Traffic stopped for about 6 km

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ತಾಳಿಕೋಟೆ: ಡೋಣಿ ನದಿಯ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ ಜಲಾವೃತವಾಗಿರುವದು ಒಂದು ಕಡೆಯಾದರೆ ಹಡಗಿನಾಳ ಗ್ರಾಮದ ಮೂಲಕ ಮೂಲಕ ಸಂಚರಿಸುವ ಮೂಕೀಹಾಳ ಗ್ರಾಮದ ಹತ್ತಿರದ ಹಳ್ಳದಲ್ಲಿಯೂ ಶುಕ್ರವಾರ ಸಾಯಂಕಾಲ ಪ್ರವಾಹದ ಉಕ್ಕಿ ಬಂದಿದ್ದರಿಂದ ಸಂಪೂರ್ಣ ಸಂಚಾರ ವ್ಯವಸ್ಥೆಯೇ ಕಡಿತಗೊಂಡ ಪರಿಣಾಮ ತಾಳಿಕೋಟೆಯಿಂದ ಮೂಕೀಹಾಳ ಗ್ರಾಮದ ಹಳ್ಳದ ವರೆಗಿನ 6 ಕೀಲೋ ಮೀಟರ್ ವಾಹನಗಳ ದಟ್ಟನೆ ನಿಂತಲ್ಲೇ ನಿಂತುಕೊಂಡಿವೆ.

ವಿಜಯಪುರ ಹಾಗೂ ಮುದ್ದೇಬಿಹಾಳ ಮಾರ್ಗದ ಕಡೆಯಿಂದ ಆಗಮಿಸಿದ ವಾಹನಗಳೂ ಸಹ ಸುಮಾರು 5 ಕೀಲೋ ಮೀಟರ್‌ವರೆಗೆ ನಿಂತಿದ್ದರೆ ಇತ್ತ ಮಿಣಜಗಿ ಕಡೆಯ 3 ಕೀಲೋ ಮೀಟರ್ ವರೆಗೆ ವಾಹನಗಳು ನಿಂತುಕೊಂಡಿದ್ದವು.

ಕೆಲವರು ಈ ಸಂಚಾರ ಸಂಪರ್ಕ ಕಡಿತಗೊಂಡಿರುವ ಸುದ್ದಿಯನ್ನು ಅರೀತುಕೊಂಡ ಖಾಸಗಿ ವಾಹನದೊಂದಿಗೆ ಸುಮಾರು 80 ಕೀಲೋ ಮೀಟರ್ ಅಂತರದ ಕೊಡೇಕಲ್ಲ, ನಾರಾಯಣಪೂರ, ನಾಲತವಾಡ ಮೂಲಕ ಮುದ್ದೇಬಿಹಾಳದ ಸಂಪರ್ಕವನ್ನು ಪಡೆದುಕೊಂಡರೆ ಇನ್ನೂ ಕೆಲವರು ದೇವರ ಹಿಪ್ಪರಗಿ ಮೂಲಕ 140 ಕೀಲೋ ಮೀಟರ್ ಅಂತರದಿಂದ ವಿಜಯಪುರ ನಗರವನ್ನು ಸಂಪರ್ಕಕ್ಕೆ ಪಡೆದುಕೊಂಡರು.

ಈ ಪ್ರವಾಹದ ದಟ್ಟನೆ ಅರೀಯದೇ ಆಗಮಿಸಿದ್ದ ಮುದ್ದೇಬಿಹಾಳದ ನ್ಯಾಯವಾದಿಗಳಾದ ಎಂ.ಎನ್.ಯರಗಲ್ಲ, ಪಿ.ಬಿ.ಜಾಧವ, ಎಸ್.ಸಿ.ಹಿರೇಮಠ, ಎನ್.ಆರ್.ಮೋಕಾಸಿ ಅವರು ಸುಮಾರು 80 ಕೀಲೋ ಮೀಟರ್ ಅಂತರದಿಂದ ಮುದ್ದೇಬಿಹಾಳಕ್ಕೆ ತೆರಳಿದರಲ್ಲದೇ ಈ ರಸ್ತೆ ಸಂಪರ್ಕ ಚ್ಯಾಲ ಇದ್ದರೆ ಕೇವಲ 30 ಕೀಲೋ ಮೀಟರ್‌ದಲ್ಲಿ ಮುದ್ದೇಬಿಹಾಳಕ್ಕೆ ಹೋಗುತ್ತಿದ್ದೇವೆಂದು ಪತ್ರಿಕೆಯೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರಲ್ಲದೇ ಈ ನದಿಗೆ ಮೇಲ್ಮಟ್ಟದ ಸೇತುವೆಯನ್ನು ತ್ವರಿತಗತಿಯಲ್ಲಿ ನಿರ್ಮಾಣ ಮಾಡಿ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ