Traffic stopped for about 6 km

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ತಾಳಿಕೋಟೆ: ಡೋಣಿ ನದಿಯ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ ಜಲಾವೃತವಾಗಿರುವದು ಒಂದು ಕಡೆಯಾದರೆ ಹಡಗಿನಾಳ ಗ್ರಾಮದ ಮೂಲಕ ಮೂಲಕ ಸಂಚರಿಸುವ ಮೂಕೀಹಾಳ ಗ್ರಾಮದ ಹತ್ತಿರದ ಹಳ್ಳದಲ್ಲಿಯೂ ಶುಕ್ರವಾರ ಸಾಯಂಕಾಲ ಪ್ರವಾಹದ ಉಕ್ಕಿ ಬಂದಿದ್ದರಿಂದ ಸಂಪೂರ್ಣ ಸಂಚಾರ ವ್ಯವಸ್ಥೆಯೇ ಕಡಿತಗೊಂಡ ಪರಿಣಾಮ ತಾಳಿಕೋಟೆಯಿಂದ ಮೂಕೀಹಾಳ ಗ್ರಾಮದ ಹಳ್ಳದ ವರೆಗಿನ 6 ಕೀಲೋ ಮೀಟರ್ ವಾಹನಗಳ ದಟ್ಟನೆ ನಿಂತಲ್ಲೇ ನಿಂತುಕೊಂಡಿವೆ.

ವಿಜಯಪುರ ಹಾಗೂ ಮುದ್ದೇಬಿಹಾಳ ಮಾರ್ಗದ ಕಡೆಯಿಂದ ಆಗಮಿಸಿದ ವಾಹನಗಳೂ ಸಹ ಸುಮಾರು 5 ಕೀಲೋ ಮೀಟರ್‌ವರೆಗೆ ನಿಂತಿದ್ದರೆ ಇತ್ತ ಮಿಣಜಗಿ ಕಡೆಯ 3 ಕೀಲೋ ಮೀಟರ್ ವರೆಗೆ ವಾಹನಗಳು ನಿಂತುಕೊಂಡಿದ್ದವು.

ಕೆಲವರು ಈ ಸಂಚಾರ ಸಂಪರ್ಕ ಕಡಿತಗೊಂಡಿರುವ ಸುದ್ದಿಯನ್ನು ಅರೀತುಕೊಂಡ ಖಾಸಗಿ ವಾಹನದೊಂದಿಗೆ ಸುಮಾರು 80 ಕೀಲೋ ಮೀಟರ್ ಅಂತರದ ಕೊಡೇಕಲ್ಲ, ನಾರಾಯಣಪೂರ, ನಾಲತವಾಡ ಮೂಲಕ ಮುದ್ದೇಬಿಹಾಳದ ಸಂಪರ್ಕವನ್ನು ಪಡೆದುಕೊಂಡರೆ ಇನ್ನೂ ಕೆಲವರು ದೇವರ ಹಿಪ್ಪರಗಿ ಮೂಲಕ 140 ಕೀಲೋ ಮೀಟರ್ ಅಂತರದಿಂದ ವಿಜಯಪುರ ನಗರವನ್ನು ಸಂಪರ್ಕಕ್ಕೆ ಪಡೆದುಕೊಂಡರು.

ಈ ಪ್ರವಾಹದ ದಟ್ಟನೆ ಅರೀಯದೇ ಆಗಮಿಸಿದ್ದ ಮುದ್ದೇಬಿಹಾಳದ ನ್ಯಾಯವಾದಿಗಳಾದ ಎಂ.ಎನ್.ಯರಗಲ್ಲ, ಪಿ.ಬಿ.ಜಾಧವ, ಎಸ್.ಸಿ.ಹಿರೇಮಠ, ಎನ್.ಆರ್.ಮೋಕಾಸಿ ಅವರು ಸುಮಾರು 80 ಕೀಲೋ ಮೀಟರ್ ಅಂತರದಿಂದ ಮುದ್ದೇಬಿಹಾಳಕ್ಕೆ ತೆರಳಿದರಲ್ಲದೇ ಈ ರಸ್ತೆ ಸಂಪರ್ಕ ಚ್ಯಾಲ ಇದ್ದರೆ ಕೇವಲ 30 ಕೀಲೋ ಮೀಟರ್‌ದಲ್ಲಿ ಮುದ್ದೇಬಿಹಾಳಕ್ಕೆ ಹೋಗುತ್ತಿದ್ದೇವೆಂದು ಪತ್ರಿಕೆಯೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರಲ್ಲದೇ ಈ ನದಿಗೆ ಮೇಲ್ಮಟ್ಟದ ಸೇತುವೆಯನ್ನು ತ್ವರಿತಗತಿಯಲ್ಲಿ ನಿರ್ಮಾಣ ಮಾಡಿ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ