Three out of the four seats held in the election went to the BJP

ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ಚುನಾವಣೆ ನಡೆದ ನಾಲ್ಕರಲ್ಲಿ ಮೂರು ಸ್ಥಾನ BJP ಪಾಲು.. ಆದ್ರೂ PLD ಬ್ಯಾಂಕ್ ಗದ್ದುಗೆ ಕಾಂಗ್ರೆಸ್ ಪಾಲು..! ( ವಿಡಿಯೋ ನೋಡಿ)

ಹುನಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (PLD) ನಿರ್ದೇಶಕ ಮಂಡಳಿಯ 14 ಸ್ಥಾನಗಳ ಪೈಕಿ ಹತ್ತು ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, ಉಳಿದ ನಾಲ್ಕು ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತರು ಹಾಗೂ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

Join Our Telegram: https://t.me/dcgkannada

ಶನಿವಾರ ಪಟ್ಟಣದ ಶ್ರೀ ವಿಜಯಮಹಾಂತೇಶ ಪ್ರೌಢ ಶಾಲೆಯಲ್ಲಿ PLD ಬ್ಯಾಂಕ್‌ನ ನಾಲ್ಕು ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ವೀರೇಶ ಸಂಗನಗೌಡ ಗೌಡರ (ಜಂಬಲದಿನ್ನಿ ಸಾಮಾನ್ಯ), ರುದ್ರಪ್ಪ ವೀರಪ್ಪ ಶೀಲವಂತರ (ಹಿರೇಶಿಂಗನಗುತ್ತಿ ಸಾಮಾನ್ಯ), ಲೀಲಾವತಿ ಸಿದ್ದನಗೌಡ ಪಾಟೀಲ(ಸೂಳೇಭಾವಿ ಸಾಮಾನ್ಯ ಮಹಿಳೆ) ಬಿಜೆಪಿ ಬೆಂಬಲಿತರು, ಇನ್ನು ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ (ನಂದವಾಡಗಿ ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.
 
ಅವಿರೋಧವಾಗಿ ಆಯ್ಕೆಯಾದವರ ವಿವರ:

ಮಹಾಲಿಂಗಪ್ಪ ರಾಚಪ್ಪ ಕಾಶಪ್ಪನವರ (ಸಾಮಾನ್ಯ, ಧನ್ನೂರ), ಶಿವಕುಮಾರಯ್ಯ ಬಸಯ್ಯ ಬಿನ್ನೇದ(ಸಾಮಾನ್ಯ, ನಾಗೂರ), ಮಲ್ಲಪ್ಪ ಮಹಾಂತಪ್ಪ ಬಿಸರಡ್ಡಿ (ಸಾಮಾನ್ಯ, ಚಿತ್ತರಗಿ), ಪ್ರಭಾಕರ ಸಿದ್ರಾಮಪ್ಪ ನಾಗರಾಳ (ಸಾಮಾನ್ಯ, ಅಮೀನಗಡ), ಸುವರ್ಣಾ ಗಂಗಪ್ಪ ಇಲಕಲ್ಲ (ಮಹಿಳಾ, ಹುನಗುಂದ), ನೂರಪ್ಪ ಮೊತಪ್ಪ ಲಮಾಣಿ(ಪರಿಶಿಷ್ಟ ಜಾತಿ, ಇಳಕಲ್), ಸೋಮೇಶ್ವರ ಹುಲ್ಲಪ್ಪ ಬಲಕುಂದಿ (ಪರಿಶಿಷ್ಟ ಪಂಗಡ, ಗುಡೂರು ಎಸ್.ಸಿ), ಖಾಜಾಸಾಬ್ ಮಹಮದ್‌ಸಾಬ್ ಮುದುಗಲ್ (ಹಿಂದುಳಿದ ವರ್ಗ ಅ,ಕರಡಿ), ಬಾಲನಗೌಡ ಹನಮಂತಗೌಡ ಪಾಟೀಲ (ಹಿಂದುಳಿದ ವರ್ಗ ಅ,ಕೂಡಲಸಂಗಮ), ಶೇಖರಪ್ಪ ಗುರಪ್ಪ ಬಾದ ವಾಡಗಿ ( ಬಿನ್‌ಸಾಲಗಾರ) ಆಯ್ಕೆಯಾಗಿದ್ದಾರೆ.

ಒಟ್ಟಾರೆಯಾಗಿ ಚುನಾವಣೆಯಲ್ಲಿ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದರೂ ಕೂಡಾ ನಂದವಾಡಗಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೊತೆಗೆ ಹತ್ತು ಅವಿರೋಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತರಾಗಿರುವುದರಿಂದ ಪಿಎಲ್‌ಡಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ಬೆಂಬಲಿಗರ ಪಾಲಾಗುವುದು ನಿಶ್ಚಿತವಾಗಿದೆ.

ಬಿಜೆಪಿ ಸಂಭ್ರಮಾಚರಣೆ:

ನಾಲ್ಕು ಸ್ಥಾನದಲ್ಲಿ ಮೂವರು ಬಿಜೆಪಿ ಬೆಂಬಲಿತರು, ಓರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸುತ್ತಿದಂತೆ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿ ಗುಲಾಲ ಎರಚಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಎಲ್ಲ ಚುನಾವಣೆಗೆ ದಿಕ್ಸೂಚಿ?

PLD ಬ್ಯಾಂಕ್ 4 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಲ್ವರಲ್ಲಿ ಮೂವರ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿರುವುದು. ಬಿಜೆಪಿಯ ಪಾಲಿಗೆ ಈ ಗೆಲುವು ಮುಂದೆ ನಡೆಯುವ ಎಲ್ಲ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಒಂದು ವೇಳೆ ಪಿಎಲ್‌ಡಿ ಬ್ಯಾಂಕಿನ 14 ಸ್ಥಾನಕ್ಕೂ ಚುನಾವಣೆ ನಡೆದಿದ್ದರೇ ಖಂಡಿತವಾಗಲೂ 10 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆಲುವು ಸಾಧಿಸುತ್ತಿದ್ದರು ಎಂದು ಬಿಜೆಪಿ ಮುಖಂಡ ರಾಜಕುಮಾರ ಬಾದವಾಡಗಿ ಹೇಳಿದರು.

‘ನಾಚಿಗೇಡಿನ ನಾಯಕತ್ವದ ಲಕ್ಷಣ’

ಪಿಎಲ್‌ಡಿ ಬ್ಯಾಂಕ್ ಚುನಾವಣೆಯ ಮತದಾರ ಯಾದಿಯನ್ನು ತನ್ನ ಮೂಗಿನ ನೇರಕ್ಕೆ ತಯಾರಿಸಿ ಮತ್ತೇ ಕೋರ್ಟ್ನಲ್ಲಿ ಹೆಚ್ಚುವರಿ ಮತದಾರರನ್ನು ಒಪ್ಪಿಗೆ ತರೋವುದು ನಾಚಿಗೇಡಿನ ನಾಯಕತ್ವದ ಲಕ್ಷಣವಾಗಿದೆ. ಆದರೂ ಸಹಿತ ಸದ್ಯ ನಾಲ್ಕು ಸ್ಥಾನಗಳಲ್ಲಿ ಮೂವರು ಬಿಜೆಪಿ ಬೆಂಬಲಿತರು ಗೆದ್ದಿರೋದು ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಜನರ ಒಲವು ನಮ್ಮ ಪರವಾಗಿದೆ ಎನ್ನುವುದನ್ನು ಈ ಚುನಾವಣೆ ಸಾಬೀತು ಮಾಡಿದೆ. ಈಗ ಮೂವರು ಗೆದ್ದಿದ್ದಾರೆ. ಹಾಗೇನಾದರೂ ಮರಳಿ ಎಲ್ಲರನ್ನು ರಾಜೀನಾಮೆ ಕೊಡಿಸಿ ಚುನಾವಣೆ ಎದರಿಸಲಿ ನಾವು 10 ಕ್ಕೂ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ಪರತಗೌಡ ಪಾಟೀಲ ಹೇಳಿದರು.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ