To what extent are we Lingayats practicing religion: MLA Vijayananda Kashappan's question

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಹುನಗುಂದ: ಲಿಂಗಾಯತರಾದ ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಗುರುಗಳಿಂದ ಮಾತ್ರ ಧರ್ಮ ಉಳಿಸಲು ಸಾಧ್ಯವಿಲ್ಲ ಭಕ್ತರು ಧರ್ಮವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ವಿಜಯಾನಂದ ಕಾಶಪ್ಪನವರ
ಹೇಳಿದರು.

ಇನ್ನಷ್ಟು‌ ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಬಸವ ಮಂಟಪದಲ್ಲಿ ಸೋಮವಾರ ಸಂಜೆ ನಡೆದ ಶ್ರಾವಣ ಮಾಸದ ವಚನ ದರ್ಶನ ಪ್ರವಚನ ಮಂಗಲ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರು ನಡೆದು ಬಂದ ಪಾರಂಪರಿಕ ವಿಚಾರಧಾರೆಗಳನ್ನು ಪ್ರತಿಯೊಬ್ಬರು ತಿಳಿದು. ಲಿಂಗಾಯತರು ಸಂಸ್ಕಾರ, ಸಂಸ್ಕೃತಿ ಜೊತಗೆ ಮಾನವೀಯತೆ ಕಲಿಸಿದ ಧರ್ಮ ಪಾಲನೆ ಮಾಡುವುದು ನಮ್ಮಲ್ಲರ ಕರ್ತವ್ಯವಾಗಿದೆ. ಇಂದಿನ ದಿನಗಳಲ್ಲಿ ಧರ್ಮ ಪಾಲನೆಯನ್ನು ಮಾಡುವುದನ್ನು ಲಿಂಗಾಯತರು ಮರೆತಿದ್ದಾರೆ. ಆದ್ದರಿಂದ ನಮ್ಮ ಮಕ್ಕಳಿಗೆ ಮತ್ತು ಮೊಮ್ಮಕಳಿಗೆ ಧರ್ಮ ಪಾಲನೆಯನ್ನು ಕಡ್ಡಾಯವಾಗಿ ಮಾಡಿದರೆ ಮಾತ್ರ ಧರ್ಮ ಉಳಿಯಲು ಸಾಧ್ಯ ಎಂದು ತಿಳಿಸಿದರು.

ಚಿತ್ತರಗಿ ಸಂಸ್ಥಾನದ ಇಳಕಲ್‌ದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಲಿಂಗಾಯತ ಮಠ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಬದುಕು ಕಟ್ಟಿಕೊಂಡವರು ಸಹ ಧಾರ್ಮಿಕ ಅಂಧ ಶ್ರದ್ಧೆ ಪ್ರದರ್ಶಿಸುತ್ತಿರುವುದು ವಿಪರ್ಯಾಸ. ಲಿಂಗಾಯತರು ಲಿಂಗಾಯತ ಧರ್ಮದಿಂದ ವಿಮುಖರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಶಿರೂರಿನ ವಿಜಯ ಮಹಾಂತ ತೀರ್ಥದ ಬಸವಲಿಂಗ ಸ್ವಾಮೀಜಿ ಮಾತನಾಡಿ ಪ್ರತಿಯೊಬ್ಬರು ವಚನಗಳನ್ನು ಭಕ್ತಿಯಿಂದ ಓದಬೇಕು. ಲಿಂಗ ಪೂಜೆಯನ್ನು ಮಾಡಬೇಕು. ಹಣೆಯಲ್ಲಿ ವಿಭೂತಿಯನ್ನು ಧರಿಸಬೇಕು. ಮಕ್ಕಳಿಗೆ ಲಿಂಗವನ್ನು ಕಟ್ಟಬೇಕು ಎಂದು ತಿಳಿಸಿದರು.

ಸಂತೆ ಕಡೂರಿನ ನವಲಿಂಗ ಸ್ವಾಮೀಜಿ ಜನವಾಡದ ಅಲ್ಲಮಪ್ರಭು ಆಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ, ವಿಜಯಪುರ ಜ್ಞಾನ ಯೋಗಾಶ್ರಮದ ಪ್ರವಚನಕಾರ ಸಂಗಮೇಶ್ವರ ಸ್ವಾಮೀಜಿ ಮಾತನಾಡಿದರು.

ಎಸ್.ಎನ್.ಹಾದಿಮನಿ ಮತ್ತು ಭುವನೇಶ್ವರಿ ಮೆಣಸಿನಕಾಯಿ ಪ್ರವಚನ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.

ಇದನ್ನೂ ಓದಿ: Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಲಿಂಗಸೂರನ ಸಿದ್ಧಲಿಂಗ ಸ್ವಾಮೀಜಿ, ಮನಗೂಳಿ ವಿರಕ್ತಮಠದ ವಿರತಿಶಾನಂದ ಸ್ವಾಮೀಜಿ, ಡಾವಣಗೇರಿಯ ಬಸವಚೇತನ ಸ್ವಾಮೀಜಿ, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಉಪಾಧ್ಯಕ್ಷ ರಾಜವ್ವ ಬದಾಮಿ, ಉಪಸ್ಥಿತರಿದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600