Tragedy: A strange incident in Thotaganti village.. A missing woman was found in a well

Tragedy: ತೋಟಗಂಟಿ ಗ್ರಾಮದಲ್ಲೊಂದು ವಿಚಿತ್ರ ಘಟನೆ.. ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಪತ್ತೆ!

Tragedy: ತೋಟಗಂಟಿ ಗ್ರಾಮದಲ್ಲೊಂದು ವಿಚಿತ್ರ ಘಟನೆ.. ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಪತ್ತೆ!

ಗದಗ: ಜಿಲ್ಲೆಯ ರೋಣ ತಾಲೂಕಿನ ತೋಟಗಂಟಿ ಗ್ರಾಮದಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆ ಅದೇ ಗ್ರಾಮದ ಹೊಲದಲ್ಲಿನ ನೀರಿಲ್ಲದ ಹಳೆ ಬಾವಿಯಲ್ಲಿ ಮೂರು ದಿನಗಳ ನಂತರ ಪತ್ತೆಯಾಗಿದ್ದಾರೆ. (Tragedy)

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸದ್ಯ, ಮಹಿಳೆಯನ್ನು ರಕ್ಷಿಸಿ ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ತೋಟಗಂಟಿ ಗ್ರಾಮದಿಂದ ಕೋಚಲಾಪುರಕ್ಕೆ ಹೋಗುವ ಮಾರ್ಗದಲ್ಲಿರುವ ಮನೆಯಲ್ಲಿ ವಾಸವಿದ್ದ ಪಾರ್ವತಿ– ವೀರಯ್ಯ ಕಲ್ಮಠ ದಂಪತಿಗೆ ಆರು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಆಗಸ್ಟ್‌ 20ರಂದು ಪಾರ್ವತಿ ನಾಪತ್ತೆಯಾಗಿದ್ದರು. ಗಂಡ ಹಾಗೂ ಕುಟುಂಬಸ್ಥರು ಎಲ್ಲೆಡೆ ಹುಡುಕಿ, ಎಲ್ಲಿಯೂ ಸಿಗದೆ ಇದ್ದಾಗ ನರೇಗಲ್‌ ಪೊಲೀಸ್‌ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು ದೂರು ನೀಡಿದ್ದರು.

ಆಗಸ್ಟ್ 22ರಂದು ಗ್ರಾಮದಿಂದ ಅಂದಾಜು 1 ಕಿ.ಮೀ. ದೂರದ ಬಾವಿಯಲ್ಲಿ ಮಹಿಳೆಯೊಬ್ಬರು ಅರಚುತ್ತಿರುವುದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕರಿಗೆ ಕೇಳಿಸಿದೆ. ಆಗ ಅವರು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ, ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ.

ಆ.20ರಂದು ಬೆಳಿಗ್ಗೆ 5ರ ಸುಮಾರಿಗೆ ಮನೆ ಮುಂದೆ ನಿಂತಿದ್ದಾಗ ವಯಸ್ಕ ಮಹಿಳೆಯೊಬ್ಬರು ನನ್ನ ಕುತ್ತಿಗೆ ಭಾಗ ಹಿಡಿದು ಮನೆ ಬಿಟ್ಟು ಬರುವಂತೆ ಬಲವಂತ ಮಾಡಿದಳು. ಕೈಬಳೆ, ಕಾಲುಂಗರ ನೀಡುವಂತೆ ಒತ್ತಾಯಿಸಿದಳು. ಬಳಿಕ ನನ್ನನ್ನು ಎಳೆದುಕೊಂಡು ಬಂದು ಬಾವಿಗೆ ತಳ್ಳಿದಳು. ಬಾವಿಗೆ ಬಿದ್ದ ಮಾರನೇ ದಿನ ನನಗೆ ಪ್ರಜ್ಞೆ ಬಂದಿದೆ. ಆಗ ಕಿರುಚಿದರೂ ಯಾರೂ ಸಹಾಯಕ್ಕೆ ಬರಲಿಲ್ಲ. ಆ. 22ರಂದು ಧ್ವನಿ ಕೇಳಿದ ಜನರು ನನ್ನ ಕಾಪಾಡಿದ್ದಾರೆ ಎಂದು ತೊಂದರೆಗೆ ಒಳಗಾದ ಮಹಿಳೆ ಮಾಹಿತಿ ನೀಡಿದ್ದಾರೆ.

ಕಾಣೆಯಾದ ನಂತರ ಹೊಲ, ಮನಿ, ಊರೂರು ಹುಡುಕಿದ್ದೆವು. ಎಲ್ಲಿಯೂ ಸಿಗದ ಕಾರಣ ದೂರು ಕೊಟ್ಟಿದ್ದೆವು. ಬಾವಿಯಲ್ಲಿ ಬಿದ್ದು ರಕ್ಷಣೆಗೆ ಕೂಗುತ್ತಿರುವ ವಿಷಯ ಗೊತ್ತಾದ ನಂತರ ಆಕೆಯನ್ನು ರಕ್ಷಿಸಿ, ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೇವೆ ಎಂದು ಮಹಿಳೆ
ಯ ಪತಿ ವೀರಯ್ಯ ಮಾಹಿತಿ ನೀಡಿದರು.

ಇದನ್ನೂ ಓದಿ: Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

ಈ ಕುರಿತು ನಮ್ಮಲ್ಲಿ ಪ್ರಕರಣ ದಾಖಲಾಗಿಲ್ಲ. ಆದರೆ, ಎಂ.ಎಲ್.ಸಿ ಆಗಿದೆ. ಮಹಿಳೆಯನ್ನು ಬಾವಿಯಿಂದ ಹೊರಗೆ ತೆಗೆದಾಗ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗದಗಕ್ಕೆ ಕರೆದುಕೊಂಡು ಹೋಗಿದ್ದಾರೆ. ವಿಚಾರಣೆ ನಡೆಸಿ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುವುದು ಎಂದು ನರೇಗಲ್‌ ಪೊಲೀಸ್‌ ಠಾಣೆ ಎಸ್‌ಐ ಐಶ್ವರ್ಯ ನಾಗರಾಳ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ