Tragedy: A strange incident in Thotaganti village.. A missing woman was found in a well

Tragedy: ತೋಟಗಂಟಿ ಗ್ರಾಮದಲ್ಲೊಂದು ವಿಚಿತ್ರ ಘಟನೆ.. ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಪತ್ತೆ!

Tragedy: ತೋಟಗಂಟಿ ಗ್ರಾಮದಲ್ಲೊಂದು ವಿಚಿತ್ರ ಘಟನೆ.. ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಪತ್ತೆ!

ಗದಗ: ಜಿಲ್ಲೆಯ ರೋಣ ತಾಲೂಕಿನ ತೋಟಗಂಟಿ ಗ್ರಾಮದಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆ ಅದೇ ಗ್ರಾಮದ ಹೊಲದಲ್ಲಿನ ನೀರಿಲ್ಲದ ಹಳೆ ಬಾವಿಯಲ್ಲಿ ಮೂರು ದಿನಗಳ ನಂತರ ಪತ್ತೆಯಾಗಿದ್ದಾರೆ. (Tragedy)

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸದ್ಯ, ಮಹಿಳೆಯನ್ನು ರಕ್ಷಿಸಿ ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ತೋಟಗಂಟಿ ಗ್ರಾಮದಿಂದ ಕೋಚಲಾಪುರಕ್ಕೆ ಹೋಗುವ ಮಾರ್ಗದಲ್ಲಿರುವ ಮನೆಯಲ್ಲಿ ವಾಸವಿದ್ದ ಪಾರ್ವತಿ– ವೀರಯ್ಯ ಕಲ್ಮಠ ದಂಪತಿಗೆ ಆರು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಆಗಸ್ಟ್‌ 20ರಂದು ಪಾರ್ವತಿ ನಾಪತ್ತೆಯಾಗಿದ್ದರು. ಗಂಡ ಹಾಗೂ ಕುಟುಂಬಸ್ಥರು ಎಲ್ಲೆಡೆ ಹುಡುಕಿ, ಎಲ್ಲಿಯೂ ಸಿಗದೆ ಇದ್ದಾಗ ನರೇಗಲ್‌ ಪೊಲೀಸ್‌ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು ದೂರು ನೀಡಿದ್ದರು.

ಆಗಸ್ಟ್ 22ರಂದು ಗ್ರಾಮದಿಂದ ಅಂದಾಜು 1 ಕಿ.ಮೀ. ದೂರದ ಬಾವಿಯಲ್ಲಿ ಮಹಿಳೆಯೊಬ್ಬರು ಅರಚುತ್ತಿರುವುದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕರಿಗೆ ಕೇಳಿಸಿದೆ. ಆಗ ಅವರು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ, ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ.

ಆ.20ರಂದು ಬೆಳಿಗ್ಗೆ 5ರ ಸುಮಾರಿಗೆ ಮನೆ ಮುಂದೆ ನಿಂತಿದ್ದಾಗ ವಯಸ್ಕ ಮಹಿಳೆಯೊಬ್ಬರು ನನ್ನ ಕುತ್ತಿಗೆ ಭಾಗ ಹಿಡಿದು ಮನೆ ಬಿಟ್ಟು ಬರುವಂತೆ ಬಲವಂತ ಮಾಡಿದಳು. ಕೈಬಳೆ, ಕಾಲುಂಗರ ನೀಡುವಂತೆ ಒತ್ತಾಯಿಸಿದಳು. ಬಳಿಕ ನನ್ನನ್ನು ಎಳೆದುಕೊಂಡು ಬಂದು ಬಾವಿಗೆ ತಳ್ಳಿದಳು. ಬಾವಿಗೆ ಬಿದ್ದ ಮಾರನೇ ದಿನ ನನಗೆ ಪ್ರಜ್ಞೆ ಬಂದಿದೆ. ಆಗ ಕಿರುಚಿದರೂ ಯಾರೂ ಸಹಾಯಕ್ಕೆ ಬರಲಿಲ್ಲ. ಆ. 22ರಂದು ಧ್ವನಿ ಕೇಳಿದ ಜನರು ನನ್ನ ಕಾಪಾಡಿದ್ದಾರೆ ಎಂದು ತೊಂದರೆಗೆ ಒಳಗಾದ ಮಹಿಳೆ ಮಾಹಿತಿ ನೀಡಿದ್ದಾರೆ.

ಕಾಣೆಯಾದ ನಂತರ ಹೊಲ, ಮನಿ, ಊರೂರು ಹುಡುಕಿದ್ದೆವು. ಎಲ್ಲಿಯೂ ಸಿಗದ ಕಾರಣ ದೂರು ಕೊಟ್ಟಿದ್ದೆವು. ಬಾವಿಯಲ್ಲಿ ಬಿದ್ದು ರಕ್ಷಣೆಗೆ ಕೂಗುತ್ತಿರುವ ವಿಷಯ ಗೊತ್ತಾದ ನಂತರ ಆಕೆಯನ್ನು ರಕ್ಷಿಸಿ, ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೇವೆ ಎಂದು ಮಹಿಳೆ
ಯ ಪತಿ ವೀರಯ್ಯ ಮಾಹಿತಿ ನೀಡಿದರು.

ಇದನ್ನೂ ಓದಿ: Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

ಈ ಕುರಿತು ನಮ್ಮಲ್ಲಿ ಪ್ರಕರಣ ದಾಖಲಾಗಿಲ್ಲ. ಆದರೆ, ಎಂ.ಎಲ್.ಸಿ ಆಗಿದೆ. ಮಹಿಳೆಯನ್ನು ಬಾವಿಯಿಂದ ಹೊರಗೆ ತೆಗೆದಾಗ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗದಗಕ್ಕೆ ಕರೆದುಕೊಂಡು ಹೋಗಿದ್ದಾರೆ. ವಿಚಾರಣೆ ನಡೆಸಿ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುವುದು ಎಂದು ನರೇಗಲ್‌ ಪೊಲೀಸ್‌ ಠಾಣೆ ಎಸ್‌ಐ ಐಶ್ವರ್ಯ ನಾಗರಾಳ ತಿಳಿಸಿದ್ದಾರೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು