Astrology Image of astrology

Today astrology: ಇಂದು ಈ ರಾಶಿಯವರ ಹಣಕಾಶಿನ ಸಮಸ್ಯೆ ನಿವಾರಣೆ

Today astrology: ಇಂದು ಈ ರಾಶಿಯವರ ಹಣಕಾಶಿನ ಸಮಸ್ಯೆ ನಿವಾರಣೆ

ಮೇಷ ರಾಶಿ: ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲ ಜನ ಅನುಮಾನಿಸುತ್ತಾರೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ.ಇಲ್ಲವಾದಲ್ಲಿ ನಿಮ್ಮನ್ನು ಕೆಲಸದಲ್ಲಿ ಕಡೆಗಣಿಸಲಾಗು ತ್ತದೆ.(ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಯಾವುದಾದರು ಕ್ರೀಡೆ ಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಶ್ರಮವಹಿಸಿ ಕೆಲಸ ಮಾಡುವುದರಿಂದ ಘನತೆ ಗೌರವ ನಿಮ್ಮನ್ನು ಹುಡುಕಿಕೊಂ ಡು ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥ ಮಾಡಿಕೊಳ್ಳಿ.ನೀವು ಹಣವನ್ನು ಸಂಪಾದಿಸಬಹುದು ಆದರೆ ಯಾರ ಪ್ರೀತಿ ಮತ್ತು ವಿಶ್ವಾಸವನ್ನು ಸಂಪಾದಿಸ ಲು ಸಾಧ್ಯವಿಲ್ಲ.(ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನು ಗಳಿಸುವಿರಿ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ವಿನಾಕಾರಣ ಖರ್ಚು ಮಾಡಬೇಡಿ. ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ. ಇದು ನಿಮಗೆ ಉತ್ತಮ ಲಾಭವನ್ನು ತಂದು ಕೊಡುತ್ತದೆ.ಆದರೆ ಇದರಲ್ಲಿ ನಿಮ್ಮ ಶ್ರಮ ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ.(ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ವಿವಿಧ ಮೂಲಗಳಿಂದ ವಿತ್ತೀಯ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ನಿಮ್ಮೊಂದಿಗೆ ಪೈಪೋಟಿ ಹೆಚ್ಚಾಗಲಿದೆ. ಆದರೆ ನೀವು ತಾಳ್ಮೆ ಕಳೆದುಕೊಳ್ಳಬೇಡಿ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು. ಇತರರಿಗೆ ಮನವರಿಕೆ ಮಾಡುವ ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ.(ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ನೀವು ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿ ಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ. ಯಾವುದೇ ಫಲಿತಾಂಶವನ್ನು ನೀಡದ ಜನರನ್ನು ಮರೆತುಬಿಡಿ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ:ನಿಮ್ಮ ಆತ್ಮ ವಿಶ್ವಾಸದಿಂದ ನಿಮ್ಮ ಸುತ್ತಮುತ್ತಲಿನ ಜನರನ್ನು ನೀವು ಮೆಚ್ಚಿಸುವ ಸಾಧ್ಯತೆಯಿದೆ.ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವ ರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತ ವಿಚಾರಗಳನ್ನು ಬಹಿರಂಗ ಪಡಿಸಲು ಇದು ಸರಿಯಾದ ಸಮಯ. ಅವರು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ. ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸಬೇಕು.(ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ:ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ.(ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ:ನಿಮ್ಮ ಆಕರ್ಷಕ ನಡವಳಿ ಕೆಯು ಇಂದು ಎಲ್ಲರ ಗಮನ ಸೆಳೆಯು ತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥಮಾಡಿಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥವಾಗು ತ್ತದೆ.(ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ:ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಊಹಾ ಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸು ತ್ತದೆ.(ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ:ನೀವು ನಿರ್ಧಾರಗಳನ್ನು ತೆಗೆದುಕೊಳ್ಳಲು ಮನಸ್ಸಿನ ಸ್ಪಷ್ಟತೆ ಮುಖ್ಯವಾಗಿದೆ. ಕೆಲಸದಲ್ಲಿ ಶ್ರಮ ವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳ ನ್ನು ತೆಗೆದುಕೊಳ್ಳುತ್ತದೆ. ಇದು ನಿಮಗೆ ಆರ್ಥಿಕವಾಗಿ ಪ್ರಯೋಜನವನ್ನು ನೀಡು ತ್ತದೆ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ:ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹುದು. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳಬಹು ದು.(ಭಕ್ತಿಯಿಂದ ಮನೋ ನಿಯಾಮಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ:ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳಕರ ವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತಿದೆ. ನೀವು ಹಳೆಯ ಸಾಲಗಳಿಂದ ಮುಕ್ತರಾಗು ತ್ತೀರಿ.(ಭಕ್ತಿಯಿಂದ ಶ್ರೀ ಚಂದ್ರಮೌಳೇ ಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಸಪ್ತಮಿ
ನಕ್ಷತ್ರ : ಅನೂರಾಧ ನಕ್ಷತ್ರ.

ರಾಹುಕಾಲ:03:00PM ರಿಂದ 04:30PM
ಗುಳಿಕಕಾಲ:12:00PM ರಿಂದ 01:30PM
ಯಮಗಂಡಕಾಲ:09:00AM ರಿಂದ 10:30AM

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600