Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

ಮಂಡ್ಯ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ (Train accident) ಯುವತಿಯೊಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ನಗರದ ಸ್ವರ್ಣಸಂದ್ರ ನಿವಾಸಿ ನರಸಿಂಹ ಮೂರ್ತಿ ಪುತ್ರಿ, ಚಿನ್ನದ ಪದಕ ವಿಜೇತೆ 24 ವರ್ಷದ ಎನ್.ರಮ್ಯಾ ಮೃತ ಯುವತಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬಿಕಾಂನಲ್ಲಿ ಪ್ರಥಮ ಬ್ಯಾಂಕ್ ಹಾಗೂ ಮೈ ಸೂರಿನ ಮಾನಸ ಗಂಗೋತ್ರಿ ಯಲ್ಲಿ ಎಂಕಾಂನಲ್ಲಿ ದ್ವಿತೀಯ ಬ್ಯಾಂಕ್ ಪಡೆದು ಚಿನ್ನದ ಪದಕ ಗಳಿಸಿದ್ದರು.

ಕಳೆದ 10 ತಿಂಗಳಿಂದ ತಂದೆ ನರಸಿಂಹ ಮೂರ್ತಿ ಅವರೊಂದಿಗೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಚಾರ್ಟಡ್ ಅಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಗುರುವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಹೋದರ ರೈಲ್ವೆ ನಿಲ್ದಾಣಕ್ಕೆ ಮೊದಲು ತಂದೆಯನ್ನು ಬಿಟ್ಟು ನಂತರ ಸಹೋದರಿ ಎನ್.ರಮ್ಯಾ ಅವರನ್ನು ಕರೆತಂದು ಬಿಟ್ಟಿದ್ದಾರೆ. ರೈಲ್ವೆ ಹಳಿ ದಾಟಲು ಹೋದಾಗ ಬೆಂಗಳೂರು ಕಡೆಯಿಂದ ಮೈಸೂರು ಮಾರ್ಗವಾಗಿ ಸಂಚಿರಿಸುತ್ತಿದ್ದ ಹಂಪಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮೈಸೂರಿನಿಂದ ಬೆಂಗಳೂರು ಕಡೆಗೆ ತೆರಳುವ ವಾರಾಣಸಿ ರೈಲು ನಿಲ್ದಾಣಕ್ಕೆ ಬರಲು ಇನ್ನೂ ಹತ್ತು ನಿಮಿಷ ಕಾಲವಕಾಶವಿತ್ತು. ಅದರೂ ರಮ್ಯಾ ಅತುರಾತುರದಿಂದ ರೈಲು ಹಳಿ (Train accident) ದಾಟಲು ಹೋಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಗಳನ್ನು ಕಳೆದುಕೊಂಡ ಕುಟುಂಬದವರ ರೋಧನೆ ಮುಗಿಲು ಮುಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಮಂಡ್ಯ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ