To what extent are we Lingayats practicing religion: MLA Vijayananda Kashappan's question

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಹುನಗುಂದ: ಲಿಂಗಾಯತರಾದ ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಗುರುಗಳಿಂದ ಮಾತ್ರ ಧರ್ಮ ಉಳಿಸಲು ಸಾಧ್ಯವಿಲ್ಲ ಭಕ್ತರು ಧರ್ಮವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ವಿಜಯಾನಂದ ಕಾಶಪ್ಪನವರ
ಹೇಳಿದರು.

ಇನ್ನಷ್ಟು‌ ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಬಸವ ಮಂಟಪದಲ್ಲಿ ಸೋಮವಾರ ಸಂಜೆ ನಡೆದ ಶ್ರಾವಣ ಮಾಸದ ವಚನ ದರ್ಶನ ಪ್ರವಚನ ಮಂಗಲ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರು ನಡೆದು ಬಂದ ಪಾರಂಪರಿಕ ವಿಚಾರಧಾರೆಗಳನ್ನು ಪ್ರತಿಯೊಬ್ಬರು ತಿಳಿದು. ಲಿಂಗಾಯತರು ಸಂಸ್ಕಾರ, ಸಂಸ್ಕೃತಿ ಜೊತಗೆ ಮಾನವೀಯತೆ ಕಲಿಸಿದ ಧರ್ಮ ಪಾಲನೆ ಮಾಡುವುದು ನಮ್ಮಲ್ಲರ ಕರ್ತವ್ಯವಾಗಿದೆ. ಇಂದಿನ ದಿನಗಳಲ್ಲಿ ಧರ್ಮ ಪಾಲನೆಯನ್ನು ಮಾಡುವುದನ್ನು ಲಿಂಗಾಯತರು ಮರೆತಿದ್ದಾರೆ. ಆದ್ದರಿಂದ ನಮ್ಮ ಮಕ್ಕಳಿಗೆ ಮತ್ತು ಮೊಮ್ಮಕಳಿಗೆ ಧರ್ಮ ಪಾಲನೆಯನ್ನು ಕಡ್ಡಾಯವಾಗಿ ಮಾಡಿದರೆ ಮಾತ್ರ ಧರ್ಮ ಉಳಿಯಲು ಸಾಧ್ಯ ಎಂದು ತಿಳಿಸಿದರು.

ಚಿತ್ತರಗಿ ಸಂಸ್ಥಾನದ ಇಳಕಲ್‌ದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಲಿಂಗಾಯತ ಮಠ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಬದುಕು ಕಟ್ಟಿಕೊಂಡವರು ಸಹ ಧಾರ್ಮಿಕ ಅಂಧ ಶ್ರದ್ಧೆ ಪ್ರದರ್ಶಿಸುತ್ತಿರುವುದು ವಿಪರ್ಯಾಸ. ಲಿಂಗಾಯತರು ಲಿಂಗಾಯತ ಧರ್ಮದಿಂದ ವಿಮುಖರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಶಿರೂರಿನ ವಿಜಯ ಮಹಾಂತ ತೀರ್ಥದ ಬಸವಲಿಂಗ ಸ್ವಾಮೀಜಿ ಮಾತನಾಡಿ ಪ್ರತಿಯೊಬ್ಬರು ವಚನಗಳನ್ನು ಭಕ್ತಿಯಿಂದ ಓದಬೇಕು. ಲಿಂಗ ಪೂಜೆಯನ್ನು ಮಾಡಬೇಕು. ಹಣೆಯಲ್ಲಿ ವಿಭೂತಿಯನ್ನು ಧರಿಸಬೇಕು. ಮಕ್ಕಳಿಗೆ ಲಿಂಗವನ್ನು ಕಟ್ಟಬೇಕು ಎಂದು ತಿಳಿಸಿದರು.

ಸಂತೆ ಕಡೂರಿನ ನವಲಿಂಗ ಸ್ವಾಮೀಜಿ ಜನವಾಡದ ಅಲ್ಲಮಪ್ರಭು ಆಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ, ವಿಜಯಪುರ ಜ್ಞಾನ ಯೋಗಾಶ್ರಮದ ಪ್ರವಚನಕಾರ ಸಂಗಮೇಶ್ವರ ಸ್ವಾಮೀಜಿ ಮಾತನಾಡಿದರು.

ಎಸ್.ಎನ್.ಹಾದಿಮನಿ ಮತ್ತು ಭುವನೇಶ್ವರಿ ಮೆಣಸಿನಕಾಯಿ ಪ್ರವಚನ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.

ಇದನ್ನೂ ಓದಿ: Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಲಿಂಗಸೂರನ ಸಿದ್ಧಲಿಂಗ ಸ್ವಾಮೀಜಿ, ಮನಗೂಳಿ ವಿರಕ್ತಮಠದ ವಿರತಿಶಾನಂದ ಸ್ವಾಮೀಜಿ, ಡಾವಣಗೇರಿಯ ಬಸವಚೇತನ ಸ್ವಾಮೀಜಿ, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಉಪಾಧ್ಯಕ್ಷ ರಾಜವ್ವ ಬದಾಮಿ, ಉಪಸ್ಥಿತರಿದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ