Three out of the four seats held in the election went to the BJP

ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ಹುನಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (PLD) ನಿರ್ದೇಶಕ ಮಂಡಳಿಯ 14 ಸ್ಥಾನಗಳ ಪೈಕಿ ಹತ್ತು ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, ಉಳಿದ ನಾಲ್ಕು ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತರು ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

Join Our Telegram: https://t.me/dcgkannada

ಶನಿವಾರ ಪಟ್ಟಣದ ಶ್ರೀ ವಿಜಯಮಹಾಂತೇಶ ಪ್ರೌಢ ಶಾಲೆಯಲ್ಲಿ PLD ಬ್ಯಾಂಕ್‌ನ ನಾಲ್ಕು ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ವೀರೇಶ ಸಂಗನಗೌಡ ಗೌಡರ (ಜಂಬಲದಿನ್ನಿ ಸಾಮಾನ್ಯ), ರುದ್ರಪ್ಪ ವೀರಪ್ಪ ಶೀಲವಂತರ (ಹಿರೇಶಿಂಗನಗುತ್ತಿ ಸಾಮಾನ್ಯ), ಲೀಲಾವತಿ ಸಿದ್ದನಗೌಡ ಪಾಟೀಲ(ಸೂಳೇಭಾವಿ ಸಾಮಾನ್ಯ ಮಹಿಳೆ) ಬಿಜೆಪಿ ಬೆಂಬಲಿತರು, ಇನ್ನು ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ (ನಂದವಾಡಗಿ ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.
 
ಅವಿರೋಧವಾಗಿ ಆಯ್ಕೆಯಾದವರ ವಿವರ:

ಮಹಾಲಿಂಗಪ್ಪ ರಾಚಪ್ಪ ಕಾಶಪ್ಪನವರ (ಸಾಮಾನ್ಯ, ಧನ್ನೂರ), ಶಿವಕುಮಾರಯ್ಯ ಬಸಯ್ಯ ಬಿನ್ನೇದ(ಸಾಮಾನ್ಯ, ನಾಗೂರ), ಮಲ್ಲಪ್ಪ ಮಹಾಂತಪ್ಪ ಬಿಸರಡ್ಡಿ (ಸಾಮಾನ್ಯ, ಚಿತ್ತರಗಿ), ಪ್ರಭಾಕರ ಸಿದ್ರಾಮಪ್ಪ ನಾಗರಾಳ (ಸಾಮಾನ್ಯ, ಅಮೀನಗಡ), ಸುವರ್ಣಾ ಗಂಗಪ್ಪ ಇಲಕಲ್ಲ (ಮಹಿಳಾ, ಹುನಗುಂದ), ನೂರಪ್ಪ ಮೊತಪ್ಪ ಲಮಾಣಿ(ಪರಿಶಿಷ್ಟ ಜಾತಿ, ಇಳಕಲ್), ಸೋಮೇಶ್ವರ ಹುಲ್ಲಪ್ಪ ಬಲಕುಂದಿ (ಪರಿಶಿಷ್ಟ ಪಂಗಡ, ಗುಡೂರು ಎಸ್.ಸಿ), ಖಾಜಾಸಾಬ್ ಮಹಮದ್‌ಸಾಬ್ ಮುದುಗಲ್ (ಹಿಂದುಳಿದ ವರ್ಗ ಅ,ಕರಡಿ), ಬಾಲನಗೌಡ ಹನಮಂತಗೌಡ ಪಾಟೀಲ (ಹಿಂದುಳಿದ ವರ್ಗ ಅ,ಕೂಡಲಸಂಗಮ), ಶೇಖರಪ್ಪ ಗುರಪ್ಪ ಬಾದ ವಾಡಗಿ ( ಬಿನ್‌ಸಾಲಗಾರ) ಆಯ್ಕೆಯಾಗಿದ್ದಾರೆ.

ಒಟ್ಟಾರೆಯಾಗಿ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದರೂ ಕೂಡಾ ನಂದವಾಡಗಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೊತೆಗೆ ಹತ್ತು ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತರಾಗಿರುವುದರಿಂದ ಪಿಎಲ್‌ಡಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ಬೆಂಬಲಿಗರ ಪಾಲಾಗುವುದು ನಿಶ್ಚಿತವಾಗಿದೆ.

ಬಿಜೆಪಿ ಸಂಭ್ರಮಾಚರಣೆ:

ನಾಲ್ಕು ಸ್ಥಾನದಲ್ಲಿ ಮೂವರು ಬಿಜೆಪಿ ಬೆಂಬಲಿತರು, ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸುತ್ತಿದಂತೆ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿ ಗುಲಾಲ ಎರಚಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಎಲ್ಲ ಚುನಾವಣೆಗೆ ದಿಕ್ಸೂಚಿ?

PLD ಬ್ಯಾಂಕ್ 4 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಲ್ವರಲ್ಲಿ ಮೂವರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿರುವುದು. ಬಿಜೆಪಿಯ ಪಾಲಿಗೆ ಈ ಗೆಲುವು ಮುಂದೆ ನಡೆಯುವ ಎಲ್ಲ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಒಂದು ವೇಳೆ ಪಿಎಲ್‌ಡಿ ಬ್ಯಾಂಕಿನ 14 ಸ್ಥಾನಕ್ಕೂ ಚುನಾವಣೆ ನಡೆದಿದ್ದರೇ ಖಂಡಿತವಾಗಲೂ 10 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆಲುವು ಸಾಧಿಸುತ್ತಿದ್ದರು ಎಂದು ಬಿಜೆಪಿ ಮುಖಂಡ ರಾಜಕುಮಾರ ಬಾದವಾಡಗಿ ಹೇಳಿದರು.

‘ನಾಚಿಗೇಡಿನ ನಾಯಕತ್ವದ ಲಕ್ಷಣ’

ಪಿಎಲ್‌ಡಿ ಬ್ಯಾಂಕ್ ಚುನಾವಣೆಯ ಮತದಾರ ಯಾದಿಯನ್ನು ತನ್ನ ಮೂಗಿನ ನೇರಕ್ಕೆ ತಯಾರಿಸಿ ಮತ್ತೇ ಕೋರ್ಟ್ನಲ್ಲಿ ಹೆಚ್ಚುವರಿ ಮತದಾರರನ್ನು ಒಪ್ಪಿಗೆ ತರೋವುದು ನಾಚಿಗೇಡಿನ ನಾಯಕತ್ವದ ಲಕ್ಷಣವಾಗಿದೆ. ಆದರೂ ಸಹಿತ ಸದ್ಯ ನಾಲ್ಕು ಸ್ಥಾನಗಳಲ್ಲಿ ಮೂವರು ಬಿಜೆಪಿ ಬೆಂಬಲಿತರು ಗೆದ್ದಿರೋದು ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಜನರ ಒಲವು ನಮ್ಮ ಪರವಾಗಿದೆ ಎನ್ನುವುದನ್ನು ಈ ಚುನಾವಣೆ ಸಾಬೀತು ಮಾಡಿದೆ. ಈಗ ಮೂವರು ಗೆದ್ದಿದ್ದಾರೆ. ಹಾಗೇನಾದರೂ ಮರಳಿ ಎಲ್ಲರನ್ನು ರಾಜೀನಾಮೆ ಕೊಡಿಸಿ ಚುನಾವಣೆ ಎದರಿಸಲಿ ನಾವು 10 ಕ್ಕೂ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ಪರತಗೌಡ ಪಾಟೀಲ ಹೇಳಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ