Three out of the four seats held in the election went to the BJP

ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ಹುನಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (PLD) ನಿರ್ದೇಶಕ ಮಂಡಳಿಯ 14 ಸ್ಥಾನಗಳ ಪೈಕಿ ಹತ್ತು ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, ಉಳಿದ ನಾಲ್ಕು ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತರು ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

Join Our Telegram: https://t.me/dcgkannada

ಶನಿವಾರ ಪಟ್ಟಣದ ಶ್ರೀ ವಿಜಯಮಹಾಂತೇಶ ಪ್ರೌಢ ಶಾಲೆಯಲ್ಲಿ PLD ಬ್ಯಾಂಕ್‌ನ ನಾಲ್ಕು ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ವೀರೇಶ ಸಂಗನಗೌಡ ಗೌಡರ (ಜಂಬಲದಿನ್ನಿ ಸಾಮಾನ್ಯ), ರುದ್ರಪ್ಪ ವೀರಪ್ಪ ಶೀಲವಂತರ (ಹಿರೇಶಿಂಗನಗುತ್ತಿ ಸಾಮಾನ್ಯ), ಲೀಲಾವತಿ ಸಿದ್ದನಗೌಡ ಪಾಟೀಲ(ಸೂಳೇಭಾವಿ ಸಾಮಾನ್ಯ ಮಹಿಳೆ) ಬಿಜೆಪಿ ಬೆಂಬಲಿತರು, ಇನ್ನು ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ (ನಂದವಾಡಗಿ ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.
 
ಅವಿರೋಧವಾಗಿ ಆಯ್ಕೆಯಾದವರ ವಿವರ:

ಮಹಾಲಿಂಗಪ್ಪ ರಾಚಪ್ಪ ಕಾಶಪ್ಪನವರ (ಸಾಮಾನ್ಯ, ಧನ್ನೂರ), ಶಿವಕುಮಾರಯ್ಯ ಬಸಯ್ಯ ಬಿನ್ನೇದ(ಸಾಮಾನ್ಯ, ನಾಗೂರ), ಮಲ್ಲಪ್ಪ ಮಹಾಂತಪ್ಪ ಬಿಸರಡ್ಡಿ (ಸಾಮಾನ್ಯ, ಚಿತ್ತರಗಿ), ಪ್ರಭಾಕರ ಸಿದ್ರಾಮಪ್ಪ ನಾಗರಾಳ (ಸಾಮಾನ್ಯ, ಅಮೀನಗಡ), ಸುವರ್ಣಾ ಗಂಗಪ್ಪ ಇಲಕಲ್ಲ (ಮಹಿಳಾ, ಹುನಗುಂದ), ನೂರಪ್ಪ ಮೊತಪ್ಪ ಲಮಾಣಿ(ಪರಿಶಿಷ್ಟ ಜಾತಿ, ಇಳಕಲ್), ಸೋಮೇಶ್ವರ ಹುಲ್ಲಪ್ಪ ಬಲಕುಂದಿ (ಪರಿಶಿಷ್ಟ ಪಂಗಡ, ಗುಡೂರು ಎಸ್.ಸಿ), ಖಾಜಾಸಾಬ್ ಮಹಮದ್‌ಸಾಬ್ ಮುದುಗಲ್ (ಹಿಂದುಳಿದ ವರ್ಗ ಅ,ಕರಡಿ), ಬಾಲನಗೌಡ ಹನಮಂತಗೌಡ ಪಾಟೀಲ (ಹಿಂದುಳಿದ ವರ್ಗ ಅ,ಕೂಡಲಸಂಗಮ), ಶೇಖರಪ್ಪ ಗುರಪ್ಪ ಬಾದ ವಾಡಗಿ ( ಬಿನ್‌ಸಾಲಗಾರ) ಆಯ್ಕೆಯಾಗಿದ್ದಾರೆ.

ಒಟ್ಟಾರೆಯಾಗಿ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದರೂ ಕೂಡಾ ನಂದವಾಡಗಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೊತೆಗೆ ಹತ್ತು ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತರಾಗಿರುವುದರಿಂದ ಪಿಎಲ್‌ಡಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ಬೆಂಬಲಿಗರ ಪಾಲಾಗುವುದು ನಿಶ್ಚಿತವಾಗಿದೆ.

ಬಿಜೆಪಿ ಸಂಭ್ರಮಾಚರಣೆ:

ನಾಲ್ಕು ಸ್ಥಾನದಲ್ಲಿ ಮೂವರು ಬಿಜೆಪಿ ಬೆಂಬಲಿತರು, ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸುತ್ತಿದಂತೆ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿ ಗುಲಾಲ ಎರಚಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಎಲ್ಲ ಚುನಾವಣೆಗೆ ದಿಕ್ಸೂಚಿ?

PLD ಬ್ಯಾಂಕ್ 4 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಲ್ವರಲ್ಲಿ ಮೂವರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿರುವುದು. ಬಿಜೆಪಿಯ ಪಾಲಿಗೆ ಈ ಗೆಲುವು ಮುಂದೆ ನಡೆಯುವ ಎಲ್ಲ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಒಂದು ವೇಳೆ ಪಿಎಲ್‌ಡಿ ಬ್ಯಾಂಕಿನ 14 ಸ್ಥಾನಕ್ಕೂ ಚುನಾವಣೆ ನಡೆದಿದ್ದರೇ ಖಂಡಿತವಾಗಲೂ 10 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆಲುವು ಸಾಧಿಸುತ್ತಿದ್ದರು ಎಂದು ಬಿಜೆಪಿ ಮುಖಂಡ ರಾಜಕುಮಾರ ಬಾದವಾಡಗಿ ಹೇಳಿದರು.

‘ನಾಚಿಗೇಡಿನ ನಾಯಕತ್ವದ ಲಕ್ಷಣ’

ಪಿಎಲ್‌ಡಿ ಬ್ಯಾಂಕ್ ಚುನಾವಣೆಯ ಮತದಾರ ಯಾದಿಯನ್ನು ತನ್ನ ಮೂಗಿನ ನೇರಕ್ಕೆ ತಯಾರಿಸಿ ಮತ್ತೇ ಕೋರ್ಟ್ನಲ್ಲಿ ಹೆಚ್ಚುವರಿ ಮತದಾರರನ್ನು ಒಪ್ಪಿಗೆ ತರೋವುದು ನಾಚಿಗೇಡಿನ ನಾಯಕತ್ವದ ಲಕ್ಷಣವಾಗಿದೆ. ಆದರೂ ಸಹಿತ ಸದ್ಯ ನಾಲ್ಕು ಸ್ಥಾನಗಳಲ್ಲಿ ಮೂವರು ಬಿಜೆಪಿ ಬೆಂಬಲಿತರು ಗೆದ್ದಿರೋದು ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಜನರ ಒಲವು ನಮ್ಮ ಪರವಾಗಿದೆ ಎನ್ನುವುದನ್ನು ಈ ಚುನಾವಣೆ ಸಾಬೀತು ಮಾಡಿದೆ. ಈಗ ಮೂವರು ಗೆದ್ದಿದ್ದಾರೆ. ಹಾಗೇನಾದರೂ ಮರಳಿ ಎಲ್ಲರನ್ನು ರಾಜೀನಾಮೆ ಕೊಡಿಸಿ ಚುನಾವಣೆ ಎದರಿಸಲಿ ನಾವು 10 ಕ್ಕೂ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ಪರತಗೌಡ ಪಾಟೀಲ ಹೇಳಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ