Traffic stopped for about 6 km

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ತಾಳಿಕೋಟೆ: ಡೋಣಿ ನದಿಯ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ ಜಲಾವೃತವಾಗಿರುವದು ಒಂದು ಕಡೆಯಾದರೆ ಹಡಗಿನಾಳ ಗ್ರಾಮದ ಮೂಲಕ ಮೂಲಕ ಸಂಚರಿಸುವ ಮೂಕೀಹಾಳ ಗ್ರಾಮದ ಹತ್ತಿರದ ಹಳ್ಳದಲ್ಲಿಯೂ ಶುಕ್ರವಾರ ಸಾಯಂಕಾಲ ಪ್ರವಾಹದ ಉಕ್ಕಿ ಬಂದಿದ್ದರಿಂದ ಸಂಪೂರ್ಣ ಸಂಚಾರ ವ್ಯವಸ್ಥೆಯೇ ಕಡಿತಗೊಂಡ ಪರಿಣಾಮ ತಾಳಿಕೋಟೆಯಿಂದ ಮೂಕೀಹಾಳ ಗ್ರಾಮದ ಹಳ್ಳದ ವರೆಗಿನ 6 ಕೀಲೋ ಮೀಟರ್ ವಾಹನಗಳ ದಟ್ಟನೆ ನಿಂತಲ್ಲೇ ನಿಂತುಕೊಂಡಿವೆ.

ವಿಜಯಪುರ ಹಾಗೂ ಮುದ್ದೇಬಿಹಾಳ ಮಾರ್ಗದ ಕಡೆಯಿಂದ ಆಗಮಿಸಿದ ವಾಹನಗಳೂ ಸಹ ಸುಮಾರು 5 ಕೀಲೋ ಮೀಟರ್‌ವರೆಗೆ ನಿಂತಿದ್ದರೆ ಇತ್ತ ಮಿಣಜಗಿ ಕಡೆಯ 3 ಕೀಲೋ ಮೀಟರ್ ವರೆಗೆ ವಾಹನಗಳು ನಿಂತುಕೊಂಡಿದ್ದವು.

ಕೆಲವರು ಈ ಸಂಚಾರ ಸಂಪರ್ಕ ಕಡಿತಗೊಂಡಿರುವ ಸುದ್ದಿಯನ್ನು ಅರೀತುಕೊಂಡ ಖಾಸಗಿ ವಾಹನದೊಂದಿಗೆ ಸುಮಾರು 80 ಕೀಲೋ ಮೀಟರ್ ಅಂತರದ ಕೊಡೇಕಲ್ಲ, ನಾರಾಯಣಪೂರ, ನಾಲತವಾಡ ಮೂಲಕ ಮುದ್ದೇಬಿಹಾಳದ ಸಂಪರ್ಕವನ್ನು ಪಡೆದುಕೊಂಡರೆ ಇನ್ನೂ ಕೆಲವರು ದೇವರ ಹಿಪ್ಪರಗಿ ಮೂಲಕ 140 ಕೀಲೋ ಮೀಟರ್ ಅಂತರದಿಂದ ವಿಜಯಪುರ ನಗರವನ್ನು ಸಂಪರ್ಕಕ್ಕೆ ಪಡೆದುಕೊಂಡರು.

ಈ ಪ್ರವಾಹದ ದಟ್ಟನೆ ಅರೀಯದೇ ಆಗಮಿಸಿದ್ದ ಮುದ್ದೇಬಿಹಾಳದ ನ್ಯಾಯವಾದಿಗಳಾದ ಎಂ.ಎನ್.ಯರಗಲ್ಲ, ಪಿ.ಬಿ.ಜಾಧವ, ಎಸ್.ಸಿ.ಹಿರೇಮಠ, ಎನ್.ಆರ್.ಮೋಕಾಸಿ ಅವರು ಸುಮಾರು 80 ಕೀಲೋ ಮೀಟರ್ ಅಂತರದಿಂದ ಮುದ್ದೇಬಿಹಾಳಕ್ಕೆ ತೆರಳಿದರಲ್ಲದೇ ಈ ರಸ್ತೆ ಸಂಪರ್ಕ ಚ್ಯಾಲ ಇದ್ದರೆ ಕೇವಲ 30 ಕೀಲೋ ಮೀಟರ್‌ದಲ್ಲಿ ಮುದ್ದೇಬಿಹಾಳಕ್ಕೆ ಹೋಗುತ್ತಿದ್ದೇವೆಂದು ಪತ್ರಿಕೆಯೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರಲ್ಲದೇ ಈ ನದಿಗೆ ಮೇಲ್ಮಟ್ಟದ ಸೇತುವೆಯನ್ನು ತ್ವರಿತಗತಿಯಲ್ಲಿ ನಿರ್ಮಾಣ ಮಾಡಿ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ