Traffic stopped for about 6 km

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ತಾಳಿಕೋಟೆ: ಡೋಣಿ ನದಿಯ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ ಜಲಾವೃತವಾಗಿರುವದು ಒಂದು ಕಡೆಯಾದರೆ ಹಡಗಿನಾಳ ಗ್ರಾಮದ ಮೂಲಕ ಮೂಲಕ ಸಂಚರಿಸುವ ಮೂಕೀಹಾಳ ಗ್ರಾಮದ ಹತ್ತಿರದ ಹಳ್ಳದಲ್ಲಿಯೂ ಶುಕ್ರವಾರ ಸಾಯಂಕಾಲ ಪ್ರವಾಹದ ಉಕ್ಕಿ ಬಂದಿದ್ದರಿಂದ ಸಂಪೂರ್ಣ ಸಂಚಾರ ವ್ಯವಸ್ಥೆಯೇ ಕಡಿತಗೊಂಡ ಪರಿಣಾಮ ತಾಳಿಕೋಟೆಯಿಂದ ಮೂಕೀಹಾಳ ಗ್ರಾಮದ ಹಳ್ಳದ ವರೆಗಿನ 6 ಕೀಲೋ ಮೀಟರ್ ವಾಹನಗಳ ದಟ್ಟನೆ ನಿಂತಲ್ಲೇ ನಿಂತುಕೊಂಡಿವೆ.

ವಿಜಯಪುರ ಹಾಗೂ ಮುದ್ದೇಬಿಹಾಳ ಮಾರ್ಗದ ಕಡೆಯಿಂದ ಆಗಮಿಸಿದ ವಾಹನಗಳೂ ಸಹ ಸುಮಾರು 5 ಕೀಲೋ ಮೀಟರ್‌ವರೆಗೆ ನಿಂತಿದ್ದರೆ ಇತ್ತ ಮಿಣಜಗಿ ಕಡೆಯ 3 ಕೀಲೋ ಮೀಟರ್ ವರೆಗೆ ವಾಹನಗಳು ನಿಂತುಕೊಂಡಿದ್ದವು.

ಕೆಲವರು ಈ ಸಂಚಾರ ಸಂಪರ್ಕ ಕಡಿತಗೊಂಡಿರುವ ಸುದ್ದಿಯನ್ನು ಅರೀತುಕೊಂಡ ಖಾಸಗಿ ವಾಹನದೊಂದಿಗೆ ಸುಮಾರು 80 ಕೀಲೋ ಮೀಟರ್ ಅಂತರದ ಕೊಡೇಕಲ್ಲ, ನಾರಾಯಣಪೂರ, ನಾಲತವಾಡ ಮೂಲಕ ಮುದ್ದೇಬಿಹಾಳದ ಸಂಪರ್ಕವನ್ನು ಪಡೆದುಕೊಂಡರೆ ಇನ್ನೂ ಕೆಲವರು ದೇವರ ಹಿಪ್ಪರಗಿ ಮೂಲಕ 140 ಕೀಲೋ ಮೀಟರ್ ಅಂತರದಿಂದ ವಿಜಯಪುರ ನಗರವನ್ನು ಸಂಪರ್ಕಕ್ಕೆ ಪಡೆದುಕೊಂಡರು.

ಈ ಪ್ರವಾಹದ ದಟ್ಟನೆ ಅರೀಯದೇ ಆಗಮಿಸಿದ್ದ ಮುದ್ದೇಬಿಹಾಳದ ನ್ಯಾಯವಾದಿಗಳಾದ ಎಂ.ಎನ್.ಯರಗಲ್ಲ, ಪಿ.ಬಿ.ಜಾಧವ, ಎಸ್.ಸಿ.ಹಿರೇಮಠ, ಎನ್.ಆರ್.ಮೋಕಾಸಿ ಅವರು ಸುಮಾರು 80 ಕೀಲೋ ಮೀಟರ್ ಅಂತರದಿಂದ ಮುದ್ದೇಬಿಹಾಳಕ್ಕೆ ತೆರಳಿದರಲ್ಲದೇ ಈ ರಸ್ತೆ ಸಂಪರ್ಕ ಚ್ಯಾಲ ಇದ್ದರೆ ಕೇವಲ 30 ಕೀಲೋ ಮೀಟರ್‌ದಲ್ಲಿ ಮುದ್ದೇಬಿಹಾಳಕ್ಕೆ ಹೋಗುತ್ತಿದ್ದೇವೆಂದು ಪತ್ರಿಕೆಯೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರಲ್ಲದೇ ಈ ನದಿಗೆ ಮೇಲ್ಮಟ್ಟದ ಸೇತುವೆಯನ್ನು ತ್ವರಿತಗತಿಯಲ್ಲಿ ನಿರ್ಮಾಣ ಮಾಡಿ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ