ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿಯಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯಿತ್ ವಿಜಯಪುರ ಹಾಗೂ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಸ್ಪರ್ಶ ಕುಷ್ಟರೋಗ ಅರಿವು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಪ್ರಭಾರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಫೆಬ್ರವರಿ 13ರವರೆಗೆ ಜಿಲ್ಲಾದ್ಯಂತ ನಡೆಯಲಿದ್ದು ಜಿಲ್ಲೆಯಲ್ಲಿ ಕುಷ್ಠರೋಗವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಈಗಾಗಲೇ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕುಷ್ಠರೋಗವು ಮೈಕ್ರೋ ಬ್ಯಾಕ್ಟೋರಿಯಾಮ್ ಲೇಫ್ರಿ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು, ಇದು ನರಗಳ ಹಾಗೂ ಚರ್ಮದ ಮೇಲೆ ಪರಿಣಾಮ ಬೀಳುತ್ತದೆ. ದೇಹದ ಯಾವುದೇ ಭಾಗದಲ್ಲಿ ತಿಳಿ-ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳ ಮೇಲೆ ಸ್ಪರ್ಶಜ್ಞಾನ ಇರುವುದಿಲ್ಲ.ಇಂಥ ಮಚ್ಚೆಗಳು ಕಂಡುಬAದಲ್ಲಿ ತಾಲೂಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪರ್ಕಿಸಿ ಚಿಕಿತ್ಸೆ ಪಡೆಯಬಹುದು ಎಂದರು.

ಈ ರೋಗಕ್ಕೆ ಬಹುವಿಧ ಔಷಧ ಚಿಕಿತ್ಸೆ ಮತ್ತು ಎಂಡಿಟಿ ಚಿಕೆತ್ಸೆಯಿಂದ ಸಂಪೂರ್ಣ ಗುಣಮುಖರಾಗಬಹುದು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಔಷಧಗಳನ್ನು ಉಚಿತವಾಗಿ ಪಡೆಯಬಹುದು. ಈ ರೋಗದಿಂದ ಭಯಪಡುವ ಅವಶ್ಯವಿಲ್ಲ. ಕುಷ್ಠ ರೋಗಿಗಳು ಶಾಪಗ್ರಸ್ಥರಲ್ಲ ಮತ್ತು ಕಳಂಕಿತರಲ್ಲ. ಕುಷ್ಠರೋಗಿಗಳನ್ನು ಸಮಾಜದಲ್ಲಿ ಯಾವುದೇ ತಾರತಮ್ಯ ಮಾಡದೆ ಗೌರವದಿಂದ ಕಾಣಬೇಕು ಎಂದರು.

ಕುಷ್ಠರೋಗದ ನಿರ್ಮೂಲನೆಗೆ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಬಿ.ಹೂಗಾರ, ಸಮುದಾಯ ಆರೋಗ್ಯ ಅಧಿಕಾರಿ ಸದಾಶಿವ ಹಿರೇಮಠ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ