Traffic stopped for about 6 km

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ತಾಳಿಕೋಟೆ: ಡೋಣಿ ನದಿಯ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ ಜಲಾವೃತವಾಗಿರುವದು ಒಂದು ಕಡೆಯಾದರೆ ಹಡಗಿನಾಳ ಗ್ರಾಮದ ಮೂಲಕ ಮೂಲಕ ಸಂಚರಿಸುವ ಮೂಕೀಹಾಳ ಗ್ರಾಮದ ಹತ್ತಿರದ ಹಳ್ಳದಲ್ಲಿಯೂ ಶುಕ್ರವಾರ ಸಾಯಂಕಾಲ ಪ್ರವಾಹದ ಉಕ್ಕಿ ಬಂದಿದ್ದರಿಂದ ಸಂಪೂರ್ಣ ಸಂಚಾರ ವ್ಯವಸ್ಥೆಯೇ ಕಡಿತಗೊಂಡ ಪರಿಣಾಮ ತಾಳಿಕೋಟೆಯಿಂದ ಮೂಕೀಹಾಳ ಗ್ರಾಮದ ಹಳ್ಳದ ವರೆಗಿನ 6 ಕೀಲೋ ಮೀಟರ್ ವಾಹನಗಳ ದಟ್ಟನೆ ನಿಂತಲ್ಲೇ ನಿಂತುಕೊಂಡಿವೆ.

ವಿಜಯಪುರ ಹಾಗೂ ಮುದ್ದೇಬಿಹಾಳ ಮಾರ್ಗದ ಕಡೆಯಿಂದ ಆಗಮಿಸಿದ ವಾಹನಗಳೂ ಸಹ ಸುಮಾರು 5 ಕೀಲೋ ಮೀಟರ್‌ವರೆಗೆ ನಿಂತಿದ್ದರೆ ಇತ್ತ ಮಿಣಜಗಿ ಕಡೆಯ 3 ಕೀಲೋ ಮೀಟರ್ ವರೆಗೆ ವಾಹನಗಳು ನಿಂತುಕೊಂಡಿದ್ದವು.

ಕೆಲವರು ಈ ಸಂಚಾರ ಸಂಪರ್ಕ ಕಡಿತಗೊಂಡಿರುವ ಸುದ್ದಿಯನ್ನು ಅರೀತುಕೊಂಡ ಖಾಸಗಿ ವಾಹನದೊಂದಿಗೆ ಸುಮಾರು 80 ಕೀಲೋ ಮೀಟರ್ ಅಂತರದ ಕೊಡೇಕಲ್ಲ, ನಾರಾಯಣಪೂರ, ನಾಲತವಾಡ ಮೂಲಕ ಮುದ್ದೇಬಿಹಾಳದ ಸಂಪರ್ಕವನ್ನು ಪಡೆದುಕೊಂಡರೆ ಇನ್ನೂ ಕೆಲವರು ದೇವರ ಹಿಪ್ಪರಗಿ ಮೂಲಕ 140 ಕೀಲೋ ಮೀಟರ್ ಅಂತರದಿಂದ ವಿಜಯಪುರ ನಗರವನ್ನು ಸಂಪರ್ಕಕ್ಕೆ ಪಡೆದುಕೊಂಡರು.

ಈ ಪ್ರವಾಹದ ದಟ್ಟನೆ ಅರೀಯದೇ ಆಗಮಿಸಿದ್ದ ಮುದ್ದೇಬಿಹಾಳದ ನ್ಯಾಯವಾದಿಗಳಾದ ಎಂ.ಎನ್.ಯರಗಲ್ಲ, ಪಿ.ಬಿ.ಜಾಧವ, ಎಸ್.ಸಿ.ಹಿರೇಮಠ, ಎನ್.ಆರ್.ಮೋಕಾಸಿ ಅವರು ಸುಮಾರು 80 ಕೀಲೋ ಮೀಟರ್ ಅಂತರದಿಂದ ಮುದ್ದೇಬಿಹಾಳಕ್ಕೆ ತೆರಳಿದರಲ್ಲದೇ ಈ ರಸ್ತೆ ಸಂಪರ್ಕ ಚ್ಯಾಲ ಇದ್ದರೆ ಕೇವಲ 30 ಕೀಲೋ ಮೀಟರ್‌ದಲ್ಲಿ ಮುದ್ದೇಬಿಹಾಳಕ್ಕೆ ಹೋಗುತ್ತಿದ್ದೇವೆಂದು ಪತ್ರಿಕೆಯೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರಲ್ಲದೇ ಈ ನದಿಗೆ ಮೇಲ್ಮಟ್ಟದ ಸೇತುವೆಯನ್ನು ತ್ವರಿತಗತಿಯಲ್ಲಿ ನಿರ್ಮಾಣ ಮಾಡಿ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ