Traffic stopped for about 6 km

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ತಾಳಿಕೋಟೆ: ಡೋಣಿ ನದಿಯ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ ಜಲಾವೃತವಾಗಿರುವದು ಒಂದು ಕಡೆಯಾದರೆ ಹಡಗಿನಾಳ ಗ್ರಾಮದ ಮೂಲಕ ಮೂಲಕ ಸಂಚರಿಸುವ ಮೂಕೀಹಾಳ ಗ್ರಾಮದ ಹತ್ತಿರದ ಹಳ್ಳದಲ್ಲಿಯೂ ಶುಕ್ರವಾರ ಸಾಯಂಕಾಲ ಪ್ರವಾಹದ ಉಕ್ಕಿ ಬಂದಿದ್ದರಿಂದ ಸಂಪೂರ್ಣ ಸಂಚಾರ ವ್ಯವಸ್ಥೆಯೇ ಕಡಿತಗೊಂಡ ಪರಿಣಾಮ ತಾಳಿಕೋಟೆಯಿಂದ ಮೂಕೀಹಾಳ ಗ್ರಾಮದ ಹಳ್ಳದ ವರೆಗಿನ 6 ಕೀಲೋ ಮೀಟರ್ ವಾಹನಗಳ ದಟ್ಟನೆ ನಿಂತಲ್ಲೇ ನಿಂತುಕೊಂಡಿವೆ.

ವಿಜಯಪುರ ಹಾಗೂ ಮುದ್ದೇಬಿಹಾಳ ಮಾರ್ಗದ ಕಡೆಯಿಂದ ಆಗಮಿಸಿದ ವಾಹನಗಳೂ ಸಹ ಸುಮಾರು 5 ಕೀಲೋ ಮೀಟರ್‌ವರೆಗೆ ನಿಂತಿದ್ದರೆ ಇತ್ತ ಮಿಣಜಗಿ ಕಡೆಯ 3 ಕೀಲೋ ಮೀಟರ್ ವರೆಗೆ ವಾಹನಗಳು ನಿಂತುಕೊಂಡಿದ್ದವು.

ಕೆಲವರು ಈ ಸಂಚಾರ ಸಂಪರ್ಕ ಕಡಿತಗೊಂಡಿರುವ ಸುದ್ದಿಯನ್ನು ಅರೀತುಕೊಂಡ ಖಾಸಗಿ ವಾಹನದೊಂದಿಗೆ ಸುಮಾರು 80 ಕೀಲೋ ಮೀಟರ್ ಅಂತರದ ಕೊಡೇಕಲ್ಲ, ನಾರಾಯಣಪೂರ, ನಾಲತವಾಡ ಮೂಲಕ ಮುದ್ದೇಬಿಹಾಳದ ಸಂಪರ್ಕವನ್ನು ಪಡೆದುಕೊಂಡರೆ ಇನ್ನೂ ಕೆಲವರು ದೇವರ ಹಿಪ್ಪರಗಿ ಮೂಲಕ 140 ಕೀಲೋ ಮೀಟರ್ ಅಂತರದಿಂದ ವಿಜಯಪುರ ನಗರವನ್ನು ಸಂಪರ್ಕಕ್ಕೆ ಪಡೆದುಕೊಂಡರು.

ಈ ಪ್ರವಾಹದ ದಟ್ಟನೆ ಅರೀಯದೇ ಆಗಮಿಸಿದ್ದ ಮುದ್ದೇಬಿಹಾಳದ ನ್ಯಾಯವಾದಿಗಳಾದ ಎಂ.ಎನ್.ಯರಗಲ್ಲ, ಪಿ.ಬಿ.ಜಾಧವ, ಎಸ್.ಸಿ.ಹಿರೇಮಠ, ಎನ್.ಆರ್.ಮೋಕಾಸಿ ಅವರು ಸುಮಾರು 80 ಕೀಲೋ ಮೀಟರ್ ಅಂತರದಿಂದ ಮುದ್ದೇಬಿಹಾಳಕ್ಕೆ ತೆರಳಿದರಲ್ಲದೇ ಈ ರಸ್ತೆ ಸಂಪರ್ಕ ಚ್ಯಾಲ ಇದ್ದರೆ ಕೇವಲ 30 ಕೀಲೋ ಮೀಟರ್‌ದಲ್ಲಿ ಮುದ್ದೇಬಿಹಾಳಕ್ಕೆ ಹೋಗುತ್ತಿದ್ದೇವೆಂದು ಪತ್ರಿಕೆಯೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರಲ್ಲದೇ ಈ ನದಿಗೆ ಮೇಲ್ಮಟ್ಟದ ಸೇತುವೆಯನ್ನು ತ್ವರಿತಗತಿಯಲ್ಲಿ ನಿರ್ಮಾಣ ಮಾಡಿ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು