Toyota Campus Interview : 35 candidates selected

ಟೊಯೋಟಾ ಕ್ಯಾಂಪಸ್ ಸಂದರ್ಶನ : 35 ಅಭ್ಯರ್ಥಿಗಳು ಆಯ್ಕೆ

ಟೊಯೋಟಾ ಕ್ಯಾಂಪಸ್ ಸಂದರ್ಶನ : 35 ಅಭ್ಯರ್ಥಿಗಳು ಆಯ್ಕೆ

ಮುದ್ದೇಬಿಹಾಳ : ಕೃಷಿ, ಕೈಗಾರಿಕೆಗಳು ಎರಡು ಪ್ರಮುಖ ಕ್ಷೇತ್ರಗಳಾಗಿದ್ದು ದೇಶದ ಅಭಿವೃದ್ದಿಯಲ್ಲಿ ಇವುಗಳ ಕೊಡುಗೆ ಪ್ರಧಾನವಾಗಿವೆ ಎಂದು ರಾಜ್ಯ ಖಾಸಗಿ ಐಟಿಐಗಳ ಸಂಘದ ಅಧ್ಯಕ ಎಸ್. ಎಂ. ನೆರಬೆಂಚಿ ಹೇಳಿದರು.

ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯ ಬಿ. ಬಿ. ಆರ್ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಹಾಗೂ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ಕಂಪನಿ, ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ ಅಭ್ಯರ್ಥಿಗಳಿಗೆ ಈಚೇಗೆ ಏರ್ಪಡಿಸಿದ್ದ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಐಟಿಐ ಕಲಿತವರಿಗೆ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ. ಇವರಿಗೆ ಸರ್ಕಾರಿ, ಎಂಎನ್‌ಸಿ ಹಾಗೂ ಇತರೆ ಕಂಪನಿಗಳಲ್ಲಿ ಬಹಳಷ್ಟು ಬೇಡಿಕೆ ಇದೆ. ಹಾಗಾಗಿ ಯುವಕರು ಹೆಚ್ಚು ಹೆಚ್ಚು ಐಟಿಐ ಕೋರ್ಸ್ಗಳನ್ನು ಕಲಿತು ಉದ್ಯೋಗವಂತರಾಗಬೇಕೆಂದು ಹೇಳಿದರು.

ರೈತ ಸಂಘದ ಮುಖಂಡ ಸಂಗಣ್ಣ ಬಾಗೇವಾಡಿ, ಅಂಜುಮನ್ ಐಟಿಐ ಪ್ರಾಚಾರ್ಯ ಎಂ. ಎಸ್. ಕಡು, ರೈತ ಸಂಘದ ಪ್ರಧಾನ ಕಾರ್ಯದರ್ಶಿ ವಾಯ್. ಎಲ್. ಬಿರಾದಾರ, ಕಾರ್ಯದರ್ಶಿ ದ್ಯಾಮಣ್ಣ ವಡವಡಗಿ, ಹಾರ್ವರ್ಡ್ ಪಿಯು ಕಾಲೇಜ ಪ್ರಾಚಾರ್ಯೆ ರಾಜಶ್ರೀ ರೂಡಗಿ, ಶಿವಪ್ರಸಾದ ಸೂಳಿಭಾವಿ ಇದ್ದರು.

ಟೊಯೋಟಾ ಕಿರ್ಲೊಸ್ಕರ್ ಮೋಟರ್ಸ್ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ನಾಗವೇಣಿ ಹಾಗೂ ಮಂಜುನಾಥ ಅಭ್ಯರ್ಥಿಗಳ ನೇರ ಸಂದರ್ಶನ ನಡೆಸಿದರು. ವಿವಿಧ ಐಟಿಐಗಳಿಂದ ಸುಮಾರು 50 ಅಭ್ಯರ್ಥಿಗಳಲ್ಲಿ 35 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ