕು ಸ್ಥಾನಗಳಲ್ಲಿ ಮೂವರು ಬಿಜೆಪಿ ಬೆಂಬಲಿತರು ಗೆದ್ದಿರೋದು ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಜನರ ಒಲವು ನಮ್ಮ ಪರವಾಗಿದೆ ಎನ್ನುವುದನ್ನು ಈ ಚುನಾವಣೆ ಸಾಬೀತು ಮಾಡಿದೆ. ಈಗ ಮೂವರು ಗೆದ್ದಿದ್ದಾರೆ. ಹಾಗೇನಾದರೂ ಮರಳಿ ಎಲ್ಲರನ್ನು ರಾಜೀನಾಮೆ ಕೊಡಿಸಿ ಚುನಾವಣೆ ಎದರಿಸಲಿ ನಾವು 10 ಕ್ಕೂ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ಪರತಗೌಡ ಪಾಟೀಲ ಹೇಳಿದರು.

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ