To what extent are we Lingayats practicing religion: MLA Vijayananda Kashappan's question

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಹುನಗುಂದ: ಲಿಂಗಾಯತರಾದ ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಗುರುಗಳಿಂದ ಮಾತ್ರ ಧರ್ಮ ಉಳಿಸಲು ಸಾಧ್ಯವಿಲ್ಲ ಭಕ್ತರು ಧರ್ಮವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ವಿಜಯಾನಂದ ಕಾಶಪ್ಪನವರ
ಹೇಳಿದರು.

ಇನ್ನಷ್ಟು‌ ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಬಸವ ಮಂಟಪದಲ್ಲಿ ಸೋಮವಾರ ಸಂಜೆ ನಡೆದ ಶ್ರಾವಣ ಮಾಸದ ವಚನ ದರ್ಶನ ಪ್ರವಚನ ಮಂಗಲ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರು ನಡೆದು ಬಂದ ಪಾರಂಪರಿಕ ವಿಚಾರಧಾರೆಗಳನ್ನು ಪ್ರತಿಯೊಬ್ಬರು ತಿಳಿದು. ಲಿಂಗಾಯತರು ಸಂಸ್ಕಾರ, ಸಂಸ್ಕೃತಿ ಜೊತಗೆ ಮಾನವೀಯತೆ ಕಲಿಸಿದ ಧರ್ಮ ಪಾಲನೆ ಮಾಡುವುದು ನಮ್ಮಲ್ಲರ ಕರ್ತವ್ಯವಾಗಿದೆ. ಇಂದಿನ ದಿನಗಳಲ್ಲಿ ಧರ್ಮ ಪಾಲನೆಯನ್ನು ಮಾಡುವುದನ್ನು ಲಿಂಗಾಯತರು ಮರೆತಿದ್ದಾರೆ. ಆದ್ದರಿಂದ ನಮ್ಮ ಮಕ್ಕಳಿಗೆ ಮತ್ತು ಮೊಮ್ಮಕಳಿಗೆ ಧರ್ಮ ಪಾಲನೆಯನ್ನು ಕಡ್ಡಾಯವಾಗಿ ಮಾಡಿದರೆ ಮಾತ್ರ ಧರ್ಮ ಉಳಿಯಲು ಸಾಧ್ಯ ಎಂದು ತಿಳಿಸಿದರು.

ಚಿತ್ತರಗಿ ಸಂಸ್ಥಾನದ ಇಳಕಲ್‌ದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಲಿಂಗಾಯತ ಮಠ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಬದುಕು ಕಟ್ಟಿಕೊಂಡವರು ಸಹ ಧಾರ್ಮಿಕ ಅಂಧ ಶ್ರದ್ಧೆ ಪ್ರದರ್ಶಿಸುತ್ತಿರುವುದು ವಿಪರ್ಯಾಸ. ಲಿಂಗಾಯತರು ಲಿಂಗಾಯತ ಧರ್ಮದಿಂದ ವಿಮುಖರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಶಿರೂರಿನ ವಿಜಯ ಮಹಾಂತ ತೀರ್ಥದ ಬಸವಲಿಂಗ ಸ್ವಾಮೀಜಿ ಮಾತನಾಡಿ ಪ್ರತಿಯೊಬ್ಬರು ವಚನಗಳನ್ನು ಭಕ್ತಿಯಿಂದ ಓದಬೇಕು. ಲಿಂಗ ಪೂಜೆಯನ್ನು ಮಾಡಬೇಕು. ಹಣೆಯಲ್ಲಿ ವಿಭೂತಿಯನ್ನು ಧರಿಸಬೇಕು. ಮಕ್ಕಳಿಗೆ ಲಿಂಗವನ್ನು ಕಟ್ಟಬೇಕು ಎಂದು ತಿಳಿಸಿದರು.

ಸಂತೆ ಕಡೂರಿನ ನವಲಿಂಗ ಸ್ವಾಮೀಜಿ ಜನವಾಡದ ಅಲ್ಲಮಪ್ರಭು ಆಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ, ವಿಜಯಪುರ ಜ್ಞಾನ ಯೋಗಾಶ್ರಮದ ಪ್ರವಚನಕಾರ ಸಂಗಮೇಶ್ವರ ಸ್ವಾಮೀಜಿ ಮಾತನಾಡಿದರು.

ಎಸ್.ಎನ್.ಹಾದಿಮನಿ ಮತ್ತು ಭುವನೇಶ್ವರಿ ಮೆಣಸಿನಕಾಯಿ ಪ್ರವಚನ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.

ಇದನ್ನೂ ಓದಿ: Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಲಿಂಗಸೂರನ ಸಿದ್ಧಲಿಂಗ ಸ್ವಾಮೀಜಿ, ಮನಗೂಳಿ ವಿರಕ್ತಮಠದ ವಿರತಿಶಾನಂದ ಸ್ವಾಮೀಜಿ, ಡಾವಣಗೇರಿಯ ಬಸವಚೇತನ ಸ್ವಾಮೀಜಿ, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಉಪಾಧ್ಯಕ್ಷ ರಾಜವ್ವ ಬದಾಮಿ, ಉಪಸ್ಥಿತರಿದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ